Homeಕರ್ನಾಟಕಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಂಚೇಗೌಡ ಎಂಬುವವರು 1982/83ರಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

- Advertisement -
- Advertisement -

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ನೆಲದ ಹಕ್ಕಿಗಾಗಿ 183ದಿನಗಳಿಂದ PTCL ಕಾಯ್ದೆ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಇದುವರೆಗೂ ಈ ವಿಷಯ ಕುರಿತು ಸರ್ಕಾರ ದ ಜೊತೆ ಅಂದಿನಿಂದ ಇಂದಿನ ವರೆಗೂ ಯಾವ ಮಂತ್ರಿ ಶಾಸಕರು ಭೇಟಿ ನೀಡಿಲ್ಲ ಎಂಬುದು ದುರಂತ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೋಷಿತ ಜನರ ಜೀವನ ನಿರ್ವಹಣೆಗೆ ಇದ್ದ ಜಮೀನುಗಳನ್ನ ಕೆಲವು ಮುಂದುವರೆದ ಜಾತಿ ಜನ ಆಸೆ ಆಮಿಷಗಳನ್ನು ತೋರಿಸಿ, ಬಗ್ಗದಿದ್ದರೆ ದೌರ್ಜನ್ಯವೆಸಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದರಿಂದ ಶೋಷಿತರು ಇದ್ದ ಭೂಮಿ ಕಳೆದುಕೊಂಡು ಭೂ ಹೀನರಾಗಿದ್ದಾರೆ. ಇದನ್ನು ಮನಗಂಡ ಅಂದಿನ ಮಂತ್ರಿ ಶ್ರೀ ಬಸವಲಿಂಗಪ್ಪ ಮತ್ತು ರಾಜ್ಯ ಸರ್ಕಾರ 1978 ತಾ 18/12/1978ರಲ್ಲಿ ಸಂವಿಧಾನ ದ ಆರ್ಟಿಕಲ್ 31ಸಿ ಮತ್ತು 46ರ ರೀತ್ಯ (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಭೂ ಪರೆಬಾರೆ) ಕಾಯ್ದೆ ಜಾರಿಗೆ ತಂತು. ಈ ಕಾಯ್ದೆಯು 1979ರ ಜನವರಿಯಿಂದ ಜಾರಿಗೆ ತಯಾರಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ.

ಈ ಕಾಯ್ದೆ ಇದ್ದಾಗ್ಯೂ ರಾಜ್ಯದಲ್ಲಿ ಸಾವಿರಾರು ಎಕರೆ ಭೂಮಿಯನ್ನ ಪರಬಾರೆ ಮಾಡಲಾಗಿದೆ. ಒಂದು ಅಂದಾಜಿನಿನಂತೆ ಹತ್ತು ಸಾವಿರ ಎಕರೆ ಭೂಮಿ ಮಾರಾಟಗೊಂಡಿದೆ. ಇದುವರೆಗೂ ಸಂಬಂಧ ಸಲ್ಲಿಸಿದ್ದ 1150 ಪ್ರಕರಣಗಳು ಇತ್ಯರ್ಥಗೊಂಡು ಮಾರಿದ್ದ ಭೂಮಿ ವಾಪಸ್ ಪಡೆಯಲಾಗಿದೆ.

ನಗರಪ್ರದೇಶಗಳ ಅಂದರೆ ಬೆಂಗಳೂರು ಸುತ್ತಮುತ್ತ ಹಾಗೂ ಜಿಲ್ಲಾ ಕೇಂದ್ರಗಳ ಸುತ್ತ ಬೆಲೆ ಬಾಳುವ ದಲಿತರ ಜಮೀನು ಗಳನ್ನ ಪುಸಲಾಯಿಸಿ ಒಂದಷ್ಟು ಹೆಚ್ಚು ಹಣ ನೀಡಿ ಖರೀದಿಸಿರುವ ಭೂ ಮಾಫಿಯ ರಾಜಕಾರಣಿಗಳು, ಬಂಡವಾಳಿಗರು ಈ ಕಾಯ್ದೆ ಪ್ರಕಾರ ವಾಪಸ್ ಜಮೀನು ಪಡೆದುಕೊಳ್ಳುವ ಆಲೋಚನೆ ಮಾಡದಂತೆ ದಲಿತರಿಗೆ ಕೆಲವು ಪುಡಾರಿಗಳ ಬೆದರಿಕೆ ಮತ್ತು ಕೆಲವು ಸ್ವಯಂ ಘೋಷಿತವಾದ ದಲಿತ ಸಂಘಟನೆಗಳ ಮುಖಂಡರ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ತರಾತುರಿಯಲ್ಲಿ ಕಂದಾಯ ಇಲಾಖೆ ಎ ಸಿ, ಡಿ ಸಿ ಗಳ ಜೊತೆ ಶಾಮೀಲಾಗಿ ಈ PTCL ಕಾಯ್ದೆಯನ್ನ ಹಣದ ಹಗ್ಗದಿಂದ ಬಂಧಿಸಿದ್ದಾರೆ.

ಮಂಚೇಗೌಡ ಎಂಬುವವರು 1982/83ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಅವರು 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿದೆ ಎಂದು ವಾದಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನ ತಿರಸ್ಕಾರ ಮಾಡಿ PTCL ಕಾಯ್ದೆ 1963 ಕಾಯ್ದೆಗೆ ಒಳಪಡುವುದಿಲ್ಲ ಎಂದಿದೆ.

ಈ ಕಾಯ್ದೆ ಮೊದಲು 1984 ನಂತರ 2ನೇ ಬಾರಿ 1992 ಮುಂದುವರೆದು 2012ರ ಸುತ್ತೋಲೆಗಳ ಮೂಲಕ ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಗಳು ಮೂಲ ಮಂಜೂರುದಾರರಿಗೆ ಭೂಮಿಯನ್ನ ಪುನರ್ ಸ್ಥಾಪಿಸಲು ನಿಯಮ ರೂಪಿಸಿದೆ. ಹೀಗಿರುವಾಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಅಧಿಕಾರಿಗಳು ಇದನ್ನ ಮನೆಗಾಣದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡ ಹಟ್ಟಿ ಗ್ರಾಮದ ಸರ್ವೆ ನಂ 24ಮತ್ತು 24/ಎ ವಿಷಯ ಅಂದರೆ ಖರೀದಿದಾರ ನೆಕ್ಕುಂಟಿ ರಾಜಲಕ್ಷ್ಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 28/10/2017ರಂದು ಚೆಂದಿಲಾಲ್ ಕೇಸ್ ಬಿಹಾರದ ಜನರಲ್ ಕೇಸ್ ಅನ್ನು ಉದಾಹರಣೆ ನೀಡಿ ಇದು 25ವರ್ಷದ ಹಿಂದೆ ಪರೆಬಾರೆ ಆಗಿದೆ. ಹಾಗಾಗಿ 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿ ಮಾರಾಟ ಸರಿಯಾಗಿದೆ ಎಂದು ತೀರ್ಪು ನೀಡಿದೆ. ಆದರೆ ಮಂಚೇಗೌಡರ ವಿಷಯದಲ್ಲಿ 1984ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ನೆಕ್ಕುಂಟಿ ಪ್ರಕರಣದ ಸರ್ವೆನಂಬರ್ ಬೇರೆ ಬೇರೆ ಇದೆ ಎಂದು ಎ ಸಿ, ಡಿ ಸಿ ಆದೇಶ ಹೊರಡಿಸಿದ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರದ ಪರ ವಕೀಲರು ಸರಿಯಾಗಿ ದಾಖಲಿಸದೆ ಈ ತೀರ್ಪು ನೀಡಿದೆ. ಇದನ್ನ ಹಿಡಿದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ಮೈಸೂರು ಇನ್ನೂ ಬೇರೆ ಬೇರೆ ಕಡೆ PTCL ಕಾಯ್ದೆ ವಿರುದ್ಧ ಡಿ.ಸಿ ಕೋರ್ಟುಗಳು ತೀರ್ಪು ನೀಡಲಾಗುತ್ತಿದೆ.

ಇದು ಕಾಯ್ದೆ 1978ರ ಕಲಂ5(1)ಎ ರಂತೆ 1964ರ ಕಲಂ(39)ವಿವರಣೆಯನ್ನ ಎ ಸಿ, ಡಿ ಸಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ನೆಕ್ಕುಂಟಿ ಪ್ರಕರಣವನ್ನು ಮುಂದಿಡುವ ಎ ಸಿ ಮತ್ತು ಡಿ ಸಿ ಅಧಿಕಾರಿಗಳು 2019ರ ಸುಪ್ರೀಂಕೋರ್ಟ್ ದಲಿತ ರೈತರ ಪರವಾದ ತೀರ್ಪು ನೀಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಜಾರ್ಖಂಡ್ SC/ST ಜಮೀನು ಕಾಯ್ದೆ ಪ್ರಕಾರ 3/3/2020 ರ(SAR CIV 42644)ತೀರ್ಪು ನೀಡಿದೆ. ಇದನ್ನ ಯಾಕೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ? ಇದು ಇಂಡಿಯನ್ ಲಿಮಿಟೇಷನ್ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಇದನ್ನ ತಿಳಿಯದ ಎ ಸಿ, ಡಿ ಸಿ ಅಧಿಕಾರಿಗಳು ಭೂ ಮಾಲೀಕರು, ಮಾಫಿಯ ರಾಜಕಾರಣಿಗಳ ಮತ್ತು ತಮ್ಮ ಹೊತ್ತಿನ ಕೂಳಿಗೆ ತಮ್ಮವರನ್ನೆ ಬಡಿದು ತಿನ್ನಲು ನಿಂತಿರುವ ಲೆಟರ್ ಪ್ಯಾಡ್ ಸ್ವಯಂ ಘೋಷಿತ ಏಜೆಂಟ್ ಗಳಿಂದ ಇಂದು ಈ PTCL ಕಾಯ್ದೆ ಜಾರಿಯಾಗದೆ ನಿಂತಿದೆ.

ನೆಕ್ಕಂಟಿ ಕೇಸ್ ನಿಂದ ಇಲ್ಲಿಯತನಕ ಸುಮಾರು 25 ಸಾವಿರ ಕೇಸ್‌ಗಳನ್ನು ಡಿಸಿಗಳು ವಜಾಗೊಳಿಸಿದ್ದಾರೆ. ಇನ್ನೂ ಬಾಕಿ 20 ಸಾವಿರ ಕೇಸ್‌ಗಳು ವಿಚಾರಣೆಯಲ್ಲಿವೆ. ಹಾಗಾಗಿ ದಲಿತರು 2 ಲಕ್ಷ ಎಕರೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ನಾಶವಾಗಿದೆ.  ವಿಶೇಷ ಕಾಯ್ದೆಯಾಗಿರುವುದರಿಂದ ಕಾಲಮಿತಿ ಅನ್ವಯಿಸುವುದಿಲ್ಲ. ಆದರೂ ಬಲಾಢ್ಯರ ಕುತಂತ್ರದಿಂದ ಇದಕ್ಕೆಲ್ಲ ನೇರ ಕಾರಣ ಕಂದಾಯ ಇಲಾಖೆಯ ನೋಂದಣಿಧಿಕಾರಿಗಳು, VA, RI, ತಹಸೀಲ್ದಾರ್ ಸೇರಿಕೊಂಡು ದಲಿತರಿಗೆ ಕೊಳ್ಳಿ ಇಡುತ್ತಿದ್ದಾರೆ.

PTCL ಕಾಯ್ದೆಗೆ 10.12.11ಕಾಲಂ ರಂತೆ ಯಾವ ಕಾಲ ಮಿತಿ ಇದಕ್ಕೆ ಅನ್ವಯವಾಗುವುದಿಲ್ಲ.
ಎ ಸಿ ಗೆ ಅರ್ಜಿ ಹಾಕಿ ನಂತರ ಮೇಲ್ಮನವಿಗೆ 90 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಿತಿ ಇದೆ. ಹಾಗೆ ಕಾಲ ಮಿತಿಗೆ ಕಾರಣ ತಿಳಿಸಿ ಮುಂದುವರೆಯಲು ಅವಕಾಶವಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಶೋಷಿತರ ದಲಿತರ ಪರ ಕಾಳಜಿಯುಳ್ಳ ಸಂಘಟಕರು ಈ ಹೋರಾಟದ ಪರ ನಿಲ್ಲಬೇಕು. ಒಂದಷ್ಟು ಈ ವಿಷಯ ಕುರಿತು ಅಧ್ಯಯನ ಮಾಡಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಕ್ಕೆ ಈ ಕಾಯ್ದೆ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಒತ್ತಡ ತಂದು ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರಿಗೆ ಭೂಮಿ ವಾಪಸ್ ಕೊಡಿಸಲು ಎಲ್ಲಾ ಹೋರಾಟಗಾರರು ಮುಂದಾಗಬೇಕು. ಚುನಾವಣೆಯಲ್ಲಿ ಬೀದಿಗಿಳಿದು ಹೋರಾಟ ಮಾಡಿದಂತೆ ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 183 ದಿನಗಳಿಂದ ನಡೆಯುತ್ತಿರುವ ಭೂ ಹೀನ ಬಡವರ ಹೆಗಲಿಗೆ ಹೆಗಲೊಡ್ಡೋಣ.

ಕಂದೇಗಾಲ ಶ್ರೀನಿವಾಸ
ರಾಜ್ಯ ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಬೆಂಗಳೂರು

ಇದನ್ನೂ ಓದಿ; ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...