Homeಮುಖಪುಟದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ ವಿವರ...

ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ ವಿವರ ಇಲ್ಲಿದೆ

ಟಿಕ್ರಿ, ಸಿಂಘು ಮತ್ತು ಗಾಜಿಪುರ್ ಗಡಿಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿಗಿಂತ ಮುಂಚೆ ಎಷ್ಟು ರೈತರಿದ್ದರು? ಇಂದು ಎಷ್ಟಿದ್ದಾರೆ? ಸಂಪೂರ್ಣ ವಿವರ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗೆ ಆಗ್ರಹಿಸಿ ದೆಹಲಿಯ ಹಲವು ಗಡಿಗಳಲ್ಲಿ ಲಕ್ಷಾಂತರ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 67 ದಿನಗಳನ್ನು ಪೂರೈಸಿದೆ. ಹಲವು ವಿಭಿನ್ನ ಹೋರಾಟಗಳ ಮೂಲಕ ವಿಶ್ವದ ಗಮನ ಸೆಳೆದಿದ್ದ ಈ ಹೋರಾಟ ಜನವರಿ 26 ರಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿದ ಕಾರಣ ವಿವಾದಕ್ಕೀಡಾಗಿತ್ತು. ತದನಂತರ ಪೊಲೀಸರು ರೈತರನ್ನು ತೆರವುಗೊಳಿಸುತ್ತಿದ್ದಾರೆ, ಸ್ಥಳೀಯರ ನೆಪದಲ್ಲಿ ಕೆಲವರು ಟೆಂಟ್ ಕಿತ್ತು ಹಾಕಿದ್ದಾರೆ ಎಂದು ಹಲವು ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ದೆಹಲಿಯ ಗಡಿಗಳಲ್ಲಿಯೇ ಒಂದು ತಿಂಗಳಿನಿಂದ ತಂಗಿದ್ದು ವರದಿ ಮಾಡುತ್ತಿರುವ ನಾನುಗೌರಿ.ಕಾಂ ವರದಿಗಾರರು ಸರ್ಕಾರ ಮತ್ತು ಮಾಧ್ಯಮಗಳು ಸುಳ್ಳು ವರದಿ ಮೂಲಕ ಜನರ ದಾರಿ ತಪ್ಪಿಸುತ್ತಿವೆ ಎಂದು ತಿಳಿಸಿದ್ದಾರೆ. ಅಲ್ಲದೇ ಎಲ್ಲಾ ಗಡಿಗಳಲ್ಲಿ ಎಂದಿನಂತೆ ರೈತ ಹೋರಾಟ ಮುಂದುವರೆದಿದ್ದು ಹಿಂದಿಗಿಂತಲೂ ಹೆಚ್ಚಿನ ಜನ ಬಂದು ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಟಿಕ್ರಿ ಗಡಿ

ಇಲ್ಲಿ ಜನವರಿ 25 ರಂದು ಸುಮಾರು 40 ಸಾವಿರ ಜನರಿದ್ದರು. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ವೇಳೆಗೆ ರೈತರ ಸಂಖ್ಯೆ 1 ಲಕ್ಷ ಮೀರಿತ್ತು. ಗಣರಾಜ್ಯೋತ್ಸವದಂದು ಉಂಟಾದ ಗೊಂದಲದಿಂದಾಗಿ ಸಂಜೆ ವೇಳೆ ಟ್ರ್ಯಾಕ್ಟರ್ ರ್ಯಾಲಿ ನಿಲ್ಲಿಸಲಾಯ್ತು. ಹಾಗಾಗಿ ಟ್ರ್ಯಾಕ್ಟರ್ ರ್ಯಾಲಿಗೆಂದು ಬಂದಿದ್ದ ಜನರು ರ್ಯಾಲಿ ಮುಗಿಸಿ ತಮ್ಮ ಊರಿಗೆ ಕಡೆ ಹೊರಟಿದ್ದರು.

ಆದರೆ ಜನವರಿ 27 ರ ರಾತ್ರಿ ವೇಳೆಗೆ ಟಿಕ್ರಿ ಗಡಿಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಯಿತು. ಅಲ್ಲದೆ ಇಂದು ರಾತ್ರಿ ಪೊಲೀಸರು ರೈತರ ಮೇಲೆ ಲಾಠೀ ಚಾರ್ಜ್ ಮಾಡುತ್ತಾರೆ ಎಂಬ ವರದಿಗಳು ಹರಿದಾಡಿದ್ದವು. ಅಷ್ಟರಲ್ಲಿ ಗಾಜಿಪುರ್ ಗಡಿಯಲ್ಲಿ ರೈತರ ಮೇಲೆ ಲಾಠೀ ಚಾರ್ಜ್ ನಡೆದಿತ್ತು. ಸಿಂಘು ಗಡಿಯಲ್ಲಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಒಂದು ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಸುದ್ದಿ ಸಾಮಾಜಿಕ ಮಾಧ್ಯಮಗಳ ಮೂಲಕ ದೇಶಕ್ಕೆ ತಲುಪಿತು. ಹರಿಯಾಣದ ಖಾಪ್ ಪಂಚಾಯತ್‌ಗಳು ರಾತ್ರೋರಾತ್ರಿ ಸಭೆ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದವು. ಕೂಡಲೇ ಟಿಕ್ರಿ ಗಡಿಗಳಿಗೆ ಹೋಗಿ ರೈತರಿಗೆ ಬೆಂಬಲ ನೀಡಬೇಕೆಂದು ನಿರ್ಣಯಿಸಲಾಯಿತು. ಸಾವಿರಾರು ಜನ ಕಾರುಗಳಲ್ಲಿ ಗಡಿಗಳತ್ತ ನಡೆದರು. ತಮ್ಮ ಊರಿನ ಕಡೆಗೆ ಹೊರಟಿದ್ದ ಟ್ರ್ಯಾಕ್ಟರ್‌ಗಳು ಮತ್ತೆ ವಾಪಸ್ ಟಿಕ್ರಿ ಗಡಿಯತ್ತ ಮುಖ ಮಾಡಿದವು. ಇಂದು ಜನವರಿ 30 ರಂದು ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಟಿಕ್ರಿ ಗಡಿಯಲ್ಲಿ ನಿರಾಂತಕವಾಗಿ ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ನಾನುಗೌರಿ.ಕಾಂ ಪ್ರತಿನಿಧಿ ಮಮತ.ಎಂ ಮಾಹಿತಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ.

ಸಿಂಘು ಗಡಿ

ಸಿಂಘು ಗಡಿಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ರೈತರನ್ನು ತೆರವುಗೊಳಿಸುವಂತೆ ಪ್ರತಿಭಟನೆ ಮಾಡಿದ್ದಾರೆ ಎಂಬುದು ಅರ್ಧ ಸತ್ಯ. ಮೊದಲಿಗೆ ಅವರು ಸ್ಥಳೀಯರಲ್ಲ ಬದಲಿಗೆ ಬಿಜೆಪಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಎಂದು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದೆ. ಎರಡನೇದಾಗಿ ಅವರು ಸಿಂಘು ಗಡಿಯ ಒಂದು ಮೂಲೆಯಲ್ಲಿ ಚಿಕ್ಕ ಪ್ರತಿಭಟನೆಯ ಪ್ರಹಸನವಷ್ಟೇ ನಡೆಸಿದ್ದಾರೆ. ANI ಸೇರಿದಂತೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನೆ ದೊಡ್ಡದು ಮಾಡಿ ತೋರಿಸಿ ಇಡೀ ಸಿಂಘು ಗಡಿಗೆ ಸ್ಥಳೀಯರು ನುಗ್ಗಿಬಂದಿದ್ದಾರೆ ಎಂದು ಸುಳ್ಳು ವರದಿ ಮಾಡಿವೆ.

ವಾಸ್ತವವೆಂದರೆ ಸಿಂಘು ಗಡಿಯಲ್ಲಿ ಎರಡು ಪ್ರತಿಭಟನೆಗಳು ನಡೆಯುತ್ತಿವೆ. ಹರಿಯಾಣಕ್ಕೆ ಹೊಂದಿಕೊಂಡಂತೆ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ನಡೆಯುತ್ತಿರುವುದು ಒಂದು ಬೃಹತ್ ಪ್ರತಿಭಟನೆಯಾದರೆ, ಅಲ್ಲಿಂದ 200 ಮೀಟರ್ ದೂರದಲ್ಲಿ ಅಂದರೆ ದೆಹಲಿ ವ್ಯಾಪ್ತಿಗೆ ಬರುವ ಸ್ಥಳದಲ್ಲಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ನೇತೃತ್ವದಲ್ಲಿ ಸಣ್ಣ ಪ್ರತಿಭಟನೆ ನಡೆಯುತ್ತಿದೆ. (ದೀಪ್ ಸಿಧು ಇದೇ ಸಂಘಟನೆಗೆ ಸೇರಿದ್ದು, ಮುಖ್ಯವಾಗಿ ಗಣರಾಜ್ಯೋತ್ಸವದ ದಿನ ನಿಯೋಜಿತ ಮಾರ್ಗ ಉಲ್ಲಂಘಿಸಿ, ಕೆಂಪು ಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿದ್ದು ಇವರೆ ಎನ್ನಲಾಗಿದೆ) ಈ ಭಾಗ ದೆಹಲಿ ಪೊಲೀಸರ ವ್ಯಾಪ್ತಿಗೆ ಬರುವುದರಿಂದ, ಜನವರಿ 27 ರಂದು ಸ್ಥಳೀಯರ ಹೆಸರಿನ ಗುಂಪು ಇಲ್ಲಿ ಪ್ರತಿಭಟನೆ ನಡೆಸಿದೆ. ಇದು ಇನ್ನೊಂದು ಹರಿಯಾಣದ ಬದಿಯಲ್ಲಿರುವ ರೈತ ಗುಂಪಿಗೆ ಗೊತ್ತಾಗಿಯೇ ಇಲ್ಲ. ಆದರೆ ಮಾಧ್ಯಮಗಳು ಇಡೀ ಸಿಂಘು ಗಡಿಯಲ್ಲಿ ಪ್ರತಿಭಟನೆ ಎಂದು ತಪ್ಪು ವರದಿ ಮಾಡಿವೆ. ಏಕೆಂದರೆ ಅಲ್ಲಿ 60 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸುತ್ತಿದ್ದು ಯಾವು ಗುಂಪು ಸಹ ಅಲ್ಲಿಗೆ ನುಗ್ಗಿ ಪ್ರತಿಭಟನೆ ನಡೆಸುವ ಧೈರ್ಯ ತೋರುವುದಿಲ್ಲ.

ಇಲ್ಲಿ ಜನವರಿ 25 ರಂದು 60-70 ಸಾವಿರ ರೈತರಿದ್ದರು. ಜನವರಿ 26ರ ಗಣರಾಜ್ಯೋತ್ಸವದಂದು 2 ಲಕ್ಷಕ್ಕೂ ಅಧಿಕ ರೈತರಿದ್ದರು. ಇಂದು ಜನವರಿ 30 ರಂದು ಸಹ ಸುಮಾರು 60-70 ಸಾವಿರ ಜನರಿದ್ದಾರೆ. ಟ್ರ್ಯಾಕ್ಟರ್‌ಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಕಾರುಗಳ ಸಂಖ್ಯೆ ಹೆಚ್ಚಾಗಿದ್ದು, ಸೈಕಲ್‌ಗಳ ಬಂದು ಸೇರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಮಮತ ಎಂ ಮಾಹಿತಿ ನೀಡಿದ್ದಾರೆ.

ಅಲ್ಲದೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ಪ್ರತಿಭಟನೆಗಳ ನಡುವೆ ಇದ್ದ 200 ಮೀಟರ್ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಇದರಿಂದ ಎರಡೂ ಕಡೆಗೆ ಯಾರೂ ಹೋಗದಂತೆ ತಡೆಯಲಾಗಿದೆ. ಇದರಿಂದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರಿಗೆ ತೀವ್ರ ಅನಾನುಕೂಲವಾಗಿದೆ. ಏಕೆಂದರೆ ಅವರ ಲಂಗರ್ ಹರಿಯಾಣದ ಭಾಗದ ಕಡೆಗಿದ್ದು ಅಲ್ಲಿಗೆ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಹಾಗಾಗಿ ಅವರು ಮುರೂ ನಿಮಿಷದಲ್ಲಿ ಕ್ರಮಿಸಬಹುದಾಗಿದ್ದ ಲಂಗರ್‌ಗೆ ತಲುಪಲು ಈಗ ಒಂದೂವರೆ ಕಿ.ಮೀ ನಡೆದು ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಸಿಂಘು ಗಡಿಯ ಪ್ರತಿಭಟನೆಯ ಸ್ಥಳಕ್ಕೆ ಯಾರನ್ನೂ ಪೊಲೀಸರು ಬಿಡುತ್ತಿಲ್ಲ ಎನ್ನಲಾಗಿದೆ.

ಗಾಜಿಪುರ್ ಗಡಿ

ಇದು ಉತ್ತರ ಪ್ರದೇಶ ಮತ್ತು ದೆಹಲಿ ಸಂಪರ್ಕಿಸುವ ಗಡಿಯಾಗಿದೆ. ಜನವರಿ 27ರಂದು ಇಲ್ಲಿಂದ ರೈತರು ಜಾಗ ಖಾಲಿ ಮಾಡಬೇಕೆಂದು ಉತ್ತರ ಪ್ರದೇಶ ಪೊಲೀಸರು ಧಮಕಿ ಹಾಕಿದ್ದರು. ಅಲ್ಲದೇ 27 ರ ರಾತ್ರಿ ಬಿಜೆಪಿ ಶಾಸಕನ ಬೆಂಬಲಿಗರು ವೇದಿಕೆಗೆ ನುಗ್ಗಿ ಧಾಂಧಲೆ ನಡೆಸುತ್ತಿದ್ದಾಗ ರೈತ ಮುಖಂಡ ರಾಕೇಶ್ ಟಿಕಾಯತ್ ಮೈಕ್ ಕೈಗೆತ್ತಿಕೊಂಡು ಮಾಡಿದ ಭಾಷಣ ನಿಮಗೆ ಗೊತ್ತಿದೆ. ಭಾವನಾತ್ಮಕ ಭಾಷಣ ಮತ್ತು ಅವರು ಸುರಿಸಿದ ಕಣ್ಣೀರು ಉತ್ತರ ಪ್ರದೇಶ ಮತ್ತು ಹರಿಯಾಣ ರೈತರನ್ನು ಕಲಕಿದೆ. ಅಂದಿನಿಂದ ಗಾಜಿಪುರ್ ಗಡಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ರಾಕೇಶ್ ಟಿಕಾಯತ್‌ರವರ ಊರು ಮುಜಾಫರ್‌ನಗರದಲ್ಲಿ ರೈತ ಹೋರಾಟ ಬೆಂಬಲಿಸಲು ಮಹಾಪಂಚಾಯತ್ ನಡೆದು 10 ಸಾವಿರಕ್ಕಿಂತಲೂ ಹೆಚ್ಚು ಜನ ಸೇರಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಟ್ ಸಮುದಾಯದವರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ನಿನ್ನೆ ನಡೆದ ಮಹಾಪಂಚಾಯತ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಗಾಜಿಪುರ್ ಗಡಿಗೆ ಹೋಗುವಂತೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದರಂತೆ ಇಂದು ಸಾವಿರಾರು ಜನ ಗಾಜಿಪುರ್ ಗಡಿ ತಲುಪಿದ್ದಾರೆ. ಜನವರಿ 25 ರಂದು ಇದ್ದ ರೈತರಿಗಿಂತ ನಾಲ್ಕು ಪಟ್ಟು ಹೆಚ್ಚು ರೈತರು ಗಡಿಯಲ್ಲಿದ್ದಾರೆ.

ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್‌ಎಲ್‌ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮೊನ್ನೆ ರಾಜೀನಾಮೆ ನೀಡಿದ್ದರು. ಇಂದು ಅವರು ರಾಕೇಶ್ ಟಿಕಾಯತ್‌ರನ್ನು ಬೆಂಬಲಿಸಿ ರೈತರ ಹೋರಾಟಕ್ಕೆ ನೂರಾರು ಕಾರುಗಳೊಂದಿಗೆ ಗಾಜಿಪುರ್ ಗಡಿಗೆ ಧಾವಿಸುತ್ತಿರುವುದಾಗಿ ಕಾರುಗಳ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಬಲ ಬಳಸಿ, ತಂತ್ರ ಬಳಸಿ ರೈತ ಹೋರಾಟವನ್ನು ಹತ್ತಿಕ್ಕಲು ಮೋದಿ ಮತ್ತು ಯೋಗಿ ಸರ್ಕಾರ ಯೋಜಿಸಿತ್ತು. ಅದರೆ ಅದೇ ಅವರಿಗೆ ಉಲ್ಟಾ ಹೊಡೆದಿದ್ದು ಮೊದಲಿಗಿಂತ ಹೆಚ್ಚಿನ ರೈತರು ಗಡಿಗಳಿಗೆ ಮರಳುತ್ತಿದ್ದಾರೆ. ರೈತರು, ಯುವಕರು ಎಲ್ಲಾ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಪೊಲೀಸರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಆದರೆ ಅವರೇನು ಮಾಡಲು ಸಾಧ್ಯವಾಗುತ್ತಿಲ್ಲ. ದೊಡ್ಡ ಡೊಡ್ಡ ಮೀಡಿಯಾ ಚಾನೆಲ್‌ಗಳು ಸಹ ಸ್ಥಳದಲ್ಲಿವೆ. ಕೆಲ ಯೂಟ್ಯೂಬರ್‌ಗಳು, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ವಿಡಿಯೋ ಮಾಡುತ್ತಿದ್ದಾರೆ. ಸ್ವಲ್ಪ ಹೊತ್ತಿಗೆ ಮುಂಚೆ ರಾಕೇಶ್ ಟಿಕಾಯತ್ ನೆರೆದಿರುವವರನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಭಾಷಣ ಮಾಡಿದರು. ಅವರ ಉತ್ಸಾಹ ಹೆಚ್ಚಾಗಿದೆಯೆಂದು ಸ್ಥಳದಲ್ಲಿರುವ ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಮೂರು ಗಡಿಗಳಲ್ಲಿ ಜನವರಿ 25ರಂದು ಅಂದರೆ ಟ್ರ್ಯಾಕ್ಟರ್ ರ್ಯಾಲಿಗಿಂತ ಮೊದಲಿದ್ದ ರೈತರ ಸಂಖ್ಯೆಗಿಂತ ಹೆಚ್ಚಿನ ರೈತರು ಇಂದು ಮೂರು ಗಡಿಗಳಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಇನ್ನು ಸಾವಿರಾರು ಜನ ಬರುತ್ತಿದ್ದಾರೆ. ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆದಿದೆ.


ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...