Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...