Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...