Homeಕರ್ನಾಟಕಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಂಚೇಗೌಡ ಎಂಬುವವರು 1982/83ರಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

- Advertisement -
- Advertisement -

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ನೆಲದ ಹಕ್ಕಿಗಾಗಿ 183ದಿನಗಳಿಂದ PTCL ಕಾಯ್ದೆ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಇದುವರೆಗೂ ಈ ವಿಷಯ ಕುರಿತು ಸರ್ಕಾರ ದ ಜೊತೆ ಅಂದಿನಿಂದ ಇಂದಿನ ವರೆಗೂ ಯಾವ ಮಂತ್ರಿ ಶಾಸಕರು ಭೇಟಿ ನೀಡಿಲ್ಲ ಎಂಬುದು ದುರಂತ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೋಷಿತ ಜನರ ಜೀವನ ನಿರ್ವಹಣೆಗೆ ಇದ್ದ ಜಮೀನುಗಳನ್ನ ಕೆಲವು ಮುಂದುವರೆದ ಜಾತಿ ಜನ ಆಸೆ ಆಮಿಷಗಳನ್ನು ತೋರಿಸಿ, ಬಗ್ಗದಿದ್ದರೆ ದೌರ್ಜನ್ಯವೆಸಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದರಿಂದ ಶೋಷಿತರು ಇದ್ದ ಭೂಮಿ ಕಳೆದುಕೊಂಡು ಭೂ ಹೀನರಾಗಿದ್ದಾರೆ. ಇದನ್ನು ಮನಗಂಡ ಅಂದಿನ ಮಂತ್ರಿ ಶ್ರೀ ಬಸವಲಿಂಗಪ್ಪ ಮತ್ತು ರಾಜ್ಯ ಸರ್ಕಾರ 1978 ತಾ 18/12/1978ರಲ್ಲಿ ಸಂವಿಧಾನ ದ ಆರ್ಟಿಕಲ್ 31ಸಿ ಮತ್ತು 46ರ ರೀತ್ಯ (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಭೂ ಪರೆಬಾರೆ) ಕಾಯ್ದೆ ಜಾರಿಗೆ ತಂತು. ಈ ಕಾಯ್ದೆಯು 1979ರ ಜನವರಿಯಿಂದ ಜಾರಿಗೆ ತಯಾರಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ.

ಈ ಕಾಯ್ದೆ ಇದ್ದಾಗ್ಯೂ ರಾಜ್ಯದಲ್ಲಿ ಸಾವಿರಾರು ಎಕರೆ ಭೂಮಿಯನ್ನ ಪರಬಾರೆ ಮಾಡಲಾಗಿದೆ. ಒಂದು ಅಂದಾಜಿನಿನಂತೆ ಹತ್ತು ಸಾವಿರ ಎಕರೆ ಭೂಮಿ ಮಾರಾಟಗೊಂಡಿದೆ. ಇದುವರೆಗೂ ಸಂಬಂಧ ಸಲ್ಲಿಸಿದ್ದ 1150 ಪ್ರಕರಣಗಳು ಇತ್ಯರ್ಥಗೊಂಡು ಮಾರಿದ್ದ ಭೂಮಿ ವಾಪಸ್ ಪಡೆಯಲಾಗಿದೆ.

ನಗರಪ್ರದೇಶಗಳ ಅಂದರೆ ಬೆಂಗಳೂರು ಸುತ್ತಮುತ್ತ ಹಾಗೂ ಜಿಲ್ಲಾ ಕೇಂದ್ರಗಳ ಸುತ್ತ ಬೆಲೆ ಬಾಳುವ ದಲಿತರ ಜಮೀನು ಗಳನ್ನ ಪುಸಲಾಯಿಸಿ ಒಂದಷ್ಟು ಹೆಚ್ಚು ಹಣ ನೀಡಿ ಖರೀದಿಸಿರುವ ಭೂ ಮಾಫಿಯ ರಾಜಕಾರಣಿಗಳು, ಬಂಡವಾಳಿಗರು ಈ ಕಾಯ್ದೆ ಪ್ರಕಾರ ವಾಪಸ್ ಜಮೀನು ಪಡೆದುಕೊಳ್ಳುವ ಆಲೋಚನೆ ಮಾಡದಂತೆ ದಲಿತರಿಗೆ ಕೆಲವು ಪುಡಾರಿಗಳ ಬೆದರಿಕೆ ಮತ್ತು ಕೆಲವು ಸ್ವಯಂ ಘೋಷಿತವಾದ ದಲಿತ ಸಂಘಟನೆಗಳ ಮುಖಂಡರ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ತರಾತುರಿಯಲ್ಲಿ ಕಂದಾಯ ಇಲಾಖೆ ಎ ಸಿ, ಡಿ ಸಿ ಗಳ ಜೊತೆ ಶಾಮೀಲಾಗಿ ಈ PTCL ಕಾಯ್ದೆಯನ್ನ ಹಣದ ಹಗ್ಗದಿಂದ ಬಂಧಿಸಿದ್ದಾರೆ.

ಮಂಚೇಗೌಡ ಎಂಬುವವರು 1982/83ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಅವರು 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿದೆ ಎಂದು ವಾದಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನ ತಿರಸ್ಕಾರ ಮಾಡಿ PTCL ಕಾಯ್ದೆ 1963 ಕಾಯ್ದೆಗೆ ಒಳಪಡುವುದಿಲ್ಲ ಎಂದಿದೆ.

ಈ ಕಾಯ್ದೆ ಮೊದಲು 1984 ನಂತರ 2ನೇ ಬಾರಿ 1992 ಮುಂದುವರೆದು 2012ರ ಸುತ್ತೋಲೆಗಳ ಮೂಲಕ ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಗಳು ಮೂಲ ಮಂಜೂರುದಾರರಿಗೆ ಭೂಮಿಯನ್ನ ಪುನರ್ ಸ್ಥಾಪಿಸಲು ನಿಯಮ ರೂಪಿಸಿದೆ. ಹೀಗಿರುವಾಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಅಧಿಕಾರಿಗಳು ಇದನ್ನ ಮನೆಗಾಣದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡ ಹಟ್ಟಿ ಗ್ರಾಮದ ಸರ್ವೆ ನಂ 24ಮತ್ತು 24/ಎ ವಿಷಯ ಅಂದರೆ ಖರೀದಿದಾರ ನೆಕ್ಕುಂಟಿ ರಾಜಲಕ್ಷ್ಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 28/10/2017ರಂದು ಚೆಂದಿಲಾಲ್ ಕೇಸ್ ಬಿಹಾರದ ಜನರಲ್ ಕೇಸ್ ಅನ್ನು ಉದಾಹರಣೆ ನೀಡಿ ಇದು 25ವರ್ಷದ ಹಿಂದೆ ಪರೆಬಾರೆ ಆಗಿದೆ. ಹಾಗಾಗಿ 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿ ಮಾರಾಟ ಸರಿಯಾಗಿದೆ ಎಂದು ತೀರ್ಪು ನೀಡಿದೆ. ಆದರೆ ಮಂಚೇಗೌಡರ ವಿಷಯದಲ್ಲಿ 1984ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ನೆಕ್ಕುಂಟಿ ಪ್ರಕರಣದ ಸರ್ವೆನಂಬರ್ ಬೇರೆ ಬೇರೆ ಇದೆ ಎಂದು ಎ ಸಿ, ಡಿ ಸಿ ಆದೇಶ ಹೊರಡಿಸಿದ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರದ ಪರ ವಕೀಲರು ಸರಿಯಾಗಿ ದಾಖಲಿಸದೆ ಈ ತೀರ್ಪು ನೀಡಿದೆ. ಇದನ್ನ ಹಿಡಿದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ಮೈಸೂರು ಇನ್ನೂ ಬೇರೆ ಬೇರೆ ಕಡೆ PTCL ಕಾಯ್ದೆ ವಿರುದ್ಧ ಡಿ.ಸಿ ಕೋರ್ಟುಗಳು ತೀರ್ಪು ನೀಡಲಾಗುತ್ತಿದೆ.

ಇದು ಕಾಯ್ದೆ 1978ರ ಕಲಂ5(1)ಎ ರಂತೆ 1964ರ ಕಲಂ(39)ವಿವರಣೆಯನ್ನ ಎ ಸಿ, ಡಿ ಸಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ನೆಕ್ಕುಂಟಿ ಪ್ರಕರಣವನ್ನು ಮುಂದಿಡುವ ಎ ಸಿ ಮತ್ತು ಡಿ ಸಿ ಅಧಿಕಾರಿಗಳು 2019ರ ಸುಪ್ರೀಂಕೋರ್ಟ್ ದಲಿತ ರೈತರ ಪರವಾದ ತೀರ್ಪು ನೀಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಜಾರ್ಖಂಡ್ SC/ST ಜಮೀನು ಕಾಯ್ದೆ ಪ್ರಕಾರ 3/3/2020 ರ(SAR CIV 42644)ತೀರ್ಪು ನೀಡಿದೆ. ಇದನ್ನ ಯಾಕೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ? ಇದು ಇಂಡಿಯನ್ ಲಿಮಿಟೇಷನ್ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಇದನ್ನ ತಿಳಿಯದ ಎ ಸಿ, ಡಿ ಸಿ ಅಧಿಕಾರಿಗಳು ಭೂ ಮಾಲೀಕರು, ಮಾಫಿಯ ರಾಜಕಾರಣಿಗಳ ಮತ್ತು ತಮ್ಮ ಹೊತ್ತಿನ ಕೂಳಿಗೆ ತಮ್ಮವರನ್ನೆ ಬಡಿದು ತಿನ್ನಲು ನಿಂತಿರುವ ಲೆಟರ್ ಪ್ಯಾಡ್ ಸ್ವಯಂ ಘೋಷಿತ ಏಜೆಂಟ್ ಗಳಿಂದ ಇಂದು ಈ PTCL ಕಾಯ್ದೆ ಜಾರಿಯಾಗದೆ ನಿಂತಿದೆ.

ನೆಕ್ಕಂಟಿ ಕೇಸ್ ನಿಂದ ಇಲ್ಲಿಯತನಕ ಸುಮಾರು 25 ಸಾವಿರ ಕೇಸ್‌ಗಳನ್ನು ಡಿಸಿಗಳು ವಜಾಗೊಳಿಸಿದ್ದಾರೆ. ಇನ್ನೂ ಬಾಕಿ 20 ಸಾವಿರ ಕೇಸ್‌ಗಳು ವಿಚಾರಣೆಯಲ್ಲಿವೆ. ಹಾಗಾಗಿ ದಲಿತರು 2 ಲಕ್ಷ ಎಕರೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ನಾಶವಾಗಿದೆ.  ವಿಶೇಷ ಕಾಯ್ದೆಯಾಗಿರುವುದರಿಂದ ಕಾಲಮಿತಿ ಅನ್ವಯಿಸುವುದಿಲ್ಲ. ಆದರೂ ಬಲಾಢ್ಯರ ಕುತಂತ್ರದಿಂದ ಇದಕ್ಕೆಲ್ಲ ನೇರ ಕಾರಣ ಕಂದಾಯ ಇಲಾಖೆಯ ನೋಂದಣಿಧಿಕಾರಿಗಳು, VA, RI, ತಹಸೀಲ್ದಾರ್ ಸೇರಿಕೊಂಡು ದಲಿತರಿಗೆ ಕೊಳ್ಳಿ ಇಡುತ್ತಿದ್ದಾರೆ.

PTCL ಕಾಯ್ದೆಗೆ 10.12.11ಕಾಲಂ ರಂತೆ ಯಾವ ಕಾಲ ಮಿತಿ ಇದಕ್ಕೆ ಅನ್ವಯವಾಗುವುದಿಲ್ಲ.
ಎ ಸಿ ಗೆ ಅರ್ಜಿ ಹಾಕಿ ನಂತರ ಮೇಲ್ಮನವಿಗೆ 90 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಿತಿ ಇದೆ. ಹಾಗೆ ಕಾಲ ಮಿತಿಗೆ ಕಾರಣ ತಿಳಿಸಿ ಮುಂದುವರೆಯಲು ಅವಕಾಶವಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಶೋಷಿತರ ದಲಿತರ ಪರ ಕಾಳಜಿಯುಳ್ಳ ಸಂಘಟಕರು ಈ ಹೋರಾಟದ ಪರ ನಿಲ್ಲಬೇಕು. ಒಂದಷ್ಟು ಈ ವಿಷಯ ಕುರಿತು ಅಧ್ಯಯನ ಮಾಡಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಕ್ಕೆ ಈ ಕಾಯ್ದೆ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಒತ್ತಡ ತಂದು ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರಿಗೆ ಭೂಮಿ ವಾಪಸ್ ಕೊಡಿಸಲು ಎಲ್ಲಾ ಹೋರಾಟಗಾರರು ಮುಂದಾಗಬೇಕು. ಚುನಾವಣೆಯಲ್ಲಿ ಬೀದಿಗಿಳಿದು ಹೋರಾಟ ಮಾಡಿದಂತೆ ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 183 ದಿನಗಳಿಂದ ನಡೆಯುತ್ತಿರುವ ಭೂ ಹೀನ ಬಡವರ ಹೆಗಲಿಗೆ ಹೆಗಲೊಡ್ಡೋಣ.

ಕಂದೇಗಾಲ ಶ್ರೀನಿವಾಸ
ರಾಜ್ಯ ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಬೆಂಗಳೂರು

ಇದನ್ನೂ ಓದಿ; ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....