Homeಕರ್ನಾಟಕ'ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?'; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

- Advertisement -
- Advertisement -

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ” ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ ಎಂಬ ಕುಸುಮಾವತಿಯವರ ಮಾತಿಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.
ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ” ಎಂದು ಅವರು ಹರಿಯಾಯ್ದಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು ‘ಧರ್ಮಸ್ಥಳದಿಂದ ವಾಪಸ್ ಚಲೋ’ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬಿಜೆಪಿ ಕುರಿತು ಬರೆದುಕೊಂಡಿದ್ದಾರೆ.

ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳ ಗ್ರಾಮದಲ್ಲಿ ಹಲವು ದಶಕಳಿಂದ ನಡೆದಿವೆ ಎನ್ನಲಾದ ಸರಣಿ ಕೊಲೆ-ಅತ್ಯಾಚಾರ ಮತ್ತು ಅನಧಿಕೃತ ಶವಸಂಸ್ಕಾರಗಳ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ. ಸೆ.1 ರಂದು “ನಮ್ಮ ನಡಿಗೆ ಧರ್ಮದೆಡೆಗೆ-ಧರ್ಮಸ್ಥಳ ಚಲೋ” ಹೆಸರನಲ್ಲಿ ಬೃಹತ್ ಸಮಾವೇಶ ಏರ್ಪಡಿಸಿತ್ತು. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರು ಕುಮಾರಿ ಸೌಜನ್ಯಾ ಮನೆಗೂ ಭೇಟಿ ನೀಡಿದ್ದರು.

“ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಯವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...