Homeಮುಖಪುಟಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

ಬಳಕೆದಾರ ಬೆಳೆಗಾರನನ್ನು ಮರೆಯುವುದುಂಟೆ?

- Advertisement -
- Advertisement -

ಹಿಂದೆಂದೂ ಕೇಳದ ರೀತಿಯಲ್ಲಿ ಇತ್ತೀಚಿನ ದಿನಗಳಲ್ಲಿ ರೈತ ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿ ಮೂದಲಿಸುವ ಸಂಪ್ರದಾಯ ನಾವು ಕಾಣುತ್ತಿದ್ದೇವೆ. ಇವರು ಹೊಲಕ್ಕೆ ಬೆಂಕಿಹಚ್ಚಿ ನಮ್ಮ ನಗರಗಳನ್ನು ಮಾಲಿನ್ಯಗೊಳಿಸುವ ಅಪರಾಧಿಗಳು, ಬೇಡದ ಭತ್ತ, ಗೋಧಿ ಬೆಳೆದು ಮಣ್ಣಿನ ಫಲವತ್ತತೆ ಮತ್ತು ನೀರನ್ನು ಹಾಳುಗೆಡವುವವರು, ಸೋಮಾರಿ ಸಮುದಾಯದವರು, ಸ್ವಂತ ಬುದ್ಧಿ ಇಲ್ಲದೆ ಇತರರು ಹೇಳಿದ ಹಾಗೆ ನಡೆದುಕೊಳ್ಳುತ್ತಿರುವವರು, ಹೀಗೆಲ್ಲಾ ಕಳೆದ ಒಂದು ವರ್ಷದಿಂದ ನಾವು ಪತ್ರಿಕೆ, ದೃಶ್ಯಮಾಧ್ಯಮಗಳಲ್ಲಿ ನೇರವಾಗಿ ನಿಂದಿಸುವವರನ್ನು ಗಮನಿಸುತ್ತಿದ್ದೇವೆ. ನೇರವಾಗಿ ಏಕೆಂದರೆ, ನಾಗರಿಕರೆನ್ನುವ ಪ್ರಜ್ಞಾವಂತರೆನ್ನುವ ಈ ಸಮುದಾಯಕ್ಕೆ ನೇಗಿಲಯೋಗಿಯ ಬಗ್ಗೆ ಕಿಂಚಿತ್ತಾದರೂ, ಒಳಗಿಂದೊಳಗಾದರೂ ಗೌರವ ಇರಲಿಲ್ಲವೇ ಎಂಬ ಪ್ರಶ್ನೆ ಇತ್ತೀಚೆಗೆ ಏಳುತ್ತಿದೆ. ಅಷ್ಟೇ ಏಕೆ? ಒಟ್ಟಾರೆ ದುಡಿಯುವ ವರ್ಗದ ಬಗ್ಗೆ ’ಅದು ಅವನ ಕರ್ಮ’ ಎಂದೇ ಪರಿಗಣಿಸುವಂತೆ ಈ ವರ್ಗ ಬೆಳೆದಿದೆ.

ಶ್ರೇಣೀಕೃತವರ್ಗದಲ್ಲಿ ಬೆವರಿನ ಹನಿ ಹೆಚ್ಚಾದಂತೆಲ್ಲಾ ಬೈಗುಳ ಮತ್ತು ನಿಂದನೆಗೆ ಒಳಪಟ್ಟಿರುವುದನ್ನು ಗಮನಿಸಬಹುದು. ಇದನ್ನು `ascendancy of respect and descendancy of disrespect in the ladder’ ಎಂದು ಅಂಬೇಡ್ಕರ್ ಗಮನಿಸಿದ್ದರು. ಮಹಾತ್ಮ ಗಾಂಧಿ ರೈತನನ್ನು ಒಬ್ಬ ಖಗೋಳಶಾಸ್ತ್ರಜ್ಞ, ಜೀವಶಾಸ್ತ್ರಜ್ಞ, ಹವಾಮಾನತಜ್ಞ, ಆಹಾರತಜ್ಞ, ಪರಿಸರತಜ್ಞ, ಭೂವಿಜ್ಞಾನಿ ಎಂದೆಲ್ಲಾ ಬಣ್ಣಿಸಿದ್ದರು. ಡಾ.ರಿಚಾರಿಯಾ ಹೇಳುವಂತೆ ನಮ್ಮೊಳಗಿನ ಅತ್ಯಂತ ಪ್ರಜ್ಞಾವಂತ ತಳಿವಿಜ್ಞಾನದ ತಜ್ಞ ಎಂದರೆ ರೈತ ಎಂಬ ಮಾತು ಗಮನಾರ್ಹವಾದದ್ದು. ಆಯುರ್ವೇದ ವೈದ್ಯ ಹಾಗೂ ಗ್ರಂಥಕರ್ತ ಚರಕ ತನ್ನ ’ಚರಕ ಸಂಹಿತ’ದಲ್ಲಿ ಕೆಲವು ಔಷಧೀಯ ಸಸ್ಯಗಳ ಬಗ್ಗೆ ವಿವರಿಸತ್ತಾ, “ಇನ್ನೂ ಹೆಚ್ಚು ತಿಳಿಯಬೇಕಿದ್ದರೆ ಕುರಿ ಮೇಯಿಸುವವರನ್ನು ಕೇಳಿ” ಎನ್ನುತ್ತಾನೆ.

ಸಾಮಾನ್ಯವಾಗಿ ಗ್ರಾಮಾಂತರದ ಉತ್ಪಾದಕ ಮತ್ತು ನಗರದ ಗ್ರಾಹಕ ಎನ್ನುವುದಾಗಿ ಹೇಳುವುದುಂಟು. ಆದರೆ ನೀವು ನಿಜವಾಗಿಯೂ ಆರೋಗ್ಯವಂತರಾಗಿ ಬದುಕಬೇಕಿದ್ದರೆ ನಿಮಗೆ ಒಬ್ಬ ರೈತ ಸ್ನೇಹಿತನಾಗಿರಬೇಕು ಎಂದು ಪರಿಗಣಿಸುತ್ತಾರೆ. ಇದು ಕೇವಲ ಹೊಲ-ಗದ್ದೆಗಳ ನೈಜ ಪರಿಸ್ಥಿತಿಯ ಅರಿವಷ್ಟೇ ಅಲ್ಲ, ತನ್ನ ಅನ್ನದ ಹಿಂದಿನ ದುಡಿದ ಕೈಗಳ ಪರಿಚಯ ಮತ್ತು ಆತ್ಮೀಯತೆ, ನಮ್ಮನ್ನು ಭೌತಿಕವಾಗಿ ಸದೃಢಗೊಳಿಸುವುದಲ್ಲದೆ, ಮಾನಸಿಕವಾಗಿಯೂ ಮತ್ತು ಆಧ್ಯಾತ್ಮಿಕವಾಗಿಯೂ ಕೂಡಾ ಗಟ್ಟಿಗೊಳಿಸಬಲ್ಲುದು. ಬುದ್ಧನ ಕರುಣೆ ಮತ್ತು ಮೈತ್ರಿಗೆ ಈ ಪ್ರಕ್ರಿಯೆಯಿಂದ ಅವಕಾಶವುಂಟು. ಅಮೆರಿಕದಲ್ಲಿ ಇತ್ತೀಚೆಗೆ ಪ್ರತಿಯೊಂದು ನಗರಗಳಲ್ಲಿಯೂ ರೈತರ ಮಾರುಕಟ್ಟೆಗಳಿವೆ. ವಾಷಿಂಗ್‌ಟನ್‌ನಲ್ಲಿ ಹೌಸ್ ಆಫ್ ಕಾಂಗ್ರೆಸ್ ಮತ್ತು ವೈಟ್ ಹೌಸ್ ಅಕ್ಕಪಕ್ಕದಲ್ಲಿಯೇ ರೈತರ ಮಾರುಕಟ್ಟೆಗಳನ್ನು ಗಮನಿಸಬಹುದು. ಇಡೀ ದೇಶದಲ್ಲಿ ಬಂಡವಾಳಶಾಹಿ ವಾಲ್‌ಮಾರ್ಟ್‌ನಂತಹ ದೈತ್ಯ ಸಗಟು ವ್ಯಾಪಾರಿಗಳಿದ್ದರೂ ಸಮುದಾಯ ರೈತರನ್ನು ಬೆಂಬಲಿಸಿ ನೇರವಾಗಿ ರೈತರೊಂದಿಗೆ ಮಾತುಕತೆಯಾಡಿ ತಮಗೆ ಬೇಕಾದ ಹಣ್ಣುಹಂಪಲನ್ನು ಅವರಿಂದ ಕೊಂಡುಕೊಳ್ಳುವುದನ್ನು ಗಮನಿಸಬೇಕಾಗಿರುವಂತದ್ದು. ನಮ್ಮಲ್ಲಿ ರೈತನಿಂದ ಅತ್ಯಂತ ಕಮ್ಮಿ ಬೆಲೆಯಲ್ಲಿ ಹೇಗಾದರೂ ಕೊಂಡು, ಹೆಚ್ಚು ಲಾಭಗಳಿಸುವ ಆಹಾರ ಉದ್ಯಮಗಳೇ ಹೆಚ್ಚು. ಕಡಿಮೆ ಬೆಲೆಯಲ್ಲಿ ಕೊಳ್ಳುವುದೇ ಲಾಭಕ್ಕೆ ಮೂಲ ಆಧಾರ. ಇದೇ ಹೊಸ ಕಾನೂನುಗಳನ್ನು ಸೃಷ್ಟಿಸಿರುವುದಕ್ಕೆ ಇರುವ ಮೂಲ ಉದ್ದೇಶ. ಇದನ್ನು ಇನ್ನೊಂದು ರೀತಿಯಲ್ಲಿ produce heap, sell cheap ಎನ್ನಲಾಗಿದೆ.

ಬ್ರಾಂಡೆಡ್ ಆಹಾರ ಜಗತ್ತಿನಲ್ಲಿ ಬ್ರಾಂಡ್ ವಾಷಿಂಗ್ ಮುಖ್ಯವಾಗುತ್ತದೆ ಹೊರತು, ಜನರ ಸಾಮಾನ್ಯ ಒಳಿತಿನ ಹಿಂದೆ ಮುಂದೆ ಗಮನಿಸುವುದಿಲ್ಲ. ಒಂದು ತೆಂಗಿನ ಎಣ್ಣೆಯ ಬ್ರಾಂಡ್‌ನ ಮೌಲ್ಯ ಭಾರತದಲ್ಲಿ ಇಡೀ ತೆಂಗಿನ ಉದ್ಯಮಕ್ಕಿಂತ ಹೆಚ್ಚಾಗಿರುವುದನ್ನು ಗಮನಿಸಿದರೆ ಇದರ ಅರಿವು ಉಂಟಾಗಬಹುದು. ಅಥವಾ ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮೌಲ್ಯಭರಿತ ಬ್ರಾಂಡ್ ಆರೋಗ್ಯಕ್ಕೆ ಮಾರಕವಾದ ಒಂದು ಲಘುಪೇಯ ಎನ್ನುವುದು ನಮ್ಮಕಾಲದ ವಾಸ್ತವ. ಅದಕ್ಕೆ ಬರುವ ಸಕ್ಕರೆ ರೈತನ ಕಬ್ಬಿನದಲ್ಲ, ಅದು ಮೆಕ್ಕೆ ಜೋಳ ಹಾಗೂ ಕೃತಕವಾಗಿ ರಾಸಾಯನಿಕಗಳ ಬಳಕೆಯಿಂದ ತಯಾರಾದ ಸಕ್ಕರೆ.

ನಾವು ಬಳಸುವ ಹಾಲು, ನಾವು ಬಳಸುವ ಬ್ರಾಂಡ್ ಮೂಲಕವೇ ತಿಳಿದಿರುತ್ತದೆಯೇ ಹೊರತು ಅದು ಯಾವ ಜಾತಿಯ ಹಸುವಿನಿಂದ ಬಂತು, ಎಮ್ಮೆಯದೋ ಹಸುವಿನದೋ, ವಿದೇಶೀ ತಳಿಯೋ ಅಥವಾ ಸ್ಥಳೀಯ ತಳಿಯೋ, ಒಂದೂ ತಿಳಿಯದು. ನಮ್ಮದೇ ತಳಿಗಳಾದ ಮಲೆನಾಡು ಗಿಡ್ಡ, ಹಳಿಕರ್, ಅಮೃತ್ ಮಹಲ್ ಹೆಸರನ್ನು ನಾವು ಎಲ್ಲಿಯೂ ಗಮನಿಸುವುದಿಲ್ಲ. ಹಾಗಾಗಿ ಗುಣಕ್ಕಿಂತ ಗಾತ್ರವೇ ಹೆಚ್ಚು ಮುಖ್ಯವಾಗಿದೆ. ರೈತ ಸಮುದಾಯಕ್ಕಿಂತ ಬ್ರಾಂಡ್ ಮುಖ್ಯವಾಗಿವೆ. ಅದಕ್ಕಾಗಿಯೇ ಕೆಲವರು ಹೇಳುವುದು ‘we are going from self-reliance to total Reliance.’

ಈ ಹಿನ್ನೆಲೆಯಲ್ಲಿ ರೈತ ಹೋರಾಟ ಮತ್ತು ಈಗ ಜಾರಿಯಾಗಿರುವ ಕರಾಳ ಕೃಷಿ ಕಾಯ್ದೆಗಳು ವಜಾ ಆಗಬೇಕಿರುವ ಪ್ರಾಮುಖ್ಯತೆಯನ್ನು ನಾವು ಅರಿಯಬಹುದಾಗಿದೆ. ಮುಂದಿನ ದಿನಗಳಲ್ಲಿ ಬಳಕೆದಾರ ರೈತನ ಜೊತೆಗೆ ನೇರ ಸಂಬಂಧ ಹೊಂದಿ ಎಲ್ಲರ ಸಾಮಾನ್ಯ ಒಳಿತಿನ ಕಡೆಗೆ ಹೆಜ್ಜೆ ಹಾಕುವುದಕ್ಕೆ ಸಾಧ್ಯವಿದೆ.

ಕೆ.ಸಿ. ರಘು

ಕೆ. ಸಿ. ರಘು
ಆಹಾರ ತಜ್ಞರು


ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...