Homeಮುಖಪುಟಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

ಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

- Advertisement -
- Advertisement -

ಹಿಂದೆಂದೂ ಕೇಳದ ರೀತಿಯಲ್ಲಿ ಇತ್ತೀಚಿನ ದಿನಗಳಲ್ಲಿ ರೈತ ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿ ಮೂದಲಿಸುವ ಸಂಪ್ರದಾಯ ನಾವು ಕಾಣುತ್ತಿದ್ದೇವೆ. ಇವರು ಹೊಲಕ್ಕೆ ಬೆಂಕಿಹಚ್ಚಿ ನಮ್ಮ ನಗರಗಳನ್ನು ಮಾಲಿನ್ಯಗೊಳಿಸುವ ಅಪರಾಧಿಗಳು, ಬೇಡದ ಭತ್ತ, ಗೋಧಿ ಬೆಳೆದು ಮಣ್ಣಿನ ಫಲವತ್ತತೆ ಮತ್ತು ನೀರನ್ನು ಹಾಳುಗೆಡವುವವರು, ಸೋಮಾರಿ ಸಮುದಾಯದವರು, ಸ್ವಂತ ಬುದ್ಧಿ ಇಲ್ಲದೆ ಇತರರು ಹೇಳಿದ ಹಾಗೆ ನಡೆದುಕೊಳ್ಳುತ್ತಿರುವವರು, ಹೀಗೆಲ್ಲಾ ಕಳೆದ ಒಂದು ವರ್ಷದಿಂದ ನಾವು ಪತ್ರಿಕೆ, ದೃಶ್ಯಮಾಧ್ಯಮಗಳಲ್ಲಿ ನೇರವಾಗಿ ನಿಂದಿಸುವವರನ್ನು ಗಮನಿಸುತ್ತಿದ್ದೇವೆ. ನೇರವಾಗಿ ಏಕೆಂದರೆ, ನಾಗರಿಕರೆನ್ನುವ ಪ್ರಜ್ಞಾವಂತರೆನ್ನುವ ಈ ಸಮುದಾಯಕ್ಕೆ ನೇಗಿಲಯೋಗಿಯ ಬಗ್ಗೆ ಕಿಂಚಿತ್ತಾದರೂ, ಒಳಗಿಂದೊಳಗಾದರೂ ಗೌರವ ಇರಲಿಲ್ಲವೇ ಎಂಬ ಪ್ರಶ್ನೆ ಇತ್ತೀಚೆಗೆ ಏಳುತ್ತಿದೆ. ಅಷ್ಟೇ ಏಕೆ? ಒಟ್ಟಾರೆ ದುಡಿಯುವ ವರ್ಗದ ಬಗ್ಗೆ ’ಅದು ಅವನ ಕರ್ಮ’ ಎಂದೇ ಪರಿಗಣಿಸುವಂತೆ ಈ ವರ್ಗ ಬೆಳೆದಿದೆ.

ಶ್ರೇಣೀಕೃತವರ್ಗದಲ್ಲಿ ಬೆವರಿನ ಹನಿ ಹೆಚ್ಚಾದಂತೆಲ್ಲಾ ಬೈಗುಳ ಮತ್ತು ನಿಂದನೆಗೆ ಒಳಪಟ್ಟಿರುವುದನ್ನು ಗಮನಿಸಬಹುದು. ಇದನ್ನು `ascendancy of respect and descendancy of disrespect in the ladder’ ಎಂದು ಅಂಬೇಡ್ಕರ್ ಗಮನಿಸಿದ್ದರು. ಮಹಾತ್ಮ ಗಾಂಧಿ ರೈತನನ್ನು ಒಬ್ಬ ಖಗೋಳಶಾಸ್ತ್ರಜ್ಞ, ಜೀವಶಾಸ್ತ್ರಜ್ಞ, ಹವಾಮಾನತಜ್ಞ, ಆಹಾರತಜ್ಞ, ಪರಿಸರತಜ್ಞ, ಭೂವಿಜ್ಞಾನಿ ಎಂದೆಲ್ಲಾ ಬಣ್ಣಿಸಿದ್ದರು. ಡಾ.ರಿಚಾರಿಯಾ ಹೇಳುವಂತೆ ನಮ್ಮೊಳಗಿನ ಅತ್ಯಂತ ಪ್ರಜ್ಞಾವಂತ ತಳಿವಿಜ್ಞಾನದ ತಜ್ಞ ಎಂದರೆ ರೈತ ಎಂಬ ಮಾತು ಗಮನಾರ್ಹವಾದದ್ದು. ಆಯುರ್ವೇದ ವೈದ್ಯ ಹಾಗೂ ಗ್ರಂಥಕರ್ತ ಚರಕ ತನ್ನ ’ಚರಕ ಸಂಹಿತ’ದಲ್ಲಿ ಕೆಲವು ಔಷಧೀಯ ಸಸ್ಯಗಳ ಬಗ್ಗೆ ವಿವರಿಸತ್ತಾ, “ಇನ್ನೂ ಹೆಚ್ಚು ತಿಳಿಯಬೇಕಿದ್ದರೆ ಕುರಿ ಮೇಯಿಸುವವರನ್ನು ಕೇಳಿ” ಎನ್ನುತ್ತಾನೆ.

ಸಾಮಾನ್ಯವಾಗಿ ಗ್ರಾಮಾಂತರದ ಉತ್ಪಾದಕ ಮತ್ತು ನಗರದ ಗ್ರಾಹಕ ಎನ್ನುವುದಾಗಿ ಹೇಳುವುದುಂಟು. ಆದರೆ ನೀವು ನಿಜವಾಗಿಯೂ ಆರೋಗ್ಯವಂತರಾಗಿ ಬದುಕಬೇಕಿದ್ದರೆ ನಿಮಗೆ ಒಬ್ಬ ರೈತ ಸ್ನೇಹಿತನಾಗಿರಬೇಕು ಎಂದು ಪರಿಗಣಿಸುತ್ತಾರೆ. ಇದು ಕೇವಲ ಹೊಲ-ಗದ್ದೆಗಳ ನೈಜ ಪರಿಸ್ಥಿತಿಯ ಅರಿವಷ್ಟೇ ಅಲ್ಲ, ತನ್ನ ಅನ್ನದ ಹಿಂದಿನ ದುಡಿದ ಕೈಗಳ ಪರಿಚಯ ಮತ್ತು ಆತ್ಮೀಯತೆ, ನಮ್ಮನ್ನು ಭೌತಿಕವಾಗಿ ಸದೃಢಗೊಳಿಸುವುದಲ್ಲದೆ, ಮಾನಸಿಕವಾಗಿಯೂ ಮತ್ತು ಆಧ್ಯಾತ್ಮಿಕವಾಗಿಯೂ ಕೂಡಾ ಗಟ್ಟಿಗೊಳಿಸಬಲ್ಲುದು. ಬುದ್ಧನ ಕರುಣೆ ಮತ್ತು ಮೈತ್ರಿಗೆ ಈ ಪ್ರಕ್ರಿಯೆಯಿಂದ ಅವಕಾಶವುಂಟು. ಅಮೆರಿಕದಲ್ಲಿ ಇತ್ತೀಚೆಗೆ ಪ್ರತಿಯೊಂದು ನಗರಗಳಲ್ಲಿಯೂ ರೈತರ ಮಾರುಕಟ್ಟೆಗಳಿವೆ. ವಾಷಿಂಗ್‌ಟನ್‌ನಲ್ಲಿ ಹೌಸ್ ಆಫ್ ಕಾಂಗ್ರೆಸ್ ಮತ್ತು ವೈಟ್ ಹೌಸ್ ಅಕ್ಕಪಕ್ಕದಲ್ಲಿಯೇ ರೈತರ ಮಾರುಕಟ್ಟೆಗಳನ್ನು ಗಮನಿಸಬಹುದು. ಇಡೀ ದೇಶದಲ್ಲಿ ಬಂಡವಾಳಶಾಹಿ ವಾಲ್‌ಮಾರ್ಟ್‌ನಂತಹ ದೈತ್ಯ ಸಗಟು ವ್ಯಾಪಾರಿಗಳಿದ್ದರೂ ಸಮುದಾಯ ರೈತರನ್ನು ಬೆಂಬಲಿಸಿ ನೇರವಾಗಿ ರೈತರೊಂದಿಗೆ ಮಾತುಕತೆಯಾಡಿ ತಮಗೆ ಬೇಕಾದ ಹಣ್ಣುಹಂಪಲನ್ನು ಅವರಿಂದ ಕೊಂಡುಕೊಳ್ಳುವುದನ್ನು ಗಮನಿಸಬೇಕಾಗಿರುವಂತದ್ದು. ನಮ್ಮಲ್ಲಿ ರೈತನಿಂದ ಅತ್ಯಂತ ಕಮ್ಮಿ ಬೆಲೆಯಲ್ಲಿ ಹೇಗಾದರೂ ಕೊಂಡು, ಹೆಚ್ಚು ಲಾಭಗಳಿಸುವ ಆಹಾರ ಉದ್ಯಮಗಳೇ ಹೆಚ್ಚು. ಕಡಿಮೆ ಬೆಲೆಯಲ್ಲಿ ಕೊಳ್ಳುವುದೇ ಲಾಭಕ್ಕೆ ಮೂಲ ಆಧಾರ. ಇದೇ ಹೊಸ ಕಾನೂನುಗಳನ್ನು ಸೃಷ್ಟಿಸಿರುವುದಕ್ಕೆ ಇರುವ ಮೂಲ ಉದ್ದೇಶ. ಇದನ್ನು ಇನ್ನೊಂದು ರೀತಿಯಲ್ಲಿ produce heap, sell cheap ಎನ್ನಲಾಗಿದೆ.

ಬ್ರಾಂಡೆಡ್ ಆಹಾರ ಜಗತ್ತಿನಲ್ಲಿ ಬ್ರಾಂಡ್ ವಾಷಿಂಗ್ ಮುಖ್ಯವಾಗುತ್ತದೆ ಹೊರತು, ಜನರ ಸಾಮಾನ್ಯ ಒಳಿತಿನ ಹಿಂದೆ ಮುಂದೆ ಗಮನಿಸುವುದಿಲ್ಲ. ಒಂದು ತೆಂಗಿನ ಎಣ್ಣೆಯ ಬ್ರಾಂಡ್‌ನ ಮೌಲ್ಯ ಭಾರತದಲ್ಲಿ ಇಡೀ ತೆಂಗಿನ ಉದ್ಯಮಕ್ಕಿಂತ ಹೆಚ್ಚಾಗಿರುವುದನ್ನು ಗಮನಿಸಿದರೆ ಇದರ ಅರಿವು ಉಂಟಾಗಬಹುದು. ಅಥವಾ ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮೌಲ್ಯಭರಿತ ಬ್ರಾಂಡ್ ಆರೋಗ್ಯಕ್ಕೆ ಮಾರಕವಾದ ಒಂದು ಲಘುಪೇಯ ಎನ್ನುವುದು ನಮ್ಮಕಾಲದ ವಾಸ್ತವ. ಅದಕ್ಕೆ ಬರುವ ಸಕ್ಕರೆ ರೈತನ ಕಬ್ಬಿನದಲ್ಲ, ಅದು ಮೆಕ್ಕೆ ಜೋಳ ಹಾಗೂ ಕೃತಕವಾಗಿ ರಾಸಾಯನಿಕಗಳ ಬಳಕೆಯಿಂದ ತಯಾರಾದ ಸಕ್ಕರೆ.

ನಾವು ಬಳಸುವ ಹಾಲು, ನಾವು ಬಳಸುವ ಬ್ರಾಂಡ್ ಮೂಲಕವೇ ತಿಳಿದಿರುತ್ತದೆಯೇ ಹೊರತು ಅದು ಯಾವ ಜಾತಿಯ ಹಸುವಿನಿಂದ ಬಂತು, ಎಮ್ಮೆಯದೋ ಹಸುವಿನದೋ, ವಿದೇಶೀ ತಳಿಯೋ ಅಥವಾ ಸ್ಥಳೀಯ ತಳಿಯೋ, ಒಂದೂ ತಿಳಿಯದು. ನಮ್ಮದೇ ತಳಿಗಳಾದ ಮಲೆನಾಡು ಗಿಡ್ಡ, ಹಳಿಕರ್, ಅಮೃತ್ ಮಹಲ್ ಹೆಸರನ್ನು ನಾವು ಎಲ್ಲಿಯೂ ಗಮನಿಸುವುದಿಲ್ಲ. ಹಾಗಾಗಿ ಗುಣಕ್ಕಿಂತ ಗಾತ್ರವೇ ಹೆಚ್ಚು ಮುಖ್ಯವಾಗಿದೆ. ರೈತ ಸಮುದಾಯಕ್ಕಿಂತ ಬ್ರಾಂಡ್ ಮುಖ್ಯವಾಗಿವೆ. ಅದಕ್ಕಾಗಿಯೇ ಕೆಲವರು ಹೇಳುವುದು ‘we are going from self-reliance to total Reliance.’

ಈ ಹಿನ್ನೆಲೆಯಲ್ಲಿ ರೈತ ಹೋರಾಟ ಮತ್ತು ಈಗ ಜಾರಿಯಾಗಿರುವ ಕರಾಳ ಕೃಷಿ ಕಾಯ್ದೆಗಳು ವಜಾ ಆಗಬೇಕಿರುವ ಪ್ರಾಮುಖ್ಯತೆಯನ್ನು ನಾವು ಅರಿಯಬಹುದಾಗಿದೆ. ಮುಂದಿನ ದಿನಗಳಲ್ಲಿ ಬಳಕೆದಾರ ರೈತನ ಜೊತೆಗೆ ನೇರ ಸಂಬಂಧ ಹೊಂದಿ ಎಲ್ಲರ ಸಾಮಾನ್ಯ ಒಳಿತಿನ ಕಡೆಗೆ ಹೆಜ್ಜೆ ಹಾಕುವುದಕ್ಕೆ ಸಾಧ್ಯವಿದೆ.

ಕೆ.ಸಿ. ರಘು

ಕೆ. ಸಿ. ರಘು
ಆಹಾರ ತಜ್ಞರು


ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...