Homeಕರ್ನಾಟಕ'ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?'; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

- Advertisement -
- Advertisement -

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ” ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ ಎಂಬ ಕುಸುಮಾವತಿಯವರ ಮಾತಿಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.
ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ” ಎಂದು ಅವರು ಹರಿಯಾಯ್ದಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು ‘ಧರ್ಮಸ್ಥಳದಿಂದ ವಾಪಸ್ ಚಲೋ’ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬಿಜೆಪಿ ಕುರಿತು ಬರೆದುಕೊಂಡಿದ್ದಾರೆ.

ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳ ಗ್ರಾಮದಲ್ಲಿ ಹಲವು ದಶಕಳಿಂದ ನಡೆದಿವೆ ಎನ್ನಲಾದ ಸರಣಿ ಕೊಲೆ-ಅತ್ಯಾಚಾರ ಮತ್ತು ಅನಧಿಕೃತ ಶವಸಂಸ್ಕಾರಗಳ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ. ಸೆ.1 ರಂದು “ನಮ್ಮ ನಡಿಗೆ ಧರ್ಮದೆಡೆಗೆ-ಧರ್ಮಸ್ಥಳ ಚಲೋ” ಹೆಸರನಲ್ಲಿ ಬೃಹತ್ ಸಮಾವೇಶ ಏರ್ಪಡಿಸಿತ್ತು. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರು ಕುಮಾರಿ ಸೌಜನ್ಯಾ ಮನೆಗೂ ಭೇಟಿ ನೀಡಿದ್ದರು.

“ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಯವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...