Homeಮುಖಪುಟದೇಶದ ಬಂದರುಗಳು ಮತ್ತು ನದಿಗಳು ಮಾರಾಟವಾಗುತ್ತಿರುವುದನ್ನು ನೀವು ಬಲ್ಲಿರೇನು?

ದೇಶದ ಬಂದರುಗಳು ಮತ್ತು ನದಿಗಳು ಮಾರಾಟವಾಗುತ್ತಿರುವುದನ್ನು ನೀವು ಬಲ್ಲಿರೇನು?

ಇನ್ನು ಮುಂದೆ ಮಂಗಳೂರು ಬಂದರಿಗೆ ಸೇರಿದ ಕರಾವಳಿ ಪ್ರದೇಶದ ಮೇಲೆ ಸ್ಥಳೀಯ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಅಥವಾ ರಾಜ್ಯ ಸರಕಾರದ ನಿಯಂತ್ರಣವಾಗಲೀ ಇರುವುದಿಲ್ಲ ಮತ್ತು ಅದು ಸ್ಥಳೀಯ ಜನರ ಉಪಯೋಗಕ್ಕಾಗಲೀ ಸಿಗುವುದಿಲ್ಲ.

- Advertisement -
- Advertisement -

“ಸೌಗಂಧ್ ಮುಝೆ ಇಸ್ ಮಿಟ್ಟೀಕೀ, ಮೈ ದೇಶ್ ನಹೀ ಬಿಕನೆ ದೂಂಗಾ” (ನನಗೆ ಈ ಮಣ್ಣಿನ ಆಣೆ, ನಾನು ದೇಶವನ್ನು ಮಾರಲು ಬಿಡುವುದಿಲ್ಲ) ಎಂಬ ಭಾಷಣ ಕೇಳಿ ಚಪ್ಪಾಳೆ ಹೊಡೆದು ನಿಮ್ಮ ಅಮೂಲ್ಯವಾದ ಮತವನ್ನು ಓರ್ವ ಮೋಡಿಗಾರನಿಗೆ ಹಾಕಿ ನಿಶ್ಚಿಂತೆಯಿಂದ ಮನೆಯಲ್ಲಿ ಮಲಗಿದ್ದಿರಿ ಅಲ್ಲವೇ? ಈಗ ನೋಡಿ ನಮ್ಮ ದೇಶ ಹೇಗೆ ಹೇಗೆ ಮಾರಾಟವಾಗುತ್ತಿದೆ ಎಂದು.

ನಿಮ್ಮ ಮತದ ಆಧಾರದಿಂದ ಗಳಿಸಿದ ಸಂಸತ್ತಿನ ಬಹುಮತದ ಮೇರೆಗೆ ಸರಕಾರ ಯಾವ ಯಾವ ಕಾಯ್ದೆಗಳನ್ನು ತರುತ್ತಿದೆ, ತಂದಿದೆ, ಹಳೆಯ ಕಾಯಿದೆಗಳಿಗೆ ತಿದ್ದುಪಡಿ ಮಾಡಿದೆ, ನಿಯಮಾವಳಿ ರೂಪಿಸಿದೆ ಅಥವಾ ಬದಲಾಯಿಸಿದೆ ಎಂಬುದನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಇದರಲ್ಲಿ ದೇಶದ ಜನತೆಗೆ ಯಾವ ರೀತಿ ಮೋಸವಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಕೋಸ್ಟಲ್ ರೆಗ್ಯುಲೇಷನ್ ಜ಼ೊನ್ (ಸಿ ಅರ್ ಝೆಡ್) ನೋಟಿಫಿಕೇಷನ್ 2019ರಲ್ಲಿ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆ ಮಾಡುವುದರಿಂದ ಪರಿಸರ ಸಂರಕ್ಷಣೆ, ಅಭಿವೃದ್ಧಿ, ಉದ್ಯೋಗವಕಾಶ ಮತ್ತು ಜನರ ಜೀವನ ಗುಣಮಟ್ಟ ಹೆಚ್ಚಳ ಆಗುತ್ತದೆ ಎಂದು ಬಾಯಿಯಲ್ಲಿ ಹೇಳುತ್ತಾ ಕೇರಳ ರಾಜ್ಯದ ಕೊಚ್ಚಿ ನಗರದ ಮಾರಾಡುವಿನ ಕರಾವಳಿ ತೀರದ ನಾಲ್ಕು ದೊಡ್ಡ ಬಿಲ್ಡಿಂಗುಗಳನ್ನು ಜನವರಿ 2020ರಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ, ನಗರಪಾಲಿಕೆ ಕೆಡವಿದ ದೃಶ್ಯ ನಿಮಗೆ ನೆನಪಿರಬಹುದು. ಇದನ್ನು ನೀವು ಸ್ವಾಗತಿಸಿರಲೂಬಹುದು.

ಇದೇ ಕಾಯಿದೆಯಡಿ ಗೋವಾ ರಾಜ್ಯದ ಸಂಪೂರ್ಣ 53 ಕಿ.ಮೀ. ಉದ್ದದ ಕರಾವಳಿಯನ್ನು ಮೊರ್ಮುಗಾವ್ ಪೋರ್ಟ್ ಟ್ರಸ್ಟಿ (ಎಂಪಿಟಿ) ಗೆ ಹಸ್ತಾಂತರಿಸಿದೆ ಎಂಬ ಸುದ್ದಿ ಇದೆ ಆದರೆ ಎಂಪಿಟಿ ತನಗೆ ಕೇಂದ್ರ ಸರಕಾರದ ಈ ಸುತ್ತೋಲೆ ಸಿಕ್ಕೇ ಇಲ್ಲ ಎಂದು ಹೇಳಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಬುಲ್ಡೋಜರ್ ಮೂಲಕ ಪಾರಿತಗೊಂಡ ಮೇಜರ್ ಪೋರ್ಟ್ ಅಥಾರಿಟೀಸ್ ಆಕ್ಟ್ 2021ರ ಸೆಕ್ಷನ್ 21, 22(2) ಮತ್ತು 22(3)ರ ಪ್ರಕಾರ ಯಾವುದೇ ಬಂದರಿನ ಆಡಳಿತ ಮಂಡಳಿ (ಬೋರ್ಡ್) ಅದಕ್ಕೆ ಸೇರಿದ ಎಲ್ಲಾ ಆಸ್ತಿಗಳ ಅಭಿವೃದ್ಧಿಯನ್ನು ತನ್ನ ಮನಸೋ ಇಚ್ಛೆ ಮಾಡಬಹುದು. ಇದಕ್ಕೆ ಯಾವುದೇ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಅಥವಾ ರಾಜ್ಯ ಸರಕಾರದ ಪರವಾನಗಿ ಬೇಕಿಲ್ಲ ಅಥವಾ ಸ್ಥಳೀಯ ಕಾನೂನು ಅಡ್ಡ ಬರುವುದಿಲ್ಲ ಎಂದು ಹೇಳುತ್ತದೆ.

ಹಲವು ರಾಜ್ಯಗಳಲ್ಲಿರುವ ಬಂದರಿನ ಸಮಗ್ರ ಆಸ್ತಿಯನ್ನು, ರಾಜ್ಯ ಸರಕಾರದ ಸಮ್ಮತಿಯಿಲ್ಲದೇ, ಕೇಂದ್ರ ಸರಕಾರ ಈ ದೊಡ್ಡ ಬಂದರುಗಳ ಪೋರ್ಟ್ ಟ್ರಸ್ಟಿನ ಸುಪರ್ದಿಗೆ ಈಗಾಗಲೇ ವರ್ಗಾಯಿಸಿದೆ. ಇದರಲ್ಲಿ ನಮ್ಮ ಕರ್ನಾಟಕದ ಹೊಸ ಮಂಗಳೂರು ಬಂದರೂ ಸಹ ಸೇರಿದೆ. ಅಂದರೆ ಇನ್ನು ಮುಂದೆ ಮಂಗಳೂರು ಬಂದರಿಗೆ ಸೇರಿದ ಕರಾವಳಿ ಪ್ರದೇಶದ ಮೇಲೆ ಸ್ಥಳೀಯ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಅಥವಾ ರಾಜ್ಯ ಸರಕಾರದ ನಿಯಂತ್ರಣವಾಗಲೀ ಇರುವುದಿಲ್ಲ ಮತ್ತು ಅದು ಸ್ಥಳೀಯ ಜನರ ಉಪಯೋಗಕ್ಕಾಗಲೀ ಸಿಗುವುದಿಲ್ಲ. ಅಂದರೆ ಕರಾವಳಿಯ “ಬೀಚ್” ಇನ್ನು ಮುಂದೆ “ಕ್ಲೋಸ್”. ಕರಾವಳಿಯ ಮೀನುಗಾರರ ಜೀವನ ನೀರುಪಾಲು.

ಇದೇ ರೀತಿ ಇನ್ನೆರಡು ಕಾಯಿದೆ ಇನ್ಲ್ಯಾಂಡ್ ವಾಟರ್ವೇ ಅಥಾರಿಟೀಸ್ ಆಕ್ಟ್ 2020 ಮತ್ತು ನ್ಯಾಷನಲ್ ವಾಟರ್ವೇಸ್ ಆಕ್ಟ್ 2016 ಇವನ್ನು ಒಟ್ಟಾರೆ ಸೇರಿಸಿ ನೋಡಿದಾಗ ಕರ್ನಾಟಕದ ಹಲವಾರು ನದಿಗಳನ್ನು ರಾಷ್ಟ್ರೀಯ ಜಲಮಾರ್ಗ ಎಂದು ಘೋಷಿಸಲಾಗಿದೆ. ಇದರಲ್ಲಿ ನಮ್ಮ ಭೀಮಾ, ಘಟಪ್ರಭಾ, ಕಬಿನಿ, ಕಾಳೀನದಿ, ಕೃಷ್ಣಾ, ಮಲಪ್ರಭಾ, ನೇತ್ರಾವತಿ, ಶರಾವತಿ, ತುಂಗಭದ್ರಾ, ಉದಯಾವರ ಮುಂತಾದ ನದಿಗಳು ಸೇರಿವೆ. ನಮ್ಮ ನದಿಗಳು ರಾಷ್ಟ್ರೀಯ ಜಲಮಾರ್ಗ ಆದರೆ ತಪ್ಪೇನು, ರಾಷ್ಟ್ರೀಯ ಹೆದ್ದಾರಿಗಳು ನಮ್ಮ ರಾಜ್ಯದಲ್ಲಿ ಇಲ್ಲವೇ ಎಂದು ನೀವು ಅನ್ನಬಹುದು. ಇನ್ಲ್ಯಾಂಡ್ ವಾಟರ್ವೇ ಅಥಾರಿಟೀಸ್ ಆಕ್ಟ್ ನಿಯಮದ ಪ್ರಕಾರ ಈ ರಾಷ್ಟ್ರೀಯ ನದಿಗಳು ರಾಜ್ಯದ ಸ್ವತ್ತು ಆಗುವುದಿಲ್ಲ. ಇವು ಕೇಂದ್ರ ಸರಕಾರದ ಸಂಸ್ಠೆಯಾದ “ಇನ್ಲ್ಯಾಂಡ್ ವಾಟರ್ವೇ ಅಥಾರಿಟಿ ಆಫ್ ಇಂಡಿಯಾ”ದ ಸ್ವತ್ತು ಆಗುತ್ತದೆ. ಇದೇ ಕಾಯಿದೆಯ ಸೆಕ್ಷನ್ 2ರ ಪ್ರಕಾರ “ಅಪರ್ಟುನೆಂಟ್ ಲ್ಯಾಂಡ್” ಅಂದರೆ ನದಿಯ ಎರಡೂ ಬದಿಯಲ್ಲಿ ಹೊಂದಿಕೊಂಡಿರುವಂತಹ ಜಮೀನು, ಅದನ್ನು ಮಾರ್ಕ್ ಮಾಡಿರಲಿ ಅಥವಾ ಬಿಟ್ಟಿರಲಿ, ಅದೂ ಸಹ ಇನ್ಲ್ಯಾಂಡ್ ವಾಟರ್ವೇ ಅಥಾರಿಟಿ ಆಫ್ ಇಂಡಿಯಾದ ಸ್ವತ್ತು ಆಗುತ್ತದೆ. ಈ ನೆಲವನ್ನೂ ಸಹ ಅಥಾರಿಟಿಯವರು ತಮ್ಮ ಮನಸೋ ಇಚ್ಛೆ ಅಭಿವೃದ್ಧಿ ಮಾಡಬಹುದು ಮತ್ತು ಇದರಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಅಥವಾ ರಾಜ್ಯ ಸರಕಾರದ ನಿಯಂತ್ರಣವಾಗಲೀ ಇರುವುದಿಲ್ಲ ಮತ್ತು ಸ್ಥಳೀಯ ಜನರ ಉಪಯೋಗಕ್ಕಾಗಲೀ ಸಿಗುವುದಿಲ್ಲ. ಅಂದರೆ ನದಿ ತೀರದ ಜನರ ಪಾಡು ನೀರು ಪಾಲು.

ಗೋವಾ ರಾಜ್ಯದ ಜಿ ಆರ್ ಇ ಎಂಬ ಸಂಸ್ಥೆ ಮತ್ತು ರಾಷ್ಟ್ರೀಯ ಮೀನುಗಾಗರ ಸಂಘ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸಿ ಅರ್ ಝೆಡ್ ನೋಟಿಫಿಕೇಷನ್ 2019, ಮೇಜರ್ ಪೋರ್ಟ್ ಅಥಾರಿಟೀಸ್ ಆಕ್ಟ್ 2021 ಮತ್ತು ನ್ಯಾಷನಲ್ ವಾಟರ್ವೇಸ್ ಆಕ್ಟ್ 2016 ಇವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ಲ್ಯಾಂಡ್ ವಾಟರ್ವೇ ಅಥಾರಿಟೀಸ್ ಆಕ್ಟ್ ಸೆಕ್ಷನ್ 26ರ ಅನ್ವಯ “ಸಾರ್ವಜನಿಕ ಅವಶ್ಯಕತೆಗೆ” ಬೇಕಾದಷ್ಟು ನದಿ ತೀರದ ಜಮೀನನ್ನು ಅಥಾರಿಟಿ ಅಧಿಗ್ರಹಿಸಬಹುದು ಮತ್ತು ಅವರಿಂದ ಸಾಧ್ಯವಾಗದೇ ಇದ್ದಲ್ಲಿ ರಾಜ್ಯ ಸರಕಾರ ಅದನ್ನು ಅಧಿಗ್ರಹಿಸಿ ಅಥಾರಿಟಿಗೆ ಹಸ್ತಾಂತರಿಸಬೇಕು. ಆದರೆ ಈ ಜಮೀನಿನ ಮೇಲೆ ಸ್ಥಳೀಯ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಅಥವಾ ರಾಜ್ಯ ಸರಕಾರದ ನಿಯಂತ್ರಣವಾಗಲೀ ಇರುವುದಿಲ್ಲ ಮತ್ತು ಸ್ಥಳೀಯ ಜನರ ಉಪಯೋಗಕ್ಕಾಗಲೀ ಸಿಗುವುದಿಲ್ಲ. ಅಂದರೆ ಒಂದು ರಾಜ್ಯದೊಳಗೆ ಕೇಂದ್ರ ತನ್ನದೇ ಆದ ರಾಜ್ಯವನ್ನು ಸ್ಥಾಪಿಸಿ ವಿಸ್ತರಿಸುತ್ತಿದೆ. ಹಂತಹಂತವಾಗಿ ರಾಜ್ಯದ ಆಸ್ತಿ ಮತ್ತು ಅಧಿಕಾರವನ್ನು ಕೇಂದ್ರ ಕಬಳಿಸುತ್ತಾ ಬಂದಿದೆ. ಸಂವಿಧಾನದ ಆರ್ಟಿಕಲ್ 1 ತನ್ನ ಅರ್ಥವನ್ನು ಕಳೆದುಕೊಳ್ಳುತ್ತಿದೆ. ರಾಜ್ಯಗಳು ಕೇಂದ್ರ ಶಾಸಿತ ಪ್ರದೇಶಗಳಾಗುತ್ತಿವೆ.

ಅಷ್ಟೇ ಅಲ್ಲ, ಈ ಪೋರ್ಟ್ ಮತ್ತು ಏರ್ಪೋರ್ಟ್‌‌ಗಳನ್ನು ಕೇಂದ್ರ ಸರಕಾರ ಯಾವ ಆಪ್ತಮಿತ್ರರಿಗೆ ಮಾರಾಟ ಮಾಡುತ್ತಿದೆ, ಸರಕಾರದ ಎಲ್ಲಾ ಆಸ್ತಿಗಳನ್ನು ಕೊಂಡುಕೊಳ್ಳುವಷ್ಟು ಹಣ ಯಾರ ಹತ್ತಿರ ಇದೆ ಎಂಬುದನ್ನು ನಾನು ಬಿಡಿಸಿ ಹೇಳಬೇಕಿಲ್ಲ.

ಜಣ ಜಣ ಜಣ ಕಾಂಚಾಣದಲ್ಲಿ

ಅಂಬದಾನಿ ಲಾಂಛನದಲ್ಲಿ

ದೇವರು ದಿಂಡಿರ ಭಜನೆಯಲ್ಲಿ

ಮಂದಿರ ಮಸೀದಿ ಗದ್ದಲದಲ್ಲಿ

ಎಲ್ಲ ಮಾಯ ನಾಳೆ ನಾವು ಮಾಯ

ಎಲ್ಲಾ ಮಾಯ ನಾಳೆ ನೀವು ಮಾಯ….

  •   ಜಿ.ಆರ್.ವಿದ್ಯಾರಣ್ಯ

ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...