Homeಮುಖಪುಟಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

ಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

- Advertisement -
- Advertisement -

ಹಿಂದೆಂದೂ ಕೇಳದ ರೀತಿಯಲ್ಲಿ ಇತ್ತೀಚಿನ ದಿನಗಳಲ್ಲಿ ರೈತ ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿ ಮೂದಲಿಸುವ ಸಂಪ್ರದಾಯ ನಾವು ಕಾಣುತ್ತಿದ್ದೇವೆ. ಇವರು ಹೊಲಕ್ಕೆ ಬೆಂಕಿಹಚ್ಚಿ ನಮ್ಮ ನಗರಗಳನ್ನು ಮಾಲಿನ್ಯಗೊಳಿಸುವ ಅಪರಾಧಿಗಳು, ಬೇಡದ ಭತ್ತ, ಗೋಧಿ ಬೆಳೆದು ಮಣ್ಣಿನ ಫಲವತ್ತತೆ ಮತ್ತು ನೀರನ್ನು ಹಾಳುಗೆಡವುವವರು, ಸೋಮಾರಿ ಸಮುದಾಯದವರು, ಸ್ವಂತ ಬುದ್ಧಿ ಇಲ್ಲದೆ ಇತರರು ಹೇಳಿದ ಹಾಗೆ ನಡೆದುಕೊಳ್ಳುತ್ತಿರುವವರು, ಹೀಗೆಲ್ಲಾ ಕಳೆದ ಒಂದು ವರ್ಷದಿಂದ ನಾವು ಪತ್ರಿಕೆ, ದೃಶ್ಯಮಾಧ್ಯಮಗಳಲ್ಲಿ ನೇರವಾಗಿ ನಿಂದಿಸುವವರನ್ನು ಗಮನಿಸುತ್ತಿದ್ದೇವೆ. ನೇರವಾಗಿ ಏಕೆಂದರೆ, ನಾಗರಿಕರೆನ್ನುವ ಪ್ರಜ್ಞಾವಂತರೆನ್ನುವ ಈ ಸಮುದಾಯಕ್ಕೆ ನೇಗಿಲಯೋಗಿಯ ಬಗ್ಗೆ ಕಿಂಚಿತ್ತಾದರೂ, ಒಳಗಿಂದೊಳಗಾದರೂ ಗೌರವ ಇರಲಿಲ್ಲವೇ ಎಂಬ ಪ್ರಶ್ನೆ ಇತ್ತೀಚೆಗೆ ಏಳುತ್ತಿದೆ. ಅಷ್ಟೇ ಏಕೆ? ಒಟ್ಟಾರೆ ದುಡಿಯುವ ವರ್ಗದ ಬಗ್ಗೆ ’ಅದು ಅವನ ಕರ್ಮ’ ಎಂದೇ ಪರಿಗಣಿಸುವಂತೆ ಈ ವರ್ಗ ಬೆಳೆದಿದೆ.

ಶ್ರೇಣೀಕೃತವರ್ಗದಲ್ಲಿ ಬೆವರಿನ ಹನಿ ಹೆಚ್ಚಾದಂತೆಲ್ಲಾ ಬೈಗುಳ ಮತ್ತು ನಿಂದನೆಗೆ ಒಳಪಟ್ಟಿರುವುದನ್ನು ಗಮನಿಸಬಹುದು. ಇದನ್ನು `ascendancy of respect and descendancy of disrespect in the ladder’ ಎಂದು ಅಂಬೇಡ್ಕರ್ ಗಮನಿಸಿದ್ದರು. ಮಹಾತ್ಮ ಗಾಂಧಿ ರೈತನನ್ನು ಒಬ್ಬ ಖಗೋಳಶಾಸ್ತ್ರಜ್ಞ, ಜೀವಶಾಸ್ತ್ರಜ್ಞ, ಹವಾಮಾನತಜ್ಞ, ಆಹಾರತಜ್ಞ, ಪರಿಸರತಜ್ಞ, ಭೂವಿಜ್ಞಾನಿ ಎಂದೆಲ್ಲಾ ಬಣ್ಣಿಸಿದ್ದರು. ಡಾ.ರಿಚಾರಿಯಾ ಹೇಳುವಂತೆ ನಮ್ಮೊಳಗಿನ ಅತ್ಯಂತ ಪ್ರಜ್ಞಾವಂತ ತಳಿವಿಜ್ಞಾನದ ತಜ್ಞ ಎಂದರೆ ರೈತ ಎಂಬ ಮಾತು ಗಮನಾರ್ಹವಾದದ್ದು. ಆಯುರ್ವೇದ ವೈದ್ಯ ಹಾಗೂ ಗ್ರಂಥಕರ್ತ ಚರಕ ತನ್ನ ’ಚರಕ ಸಂಹಿತ’ದಲ್ಲಿ ಕೆಲವು ಔಷಧೀಯ ಸಸ್ಯಗಳ ಬಗ್ಗೆ ವಿವರಿಸತ್ತಾ, “ಇನ್ನೂ ಹೆಚ್ಚು ತಿಳಿಯಬೇಕಿದ್ದರೆ ಕುರಿ ಮೇಯಿಸುವವರನ್ನು ಕೇಳಿ” ಎನ್ನುತ್ತಾನೆ.

ಸಾಮಾನ್ಯವಾಗಿ ಗ್ರಾಮಾಂತರದ ಉತ್ಪಾದಕ ಮತ್ತು ನಗರದ ಗ್ರಾಹಕ ಎನ್ನುವುದಾಗಿ ಹೇಳುವುದುಂಟು. ಆದರೆ ನೀವು ನಿಜವಾಗಿಯೂ ಆರೋಗ್ಯವಂತರಾಗಿ ಬದುಕಬೇಕಿದ್ದರೆ ನಿಮಗೆ ಒಬ್ಬ ರೈತ ಸ್ನೇಹಿತನಾಗಿರಬೇಕು ಎಂದು ಪರಿಗಣಿಸುತ್ತಾರೆ. ಇದು ಕೇವಲ ಹೊಲ-ಗದ್ದೆಗಳ ನೈಜ ಪರಿಸ್ಥಿತಿಯ ಅರಿವಷ್ಟೇ ಅಲ್ಲ, ತನ್ನ ಅನ್ನದ ಹಿಂದಿನ ದುಡಿದ ಕೈಗಳ ಪರಿಚಯ ಮತ್ತು ಆತ್ಮೀಯತೆ, ನಮ್ಮನ್ನು ಭೌತಿಕವಾಗಿ ಸದೃಢಗೊಳಿಸುವುದಲ್ಲದೆ, ಮಾನಸಿಕವಾಗಿಯೂ ಮತ್ತು ಆಧ್ಯಾತ್ಮಿಕವಾಗಿಯೂ ಕೂಡಾ ಗಟ್ಟಿಗೊಳಿಸಬಲ್ಲುದು. ಬುದ್ಧನ ಕರುಣೆ ಮತ್ತು ಮೈತ್ರಿಗೆ ಈ ಪ್ರಕ್ರಿಯೆಯಿಂದ ಅವಕಾಶವುಂಟು. ಅಮೆರಿಕದಲ್ಲಿ ಇತ್ತೀಚೆಗೆ ಪ್ರತಿಯೊಂದು ನಗರಗಳಲ್ಲಿಯೂ ರೈತರ ಮಾರುಕಟ್ಟೆಗಳಿವೆ. ವಾಷಿಂಗ್‌ಟನ್‌ನಲ್ಲಿ ಹೌಸ್ ಆಫ್ ಕಾಂಗ್ರೆಸ್ ಮತ್ತು ವೈಟ್ ಹೌಸ್ ಅಕ್ಕಪಕ್ಕದಲ್ಲಿಯೇ ರೈತರ ಮಾರುಕಟ್ಟೆಗಳನ್ನು ಗಮನಿಸಬಹುದು. ಇಡೀ ದೇಶದಲ್ಲಿ ಬಂಡವಾಳಶಾಹಿ ವಾಲ್‌ಮಾರ್ಟ್‌ನಂತಹ ದೈತ್ಯ ಸಗಟು ವ್ಯಾಪಾರಿಗಳಿದ್ದರೂ ಸಮುದಾಯ ರೈತರನ್ನು ಬೆಂಬಲಿಸಿ ನೇರವಾಗಿ ರೈತರೊಂದಿಗೆ ಮಾತುಕತೆಯಾಡಿ ತಮಗೆ ಬೇಕಾದ ಹಣ್ಣುಹಂಪಲನ್ನು ಅವರಿಂದ ಕೊಂಡುಕೊಳ್ಳುವುದನ್ನು ಗಮನಿಸಬೇಕಾಗಿರುವಂತದ್ದು. ನಮ್ಮಲ್ಲಿ ರೈತನಿಂದ ಅತ್ಯಂತ ಕಮ್ಮಿ ಬೆಲೆಯಲ್ಲಿ ಹೇಗಾದರೂ ಕೊಂಡು, ಹೆಚ್ಚು ಲಾಭಗಳಿಸುವ ಆಹಾರ ಉದ್ಯಮಗಳೇ ಹೆಚ್ಚು. ಕಡಿಮೆ ಬೆಲೆಯಲ್ಲಿ ಕೊಳ್ಳುವುದೇ ಲಾಭಕ್ಕೆ ಮೂಲ ಆಧಾರ. ಇದೇ ಹೊಸ ಕಾನೂನುಗಳನ್ನು ಸೃಷ್ಟಿಸಿರುವುದಕ್ಕೆ ಇರುವ ಮೂಲ ಉದ್ದೇಶ. ಇದನ್ನು ಇನ್ನೊಂದು ರೀತಿಯಲ್ಲಿ produce heap, sell cheap ಎನ್ನಲಾಗಿದೆ.

ಬ್ರಾಂಡೆಡ್ ಆಹಾರ ಜಗತ್ತಿನಲ್ಲಿ ಬ್ರಾಂಡ್ ವಾಷಿಂಗ್ ಮುಖ್ಯವಾಗುತ್ತದೆ ಹೊರತು, ಜನರ ಸಾಮಾನ್ಯ ಒಳಿತಿನ ಹಿಂದೆ ಮುಂದೆ ಗಮನಿಸುವುದಿಲ್ಲ. ಒಂದು ತೆಂಗಿನ ಎಣ್ಣೆಯ ಬ್ರಾಂಡ್‌ನ ಮೌಲ್ಯ ಭಾರತದಲ್ಲಿ ಇಡೀ ತೆಂಗಿನ ಉದ್ಯಮಕ್ಕಿಂತ ಹೆಚ್ಚಾಗಿರುವುದನ್ನು ಗಮನಿಸಿದರೆ ಇದರ ಅರಿವು ಉಂಟಾಗಬಹುದು. ಅಥವಾ ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮೌಲ್ಯಭರಿತ ಬ್ರಾಂಡ್ ಆರೋಗ್ಯಕ್ಕೆ ಮಾರಕವಾದ ಒಂದು ಲಘುಪೇಯ ಎನ್ನುವುದು ನಮ್ಮಕಾಲದ ವಾಸ್ತವ. ಅದಕ್ಕೆ ಬರುವ ಸಕ್ಕರೆ ರೈತನ ಕಬ್ಬಿನದಲ್ಲ, ಅದು ಮೆಕ್ಕೆ ಜೋಳ ಹಾಗೂ ಕೃತಕವಾಗಿ ರಾಸಾಯನಿಕಗಳ ಬಳಕೆಯಿಂದ ತಯಾರಾದ ಸಕ್ಕರೆ.

ನಾವು ಬಳಸುವ ಹಾಲು, ನಾವು ಬಳಸುವ ಬ್ರಾಂಡ್ ಮೂಲಕವೇ ತಿಳಿದಿರುತ್ತದೆಯೇ ಹೊರತು ಅದು ಯಾವ ಜಾತಿಯ ಹಸುವಿನಿಂದ ಬಂತು, ಎಮ್ಮೆಯದೋ ಹಸುವಿನದೋ, ವಿದೇಶೀ ತಳಿಯೋ ಅಥವಾ ಸ್ಥಳೀಯ ತಳಿಯೋ, ಒಂದೂ ತಿಳಿಯದು. ನಮ್ಮದೇ ತಳಿಗಳಾದ ಮಲೆನಾಡು ಗಿಡ್ಡ, ಹಳಿಕರ್, ಅಮೃತ್ ಮಹಲ್ ಹೆಸರನ್ನು ನಾವು ಎಲ್ಲಿಯೂ ಗಮನಿಸುವುದಿಲ್ಲ. ಹಾಗಾಗಿ ಗುಣಕ್ಕಿಂತ ಗಾತ್ರವೇ ಹೆಚ್ಚು ಮುಖ್ಯವಾಗಿದೆ. ರೈತ ಸಮುದಾಯಕ್ಕಿಂತ ಬ್ರಾಂಡ್ ಮುಖ್ಯವಾಗಿವೆ. ಅದಕ್ಕಾಗಿಯೇ ಕೆಲವರು ಹೇಳುವುದು ‘we are going from self-reliance to total Reliance.’

ಈ ಹಿನ್ನೆಲೆಯಲ್ಲಿ ರೈತ ಹೋರಾಟ ಮತ್ತು ಈಗ ಜಾರಿಯಾಗಿರುವ ಕರಾಳ ಕೃಷಿ ಕಾಯ್ದೆಗಳು ವಜಾ ಆಗಬೇಕಿರುವ ಪ್ರಾಮುಖ್ಯತೆಯನ್ನು ನಾವು ಅರಿಯಬಹುದಾಗಿದೆ. ಮುಂದಿನ ದಿನಗಳಲ್ಲಿ ಬಳಕೆದಾರ ರೈತನ ಜೊತೆಗೆ ನೇರ ಸಂಬಂಧ ಹೊಂದಿ ಎಲ್ಲರ ಸಾಮಾನ್ಯ ಒಳಿತಿನ ಕಡೆಗೆ ಹೆಜ್ಜೆ ಹಾಕುವುದಕ್ಕೆ ಸಾಧ್ಯವಿದೆ.

ಕೆ.ಸಿ. ರಘು

ಕೆ. ಸಿ. ರಘು
ಆಹಾರ ತಜ್ಞರು


ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...