Homeಕರ್ನಾಟಕಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಂಚೇಗೌಡ ಎಂಬುವವರು 1982/83ರಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

- Advertisement -
- Advertisement -

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ನೆಲದ ಹಕ್ಕಿಗಾಗಿ 183ದಿನಗಳಿಂದ PTCL ಕಾಯ್ದೆ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಇದುವರೆಗೂ ಈ ವಿಷಯ ಕುರಿತು ಸರ್ಕಾರ ದ ಜೊತೆ ಅಂದಿನಿಂದ ಇಂದಿನ ವರೆಗೂ ಯಾವ ಮಂತ್ರಿ ಶಾಸಕರು ಭೇಟಿ ನೀಡಿಲ್ಲ ಎಂಬುದು ದುರಂತ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೋಷಿತ ಜನರ ಜೀವನ ನಿರ್ವಹಣೆಗೆ ಇದ್ದ ಜಮೀನುಗಳನ್ನ ಕೆಲವು ಮುಂದುವರೆದ ಜಾತಿ ಜನ ಆಸೆ ಆಮಿಷಗಳನ್ನು ತೋರಿಸಿ, ಬಗ್ಗದಿದ್ದರೆ ದೌರ್ಜನ್ಯವೆಸಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದರಿಂದ ಶೋಷಿತರು ಇದ್ದ ಭೂಮಿ ಕಳೆದುಕೊಂಡು ಭೂ ಹೀನರಾಗಿದ್ದಾರೆ. ಇದನ್ನು ಮನಗಂಡ ಅಂದಿನ ಮಂತ್ರಿ ಶ್ರೀ ಬಸವಲಿಂಗಪ್ಪ ಮತ್ತು ರಾಜ್ಯ ಸರ್ಕಾರ 1978 ತಾ 18/12/1978ರಲ್ಲಿ ಸಂವಿಧಾನ ದ ಆರ್ಟಿಕಲ್ 31ಸಿ ಮತ್ತು 46ರ ರೀತ್ಯ (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಭೂ ಪರೆಬಾರೆ) ಕಾಯ್ದೆ ಜಾರಿಗೆ ತಂತು. ಈ ಕಾಯ್ದೆಯು 1979ರ ಜನವರಿಯಿಂದ ಜಾರಿಗೆ ತಯಾರಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ.

ಈ ಕಾಯ್ದೆ ಇದ್ದಾಗ್ಯೂ ರಾಜ್ಯದಲ್ಲಿ ಸಾವಿರಾರು ಎಕರೆ ಭೂಮಿಯನ್ನ ಪರಬಾರೆ ಮಾಡಲಾಗಿದೆ. ಒಂದು ಅಂದಾಜಿನಿನಂತೆ ಹತ್ತು ಸಾವಿರ ಎಕರೆ ಭೂಮಿ ಮಾರಾಟಗೊಂಡಿದೆ. ಇದುವರೆಗೂ ಸಂಬಂಧ ಸಲ್ಲಿಸಿದ್ದ 1150 ಪ್ರಕರಣಗಳು ಇತ್ಯರ್ಥಗೊಂಡು ಮಾರಿದ್ದ ಭೂಮಿ ವಾಪಸ್ ಪಡೆಯಲಾಗಿದೆ.

ನಗರಪ್ರದೇಶಗಳ ಅಂದರೆ ಬೆಂಗಳೂರು ಸುತ್ತಮುತ್ತ ಹಾಗೂ ಜಿಲ್ಲಾ ಕೇಂದ್ರಗಳ ಸುತ್ತ ಬೆಲೆ ಬಾಳುವ ದಲಿತರ ಜಮೀನು ಗಳನ್ನ ಪುಸಲಾಯಿಸಿ ಒಂದಷ್ಟು ಹೆಚ್ಚು ಹಣ ನೀಡಿ ಖರೀದಿಸಿರುವ ಭೂ ಮಾಫಿಯ ರಾಜಕಾರಣಿಗಳು, ಬಂಡವಾಳಿಗರು ಈ ಕಾಯ್ದೆ ಪ್ರಕಾರ ವಾಪಸ್ ಜಮೀನು ಪಡೆದುಕೊಳ್ಳುವ ಆಲೋಚನೆ ಮಾಡದಂತೆ ದಲಿತರಿಗೆ ಕೆಲವು ಪುಡಾರಿಗಳ ಬೆದರಿಕೆ ಮತ್ತು ಕೆಲವು ಸ್ವಯಂ ಘೋಷಿತವಾದ ದಲಿತ ಸಂಘಟನೆಗಳ ಮುಖಂಡರ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ತರಾತುರಿಯಲ್ಲಿ ಕಂದಾಯ ಇಲಾಖೆ ಎ ಸಿ, ಡಿ ಸಿ ಗಳ ಜೊತೆ ಶಾಮೀಲಾಗಿ ಈ PTCL ಕಾಯ್ದೆಯನ್ನ ಹಣದ ಹಗ್ಗದಿಂದ ಬಂಧಿಸಿದ್ದಾರೆ.

ಮಂಚೇಗೌಡ ಎಂಬುವವರು 1982/83ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಅವರು 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿದೆ ಎಂದು ವಾದಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನ ತಿರಸ್ಕಾರ ಮಾಡಿ PTCL ಕಾಯ್ದೆ 1963 ಕಾಯ್ದೆಗೆ ಒಳಪಡುವುದಿಲ್ಲ ಎಂದಿದೆ.

ಈ ಕಾಯ್ದೆ ಮೊದಲು 1984 ನಂತರ 2ನೇ ಬಾರಿ 1992 ಮುಂದುವರೆದು 2012ರ ಸುತ್ತೋಲೆಗಳ ಮೂಲಕ ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಗಳು ಮೂಲ ಮಂಜೂರುದಾರರಿಗೆ ಭೂಮಿಯನ್ನ ಪುನರ್ ಸ್ಥಾಪಿಸಲು ನಿಯಮ ರೂಪಿಸಿದೆ. ಹೀಗಿರುವಾಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಅಧಿಕಾರಿಗಳು ಇದನ್ನ ಮನೆಗಾಣದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡ ಹಟ್ಟಿ ಗ್ರಾಮದ ಸರ್ವೆ ನಂ 24ಮತ್ತು 24/ಎ ವಿಷಯ ಅಂದರೆ ಖರೀದಿದಾರ ನೆಕ್ಕುಂಟಿ ರಾಜಲಕ್ಷ್ಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 28/10/2017ರಂದು ಚೆಂದಿಲಾಲ್ ಕೇಸ್ ಬಿಹಾರದ ಜನರಲ್ ಕೇಸ್ ಅನ್ನು ಉದಾಹರಣೆ ನೀಡಿ ಇದು 25ವರ್ಷದ ಹಿಂದೆ ಪರೆಬಾರೆ ಆಗಿದೆ. ಹಾಗಾಗಿ 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿ ಮಾರಾಟ ಸರಿಯಾಗಿದೆ ಎಂದು ತೀರ್ಪು ನೀಡಿದೆ. ಆದರೆ ಮಂಚೇಗೌಡರ ವಿಷಯದಲ್ಲಿ 1984ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ನೆಕ್ಕುಂಟಿ ಪ್ರಕರಣದ ಸರ್ವೆನಂಬರ್ ಬೇರೆ ಬೇರೆ ಇದೆ ಎಂದು ಎ ಸಿ, ಡಿ ಸಿ ಆದೇಶ ಹೊರಡಿಸಿದ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರದ ಪರ ವಕೀಲರು ಸರಿಯಾಗಿ ದಾಖಲಿಸದೆ ಈ ತೀರ್ಪು ನೀಡಿದೆ. ಇದನ್ನ ಹಿಡಿದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ಮೈಸೂರು ಇನ್ನೂ ಬೇರೆ ಬೇರೆ ಕಡೆ PTCL ಕಾಯ್ದೆ ವಿರುದ್ಧ ಡಿ.ಸಿ ಕೋರ್ಟುಗಳು ತೀರ್ಪು ನೀಡಲಾಗುತ್ತಿದೆ.

ಇದು ಕಾಯ್ದೆ 1978ರ ಕಲಂ5(1)ಎ ರಂತೆ 1964ರ ಕಲಂ(39)ವಿವರಣೆಯನ್ನ ಎ ಸಿ, ಡಿ ಸಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ನೆಕ್ಕುಂಟಿ ಪ್ರಕರಣವನ್ನು ಮುಂದಿಡುವ ಎ ಸಿ ಮತ್ತು ಡಿ ಸಿ ಅಧಿಕಾರಿಗಳು 2019ರ ಸುಪ್ರೀಂಕೋರ್ಟ್ ದಲಿತ ರೈತರ ಪರವಾದ ತೀರ್ಪು ನೀಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಜಾರ್ಖಂಡ್ SC/ST ಜಮೀನು ಕಾಯ್ದೆ ಪ್ರಕಾರ 3/3/2020 ರ(SAR CIV 42644)ತೀರ್ಪು ನೀಡಿದೆ. ಇದನ್ನ ಯಾಕೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ? ಇದು ಇಂಡಿಯನ್ ಲಿಮಿಟೇಷನ್ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಇದನ್ನ ತಿಳಿಯದ ಎ ಸಿ, ಡಿ ಸಿ ಅಧಿಕಾರಿಗಳು ಭೂ ಮಾಲೀಕರು, ಮಾಫಿಯ ರಾಜಕಾರಣಿಗಳ ಮತ್ತು ತಮ್ಮ ಹೊತ್ತಿನ ಕೂಳಿಗೆ ತಮ್ಮವರನ್ನೆ ಬಡಿದು ತಿನ್ನಲು ನಿಂತಿರುವ ಲೆಟರ್ ಪ್ಯಾಡ್ ಸ್ವಯಂ ಘೋಷಿತ ಏಜೆಂಟ್ ಗಳಿಂದ ಇಂದು ಈ PTCL ಕಾಯ್ದೆ ಜಾರಿಯಾಗದೆ ನಿಂತಿದೆ.

ನೆಕ್ಕಂಟಿ ಕೇಸ್ ನಿಂದ ಇಲ್ಲಿಯತನಕ ಸುಮಾರು 25 ಸಾವಿರ ಕೇಸ್‌ಗಳನ್ನು ಡಿಸಿಗಳು ವಜಾಗೊಳಿಸಿದ್ದಾರೆ. ಇನ್ನೂ ಬಾಕಿ 20 ಸಾವಿರ ಕೇಸ್‌ಗಳು ವಿಚಾರಣೆಯಲ್ಲಿವೆ. ಹಾಗಾಗಿ ದಲಿತರು 2 ಲಕ್ಷ ಎಕರೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ನಾಶವಾಗಿದೆ.  ವಿಶೇಷ ಕಾಯ್ದೆಯಾಗಿರುವುದರಿಂದ ಕಾಲಮಿತಿ ಅನ್ವಯಿಸುವುದಿಲ್ಲ. ಆದರೂ ಬಲಾಢ್ಯರ ಕುತಂತ್ರದಿಂದ ಇದಕ್ಕೆಲ್ಲ ನೇರ ಕಾರಣ ಕಂದಾಯ ಇಲಾಖೆಯ ನೋಂದಣಿಧಿಕಾರಿಗಳು, VA, RI, ತಹಸೀಲ್ದಾರ್ ಸೇರಿಕೊಂಡು ದಲಿತರಿಗೆ ಕೊಳ್ಳಿ ಇಡುತ್ತಿದ್ದಾರೆ.

PTCL ಕಾಯ್ದೆಗೆ 10.12.11ಕಾಲಂ ರಂತೆ ಯಾವ ಕಾಲ ಮಿತಿ ಇದಕ್ಕೆ ಅನ್ವಯವಾಗುವುದಿಲ್ಲ.
ಎ ಸಿ ಗೆ ಅರ್ಜಿ ಹಾಕಿ ನಂತರ ಮೇಲ್ಮನವಿಗೆ 90 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಿತಿ ಇದೆ. ಹಾಗೆ ಕಾಲ ಮಿತಿಗೆ ಕಾರಣ ತಿಳಿಸಿ ಮುಂದುವರೆಯಲು ಅವಕಾಶವಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಶೋಷಿತರ ದಲಿತರ ಪರ ಕಾಳಜಿಯುಳ್ಳ ಸಂಘಟಕರು ಈ ಹೋರಾಟದ ಪರ ನಿಲ್ಲಬೇಕು. ಒಂದಷ್ಟು ಈ ವಿಷಯ ಕುರಿತು ಅಧ್ಯಯನ ಮಾಡಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಕ್ಕೆ ಈ ಕಾಯ್ದೆ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಒತ್ತಡ ತಂದು ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರಿಗೆ ಭೂಮಿ ವಾಪಸ್ ಕೊಡಿಸಲು ಎಲ್ಲಾ ಹೋರಾಟಗಾರರು ಮುಂದಾಗಬೇಕು. ಚುನಾವಣೆಯಲ್ಲಿ ಬೀದಿಗಿಳಿದು ಹೋರಾಟ ಮಾಡಿದಂತೆ ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 183 ದಿನಗಳಿಂದ ನಡೆಯುತ್ತಿರುವ ಭೂ ಹೀನ ಬಡವರ ಹೆಗಲಿಗೆ ಹೆಗಲೊಡ್ಡೋಣ.

ಕಂದೇಗಾಲ ಶ್ರೀನಿವಾಸ
ರಾಜ್ಯ ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಬೆಂಗಳೂರು

ಇದನ್ನೂ ಓದಿ; ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...