Homeಕರ್ನಾಟಕಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಂಚೇಗೌಡ ಎಂಬುವವರು 1982/83ರಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

- Advertisement -
- Advertisement -

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ನೆಲದ ಹಕ್ಕಿಗಾಗಿ 183ದಿನಗಳಿಂದ PTCL ಕಾಯ್ದೆ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಇದುವರೆಗೂ ಈ ವಿಷಯ ಕುರಿತು ಸರ್ಕಾರ ದ ಜೊತೆ ಅಂದಿನಿಂದ ಇಂದಿನ ವರೆಗೂ ಯಾವ ಮಂತ್ರಿ ಶಾಸಕರು ಭೇಟಿ ನೀಡಿಲ್ಲ ಎಂಬುದು ದುರಂತ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೋಷಿತ ಜನರ ಜೀವನ ನಿರ್ವಹಣೆಗೆ ಇದ್ದ ಜಮೀನುಗಳನ್ನ ಕೆಲವು ಮುಂದುವರೆದ ಜಾತಿ ಜನ ಆಸೆ ಆಮಿಷಗಳನ್ನು ತೋರಿಸಿ, ಬಗ್ಗದಿದ್ದರೆ ದೌರ್ಜನ್ಯವೆಸಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದರಿಂದ ಶೋಷಿತರು ಇದ್ದ ಭೂಮಿ ಕಳೆದುಕೊಂಡು ಭೂ ಹೀನರಾಗಿದ್ದಾರೆ. ಇದನ್ನು ಮನಗಂಡ ಅಂದಿನ ಮಂತ್ರಿ ಶ್ರೀ ಬಸವಲಿಂಗಪ್ಪ ಮತ್ತು ರಾಜ್ಯ ಸರ್ಕಾರ 1978 ತಾ 18/12/1978ರಲ್ಲಿ ಸಂವಿಧಾನ ದ ಆರ್ಟಿಕಲ್ 31ಸಿ ಮತ್ತು 46ರ ರೀತ್ಯ (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಭೂ ಪರೆಬಾರೆ) ಕಾಯ್ದೆ ಜಾರಿಗೆ ತಂತು. ಈ ಕಾಯ್ದೆಯು 1979ರ ಜನವರಿಯಿಂದ ಜಾರಿಗೆ ತಯಾರಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ.

ಈ ಕಾಯ್ದೆ ಇದ್ದಾಗ್ಯೂ ರಾಜ್ಯದಲ್ಲಿ ಸಾವಿರಾರು ಎಕರೆ ಭೂಮಿಯನ್ನ ಪರಬಾರೆ ಮಾಡಲಾಗಿದೆ. ಒಂದು ಅಂದಾಜಿನಿನಂತೆ ಹತ್ತು ಸಾವಿರ ಎಕರೆ ಭೂಮಿ ಮಾರಾಟಗೊಂಡಿದೆ. ಇದುವರೆಗೂ ಸಂಬಂಧ ಸಲ್ಲಿಸಿದ್ದ 1150 ಪ್ರಕರಣಗಳು ಇತ್ಯರ್ಥಗೊಂಡು ಮಾರಿದ್ದ ಭೂಮಿ ವಾಪಸ್ ಪಡೆಯಲಾಗಿದೆ.

ನಗರಪ್ರದೇಶಗಳ ಅಂದರೆ ಬೆಂಗಳೂರು ಸುತ್ತಮುತ್ತ ಹಾಗೂ ಜಿಲ್ಲಾ ಕೇಂದ್ರಗಳ ಸುತ್ತ ಬೆಲೆ ಬಾಳುವ ದಲಿತರ ಜಮೀನು ಗಳನ್ನ ಪುಸಲಾಯಿಸಿ ಒಂದಷ್ಟು ಹೆಚ್ಚು ಹಣ ನೀಡಿ ಖರೀದಿಸಿರುವ ಭೂ ಮಾಫಿಯ ರಾಜಕಾರಣಿಗಳು, ಬಂಡವಾಳಿಗರು ಈ ಕಾಯ್ದೆ ಪ್ರಕಾರ ವಾಪಸ್ ಜಮೀನು ಪಡೆದುಕೊಳ್ಳುವ ಆಲೋಚನೆ ಮಾಡದಂತೆ ದಲಿತರಿಗೆ ಕೆಲವು ಪುಡಾರಿಗಳ ಬೆದರಿಕೆ ಮತ್ತು ಕೆಲವು ಸ್ವಯಂ ಘೋಷಿತವಾದ ದಲಿತ ಸಂಘಟನೆಗಳ ಮುಖಂಡರ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ತರಾತುರಿಯಲ್ಲಿ ಕಂದಾಯ ಇಲಾಖೆ ಎ ಸಿ, ಡಿ ಸಿ ಗಳ ಜೊತೆ ಶಾಮೀಲಾಗಿ ಈ PTCL ಕಾಯ್ದೆಯನ್ನ ಹಣದ ಹಗ್ಗದಿಂದ ಬಂಧಿಸಿದ್ದಾರೆ.

ಮಂಚೇಗೌಡ ಎಂಬುವವರು 1982/83ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಅವರು 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿದೆ ಎಂದು ವಾದಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನ ತಿರಸ್ಕಾರ ಮಾಡಿ PTCL ಕಾಯ್ದೆ 1963 ಕಾಯ್ದೆಗೆ ಒಳಪಡುವುದಿಲ್ಲ ಎಂದಿದೆ.

ಈ ಕಾಯ್ದೆ ಮೊದಲು 1984 ನಂತರ 2ನೇ ಬಾರಿ 1992 ಮುಂದುವರೆದು 2012ರ ಸುತ್ತೋಲೆಗಳ ಮೂಲಕ ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಗಳು ಮೂಲ ಮಂಜೂರುದಾರರಿಗೆ ಭೂಮಿಯನ್ನ ಪುನರ್ ಸ್ಥಾಪಿಸಲು ನಿಯಮ ರೂಪಿಸಿದೆ. ಹೀಗಿರುವಾಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಅಧಿಕಾರಿಗಳು ಇದನ್ನ ಮನೆಗಾಣದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡ ಹಟ್ಟಿ ಗ್ರಾಮದ ಸರ್ವೆ ನಂ 24ಮತ್ತು 24/ಎ ವಿಷಯ ಅಂದರೆ ಖರೀದಿದಾರ ನೆಕ್ಕುಂಟಿ ರಾಜಲಕ್ಷ್ಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 28/10/2017ರಂದು ಚೆಂದಿಲಾಲ್ ಕೇಸ್ ಬಿಹಾರದ ಜನರಲ್ ಕೇಸ್ ಅನ್ನು ಉದಾಹರಣೆ ನೀಡಿ ಇದು 25ವರ್ಷದ ಹಿಂದೆ ಪರೆಬಾರೆ ಆಗಿದೆ. ಹಾಗಾಗಿ 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿ ಮಾರಾಟ ಸರಿಯಾಗಿದೆ ಎಂದು ತೀರ್ಪು ನೀಡಿದೆ. ಆದರೆ ಮಂಚೇಗೌಡರ ವಿಷಯದಲ್ಲಿ 1984ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ನೆಕ್ಕುಂಟಿ ಪ್ರಕರಣದ ಸರ್ವೆನಂಬರ್ ಬೇರೆ ಬೇರೆ ಇದೆ ಎಂದು ಎ ಸಿ, ಡಿ ಸಿ ಆದೇಶ ಹೊರಡಿಸಿದ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರದ ಪರ ವಕೀಲರು ಸರಿಯಾಗಿ ದಾಖಲಿಸದೆ ಈ ತೀರ್ಪು ನೀಡಿದೆ. ಇದನ್ನ ಹಿಡಿದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ಮೈಸೂರು ಇನ್ನೂ ಬೇರೆ ಬೇರೆ ಕಡೆ PTCL ಕಾಯ್ದೆ ವಿರುದ್ಧ ಡಿ.ಸಿ ಕೋರ್ಟುಗಳು ತೀರ್ಪು ನೀಡಲಾಗುತ್ತಿದೆ.

ಇದು ಕಾಯ್ದೆ 1978ರ ಕಲಂ5(1)ಎ ರಂತೆ 1964ರ ಕಲಂ(39)ವಿವರಣೆಯನ್ನ ಎ ಸಿ, ಡಿ ಸಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ನೆಕ್ಕುಂಟಿ ಪ್ರಕರಣವನ್ನು ಮುಂದಿಡುವ ಎ ಸಿ ಮತ್ತು ಡಿ ಸಿ ಅಧಿಕಾರಿಗಳು 2019ರ ಸುಪ್ರೀಂಕೋರ್ಟ್ ದಲಿತ ರೈತರ ಪರವಾದ ತೀರ್ಪು ನೀಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಜಾರ್ಖಂಡ್ SC/ST ಜಮೀನು ಕಾಯ್ದೆ ಪ್ರಕಾರ 3/3/2020 ರ(SAR CIV 42644)ತೀರ್ಪು ನೀಡಿದೆ. ಇದನ್ನ ಯಾಕೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ? ಇದು ಇಂಡಿಯನ್ ಲಿಮಿಟೇಷನ್ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಇದನ್ನ ತಿಳಿಯದ ಎ ಸಿ, ಡಿ ಸಿ ಅಧಿಕಾರಿಗಳು ಭೂ ಮಾಲೀಕರು, ಮಾಫಿಯ ರಾಜಕಾರಣಿಗಳ ಮತ್ತು ತಮ್ಮ ಹೊತ್ತಿನ ಕೂಳಿಗೆ ತಮ್ಮವರನ್ನೆ ಬಡಿದು ತಿನ್ನಲು ನಿಂತಿರುವ ಲೆಟರ್ ಪ್ಯಾಡ್ ಸ್ವಯಂ ಘೋಷಿತ ಏಜೆಂಟ್ ಗಳಿಂದ ಇಂದು ಈ PTCL ಕಾಯ್ದೆ ಜಾರಿಯಾಗದೆ ನಿಂತಿದೆ.

ನೆಕ್ಕಂಟಿ ಕೇಸ್ ನಿಂದ ಇಲ್ಲಿಯತನಕ ಸುಮಾರು 25 ಸಾವಿರ ಕೇಸ್‌ಗಳನ್ನು ಡಿಸಿಗಳು ವಜಾಗೊಳಿಸಿದ್ದಾರೆ. ಇನ್ನೂ ಬಾಕಿ 20 ಸಾವಿರ ಕೇಸ್‌ಗಳು ವಿಚಾರಣೆಯಲ್ಲಿವೆ. ಹಾಗಾಗಿ ದಲಿತರು 2 ಲಕ್ಷ ಎಕರೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ನಾಶವಾಗಿದೆ.  ವಿಶೇಷ ಕಾಯ್ದೆಯಾಗಿರುವುದರಿಂದ ಕಾಲಮಿತಿ ಅನ್ವಯಿಸುವುದಿಲ್ಲ. ಆದರೂ ಬಲಾಢ್ಯರ ಕುತಂತ್ರದಿಂದ ಇದಕ್ಕೆಲ್ಲ ನೇರ ಕಾರಣ ಕಂದಾಯ ಇಲಾಖೆಯ ನೋಂದಣಿಧಿಕಾರಿಗಳು, VA, RI, ತಹಸೀಲ್ದಾರ್ ಸೇರಿಕೊಂಡು ದಲಿತರಿಗೆ ಕೊಳ್ಳಿ ಇಡುತ್ತಿದ್ದಾರೆ.

PTCL ಕಾಯ್ದೆಗೆ 10.12.11ಕಾಲಂ ರಂತೆ ಯಾವ ಕಾಲ ಮಿತಿ ಇದಕ್ಕೆ ಅನ್ವಯವಾಗುವುದಿಲ್ಲ.
ಎ ಸಿ ಗೆ ಅರ್ಜಿ ಹಾಕಿ ನಂತರ ಮೇಲ್ಮನವಿಗೆ 90 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಿತಿ ಇದೆ. ಹಾಗೆ ಕಾಲ ಮಿತಿಗೆ ಕಾರಣ ತಿಳಿಸಿ ಮುಂದುವರೆಯಲು ಅವಕಾಶವಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಶೋಷಿತರ ದಲಿತರ ಪರ ಕಾಳಜಿಯುಳ್ಳ ಸಂಘಟಕರು ಈ ಹೋರಾಟದ ಪರ ನಿಲ್ಲಬೇಕು. ಒಂದಷ್ಟು ಈ ವಿಷಯ ಕುರಿತು ಅಧ್ಯಯನ ಮಾಡಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಕ್ಕೆ ಈ ಕಾಯ್ದೆ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಒತ್ತಡ ತಂದು ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರಿಗೆ ಭೂಮಿ ವಾಪಸ್ ಕೊಡಿಸಲು ಎಲ್ಲಾ ಹೋರಾಟಗಾರರು ಮುಂದಾಗಬೇಕು. ಚುನಾವಣೆಯಲ್ಲಿ ಬೀದಿಗಿಳಿದು ಹೋರಾಟ ಮಾಡಿದಂತೆ ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 183 ದಿನಗಳಿಂದ ನಡೆಯುತ್ತಿರುವ ಭೂ ಹೀನ ಬಡವರ ಹೆಗಲಿಗೆ ಹೆಗಲೊಡ್ಡೋಣ.

ಕಂದೇಗಾಲ ಶ್ರೀನಿವಾಸ
ರಾಜ್ಯ ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಬೆಂಗಳೂರು

ಇದನ್ನೂ ಓದಿ; ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...