Homeಕರ್ನಾಟಕಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಮಂಚೇಗೌಡ ಎಂಬುವವರು 1982/83ರಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

- Advertisement -
- Advertisement -

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ನೆಲದ ಹಕ್ಕಿಗಾಗಿ 183ದಿನಗಳಿಂದ PTCL ಕಾಯ್ದೆ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಇದುವರೆಗೂ ಈ ವಿಷಯ ಕುರಿತು ಸರ್ಕಾರ ದ ಜೊತೆ ಅಂದಿನಿಂದ ಇಂದಿನ ವರೆಗೂ ಯಾವ ಮಂತ್ರಿ ಶಾಸಕರು ಭೇಟಿ ನೀಡಿಲ್ಲ ಎಂಬುದು ದುರಂತ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೋಷಿತ ಜನರ ಜೀವನ ನಿರ್ವಹಣೆಗೆ ಇದ್ದ ಜಮೀನುಗಳನ್ನ ಕೆಲವು ಮುಂದುವರೆದ ಜಾತಿ ಜನ ಆಸೆ ಆಮಿಷಗಳನ್ನು ತೋರಿಸಿ, ಬಗ್ಗದಿದ್ದರೆ ದೌರ್ಜನ್ಯವೆಸಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಇದರಿಂದ ಶೋಷಿತರು ಇದ್ದ ಭೂಮಿ ಕಳೆದುಕೊಂಡು ಭೂ ಹೀನರಾಗಿದ್ದಾರೆ. ಇದನ್ನು ಮನಗಂಡ ಅಂದಿನ ಮಂತ್ರಿ ಶ್ರೀ ಬಸವಲಿಂಗಪ್ಪ ಮತ್ತು ರಾಜ್ಯ ಸರ್ಕಾರ 1978 ತಾ 18/12/1978ರಲ್ಲಿ ಸಂವಿಧಾನ ದ ಆರ್ಟಿಕಲ್ 31ಸಿ ಮತ್ತು 46ರ ರೀತ್ಯ (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಭೂ ಪರೆಬಾರೆ) ಕಾಯ್ದೆ ಜಾರಿಗೆ ತಂತು. ಈ ಕಾಯ್ದೆಯು 1979ರ ಜನವರಿಯಿಂದ ಜಾರಿಗೆ ತಯಾರಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ.

ಈ ಕಾಯ್ದೆ ಇದ್ದಾಗ್ಯೂ ರಾಜ್ಯದಲ್ಲಿ ಸಾವಿರಾರು ಎಕರೆ ಭೂಮಿಯನ್ನ ಪರಬಾರೆ ಮಾಡಲಾಗಿದೆ. ಒಂದು ಅಂದಾಜಿನಿನಂತೆ ಹತ್ತು ಸಾವಿರ ಎಕರೆ ಭೂಮಿ ಮಾರಾಟಗೊಂಡಿದೆ. ಇದುವರೆಗೂ ಸಂಬಂಧ ಸಲ್ಲಿಸಿದ್ದ 1150 ಪ್ರಕರಣಗಳು ಇತ್ಯರ್ಥಗೊಂಡು ಮಾರಿದ್ದ ಭೂಮಿ ವಾಪಸ್ ಪಡೆಯಲಾಗಿದೆ.

ನಗರಪ್ರದೇಶಗಳ ಅಂದರೆ ಬೆಂಗಳೂರು ಸುತ್ತಮುತ್ತ ಹಾಗೂ ಜಿಲ್ಲಾ ಕೇಂದ್ರಗಳ ಸುತ್ತ ಬೆಲೆ ಬಾಳುವ ದಲಿತರ ಜಮೀನು ಗಳನ್ನ ಪುಸಲಾಯಿಸಿ ಒಂದಷ್ಟು ಹೆಚ್ಚು ಹಣ ನೀಡಿ ಖರೀದಿಸಿರುವ ಭೂ ಮಾಫಿಯ ರಾಜಕಾರಣಿಗಳು, ಬಂಡವಾಳಿಗರು ಈ ಕಾಯ್ದೆ ಪ್ರಕಾರ ವಾಪಸ್ ಜಮೀನು ಪಡೆದುಕೊಳ್ಳುವ ಆಲೋಚನೆ ಮಾಡದಂತೆ ದಲಿತರಿಗೆ ಕೆಲವು ಪುಡಾರಿಗಳ ಬೆದರಿಕೆ ಮತ್ತು ಕೆಲವು ಸ್ವಯಂ ಘೋಷಿತವಾದ ದಲಿತ ಸಂಘಟನೆಗಳ ಮುಖಂಡರ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ತರಾತುರಿಯಲ್ಲಿ ಕಂದಾಯ ಇಲಾಖೆ ಎ ಸಿ, ಡಿ ಸಿ ಗಳ ಜೊತೆ ಶಾಮೀಲಾಗಿ ಈ PTCL ಕಾಯ್ದೆಯನ್ನ ಹಣದ ಹಗ್ಗದಿಂದ ಬಂಧಿಸಿದ್ದಾರೆ.

ಮಂಚೇಗೌಡ ಎಂಬುವವರು 1982/83ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಈ ಕಾಯ್ದೆ ಸಂವಿಧಾನ ಬದ್ಧವಾಗಿಲ್ಲ ಎಂದು ವಾದಿಸಿ ತನ್ನ ಕ್ರಯ ಊರ್ಜಿತಗೊಳಿಸಿ ಎಂದು ಮನವಿ ಮಾಡಿದ್ದರು. ಅವರು 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿದೆ ಎಂದು ವಾದಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನ ತಿರಸ್ಕಾರ ಮಾಡಿ PTCL ಕಾಯ್ದೆ 1963 ಕಾಯ್ದೆಗೆ ಒಳಪಡುವುದಿಲ್ಲ ಎಂದಿದೆ.

ಈ ಕಾಯ್ದೆ ಮೊದಲು 1984 ನಂತರ 2ನೇ ಬಾರಿ 1992 ಮುಂದುವರೆದು 2012ರ ಸುತ್ತೋಲೆಗಳ ಮೂಲಕ ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಗಳು ಮೂಲ ಮಂಜೂರುದಾರರಿಗೆ ಭೂಮಿಯನ್ನ ಪುನರ್ ಸ್ಥಾಪಿಸಲು ನಿಯಮ ರೂಪಿಸಿದೆ. ಹೀಗಿರುವಾಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ ಸಿ, ಎ ಸಿ ಅಧಿಕಾರಿಗಳು ಇದನ್ನ ಮನೆಗಾಣದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡ ಹಟ್ಟಿ ಗ್ರಾಮದ ಸರ್ವೆ ನಂ 24ಮತ್ತು 24/ಎ ವಿಷಯ ಅಂದರೆ ಖರೀದಿದಾರ ನೆಕ್ಕುಂಟಿ ರಾಜಲಕ್ಷ್ಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 28/10/2017ರಂದು ಚೆಂದಿಲಾಲ್ ಕೇಸ್ ಬಿಹಾರದ ಜನರಲ್ ಕೇಸ್ ಅನ್ನು ಉದಾಹರಣೆ ನೀಡಿ ಇದು 25ವರ್ಷದ ಹಿಂದೆ ಪರೆಬಾರೆ ಆಗಿದೆ. ಹಾಗಾಗಿ 1963ರ ಲಿಮಿಟೇಷನ್ ಕಾಯ್ದೆಗೆ ಒಳಗಾಗಿ ಮಾರಾಟ ಸರಿಯಾಗಿದೆ ಎಂದು ತೀರ್ಪು ನೀಡಿದೆ. ಆದರೆ ಮಂಚೇಗೌಡರ ವಿಷಯದಲ್ಲಿ 1984ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ನೆಕ್ಕುಂಟಿ ಪ್ರಕರಣದ ಸರ್ವೆನಂಬರ್ ಬೇರೆ ಬೇರೆ ಇದೆ ಎಂದು ಎ ಸಿ, ಡಿ ಸಿ ಆದೇಶ ಹೊರಡಿಸಿದ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರದ ಪರ ವಕೀಲರು ಸರಿಯಾಗಿ ದಾಖಲಿಸದೆ ಈ ತೀರ್ಪು ನೀಡಿದೆ. ಇದನ್ನ ಹಿಡಿದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ಮೈಸೂರು ಇನ್ನೂ ಬೇರೆ ಬೇರೆ ಕಡೆ PTCL ಕಾಯ್ದೆ ವಿರುದ್ಧ ಡಿ.ಸಿ ಕೋರ್ಟುಗಳು ತೀರ್ಪು ನೀಡಲಾಗುತ್ತಿದೆ.

ಇದು ಕಾಯ್ದೆ 1978ರ ಕಲಂ5(1)ಎ ರಂತೆ 1964ರ ಕಲಂ(39)ವಿವರಣೆಯನ್ನ ಎ ಸಿ, ಡಿ ಸಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ನೆಕ್ಕುಂಟಿ ಪ್ರಕರಣವನ್ನು ಮುಂದಿಡುವ ಎ ಸಿ ಮತ್ತು ಡಿ ಸಿ ಅಧಿಕಾರಿಗಳು 2019ರ ಸುಪ್ರೀಂಕೋರ್ಟ್ ದಲಿತ ರೈತರ ಪರವಾದ ತೀರ್ಪು ನೀಡಿದ್ದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಜಾರ್ಖಂಡ್ SC/ST ಜಮೀನು ಕಾಯ್ದೆ ಪ್ರಕಾರ 3/3/2020 ರ(SAR CIV 42644)ತೀರ್ಪು ನೀಡಿದೆ. ಇದನ್ನ ಯಾಕೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ? ಇದು ಇಂಡಿಯನ್ ಲಿಮಿಟೇಷನ್ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಇದನ್ನ ತಿಳಿಯದ ಎ ಸಿ, ಡಿ ಸಿ ಅಧಿಕಾರಿಗಳು ಭೂ ಮಾಲೀಕರು, ಮಾಫಿಯ ರಾಜಕಾರಣಿಗಳ ಮತ್ತು ತಮ್ಮ ಹೊತ್ತಿನ ಕೂಳಿಗೆ ತಮ್ಮವರನ್ನೆ ಬಡಿದು ತಿನ್ನಲು ನಿಂತಿರುವ ಲೆಟರ್ ಪ್ಯಾಡ್ ಸ್ವಯಂ ಘೋಷಿತ ಏಜೆಂಟ್ ಗಳಿಂದ ಇಂದು ಈ PTCL ಕಾಯ್ದೆ ಜಾರಿಯಾಗದೆ ನಿಂತಿದೆ.

ನೆಕ್ಕಂಟಿ ಕೇಸ್ ನಿಂದ ಇಲ್ಲಿಯತನಕ ಸುಮಾರು 25 ಸಾವಿರ ಕೇಸ್‌ಗಳನ್ನು ಡಿಸಿಗಳು ವಜಾಗೊಳಿಸಿದ್ದಾರೆ. ಇನ್ನೂ ಬಾಕಿ 20 ಸಾವಿರ ಕೇಸ್‌ಗಳು ವಿಚಾರಣೆಯಲ್ಲಿವೆ. ಹಾಗಾಗಿ ದಲಿತರು 2 ಲಕ್ಷ ಎಕರೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ನಾಶವಾಗಿದೆ.  ವಿಶೇಷ ಕಾಯ್ದೆಯಾಗಿರುವುದರಿಂದ ಕಾಲಮಿತಿ ಅನ್ವಯಿಸುವುದಿಲ್ಲ. ಆದರೂ ಬಲಾಢ್ಯರ ಕುತಂತ್ರದಿಂದ ಇದಕ್ಕೆಲ್ಲ ನೇರ ಕಾರಣ ಕಂದಾಯ ಇಲಾಖೆಯ ನೋಂದಣಿಧಿಕಾರಿಗಳು, VA, RI, ತಹಸೀಲ್ದಾರ್ ಸೇರಿಕೊಂಡು ದಲಿತರಿಗೆ ಕೊಳ್ಳಿ ಇಡುತ್ತಿದ್ದಾರೆ.

PTCL ಕಾಯ್ದೆಗೆ 10.12.11ಕಾಲಂ ರಂತೆ ಯಾವ ಕಾಲ ಮಿತಿ ಇದಕ್ಕೆ ಅನ್ವಯವಾಗುವುದಿಲ್ಲ.
ಎ ಸಿ ಗೆ ಅರ್ಜಿ ಹಾಕಿ ನಂತರ ಮೇಲ್ಮನವಿಗೆ 90 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಿತಿ ಇದೆ. ಹಾಗೆ ಕಾಲ ಮಿತಿಗೆ ಕಾರಣ ತಿಳಿಸಿ ಮುಂದುವರೆಯಲು ಅವಕಾಶವಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಶೋಷಿತರ ದಲಿತರ ಪರ ಕಾಳಜಿಯುಳ್ಳ ಸಂಘಟಕರು ಈ ಹೋರಾಟದ ಪರ ನಿಲ್ಲಬೇಕು. ಒಂದಷ್ಟು ಈ ವಿಷಯ ಕುರಿತು ಅಧ್ಯಯನ ಮಾಡಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರಕ್ಕೆ ಈ ಕಾಯ್ದೆ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಒತ್ತಡ ತಂದು ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರಿಗೆ ಭೂಮಿ ವಾಪಸ್ ಕೊಡಿಸಲು ಎಲ್ಲಾ ಹೋರಾಟಗಾರರು ಮುಂದಾಗಬೇಕು. ಚುನಾವಣೆಯಲ್ಲಿ ಬೀದಿಗಿಳಿದು ಹೋರಾಟ ಮಾಡಿದಂತೆ ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 183 ದಿನಗಳಿಂದ ನಡೆಯುತ್ತಿರುವ ಭೂ ಹೀನ ಬಡವರ ಹೆಗಲಿಗೆ ಹೆಗಲೊಡ್ಡೋಣ.

ಕಂದೇಗಾಲ ಶ್ರೀನಿವಾಸ
ರಾಜ್ಯ ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಬೆಂಗಳೂರು

ಇದನ್ನೂ ಓದಿ; ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...