Homeಮುಖಪುಟಈ 45 ವರ್ಷಗಳಲ್ಲಿ ರೈತರ ಬೆಳೆಯ ಬೆಲೆ ಹೆಚ್ಚಳ & ಸರ್ಕಾರಿ ನೌಕರರ ವೇತನ ಹೆಚ್ಚಳದ...

ಈ 45 ವರ್ಷಗಳಲ್ಲಿ ರೈತರ ಬೆಳೆಯ ಬೆಲೆ ಹೆಚ್ಚಳ & ಸರ್ಕಾರಿ ನೌಕರರ ವೇತನ ಹೆಚ್ಚಳದ ನಡುವಿನ ವ್ಯತ್ಯಾಸ ಎಷ್ಟು ಗೊತ್ತೆ?

ಸುಪ್ರೀಂ ಕೋರ್ಟಿನ ಅಧಿಕಾರಿಗಳಿಗೆ ಬಟ್ಟೆ ಒಗೆಯಲೆಂದೇ 21 ಸಾವಿರ ರೂ ಭತ್ಯೆ ಸಿಗುತ್ತದೆ ವರ್ಷಕ್ಕೆ. ಭದ್ರತಾ ಸಿಬ್ಬಂದಿಗಳಿಗೆ 20 ಸಾವಿರ ರೂಪಾಯಿ ಸಿಗುತ್ತೆ. ಆದರೆ ರೈತರಿಗೆ...?

- Advertisement -
- Advertisement -

ಇಂದು ನಾವು ಮುಖ್ಯವಾಗಿ ತಿಳಿದುಕೊಳ್ಳಬೇಕಾಗಿರುವುದು ಆರ್ಥಿಕತೆಯ ವಿನ್ಯಾಸದ ಬಗ್ಗೆ. ಅದು ಈಗ ಅಮೆರಿಕ ಅಥವಾ ಯುರೋಪ್ ಅಥವಾ ಭಾರತದಲ್ಲಿ ಪಾಲಿಸಲಾಗುತ್ತಿರುವುದಾಗಿರಲಿ – ಆರ್ಥಿಕತೆಯ ಈ ವಿನ್ಯಾಸ ಹೇಳುವುದೇನೆಂದರೆ, ಕೃಷಿಯನ್ನು ಮುಗಿಸಿಬಿಡಿ ಎಂದು. ಇದನ್ನು ನಾವು ಅರಿತುಕೊಳ್ಳುವುದು ಮುಖ್ಯ. ಅಮೆರಿಕದಲ್ಲಿ ರೈತರು ಇಲ್ಲವಾಗಿದ್ದಾರೆ. ಈಗ ಆ ದೇಶದ ಜನಸಂಖ್ಯೆಯ ಕೇವಲ 2% ಕ್ಕಿಂತ ಕಡಿಮೆ ಜನರು ಕೃಷಿಯಲ್ಲಿದ್ದಾರೆ. ಯುರೋಪಿನಲ್ಲಿ ಪ್ರತಿ ನಿಮಿಷಕ್ಕೊಬ್ಬ ರೈತಳು/ನು ಕೃಷಿಯನ್ನು ಬಿಟ್ಟು ಹೋಗುತ್ತಿದ್ದಾಳೆ/ನೆ. ನಿಮಗೆ ನೆನೆಪಿರಬಹದು, ವಿಶ್ವವಿಖ್ಯಾತ ಆರ್ಥಿಕ ತಜ್ಞ ರಘುರಾಮ್ ರಾಜನ್ ಒಂದು ಸಲ ಹೇಳಿದ್ದು: ’ಭಾರತದಲ್ಲಿ ಎಲ್ಲಕ್ಕಿಂತ ದೊಡ್ಡ ಸುಧಾರಣೆ ಸಾಧ್ಯವಾಗುವುದು ಯಾವಾಗ ಎಂದರೆ, ಕೃಷಿಯಿಂದ ರೈತನನ್ನು ಬಿಡಿಸಿ, ನಗರಕ್ಕೆ ತಂದಾಗ ಮಾತ್ರ. ಏಕೆಂದರೆ, ನಗರಗಳಲ್ಲಿ ಕೂಲಿಕಾರ್ಮಿಕರ ಅವಶ್ಯಕತೆ ಇದೆ’ ಎಂದು. ಇದು ಸ್ವತಃ ರಾಜನ್ ಹೇಳಿದ್ದು. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ; ನಮ್ಮ ಆರ್ಥಿಕ ನೀತಿಯ ವಿನ್ಯಾಸವೇ ಇದಾಗಿದೆ.

ನೀವು ಈಗ ರಾಷ್ಟ್ರೀಯ ಕೌಶಲ್ಯ ನೀತಿಯ (ನ್ಯಾಷನಲ್ ಸ್ಕಿಲ್ ಪಾಲಿಸಿ) ದಾಖಲೆಗಳನ್ನು ನೋಡಿ. ಅಲ್ಲಿ ಸ್ಪಷ್ಟವಾಗಿ ಹೇಳಿದ್ದೇನೆಂದರೆ, ಕೃಷಿಯಲ್ಲಿ ತೊಡಗಿರುವ ಜನರನ್ನು 56%ನಿಂದ ಕಡಿಮೆ ಮಾಡಿ 18% ಇಳಿಸಬೇಕು ಎಂದು ಬರೆಯಲಾಗಿತ್ತು. ಈಗ ಅದನ್ನು ಬದಲಿಸಿ 38% ಎಂದು ಬರೆಯಲಾಗಿದೆ. ಅಂದರೆ, 2022ರೊಳಗೆ ಕೃಷಿಯಲ್ಲಿ ತೊಡಗಿರುವ ಜನರ ಪ್ರಮಾಣವನ್ನು 57% ಇಂದ 38% ಗೆ ಇಳಿಸಲಾಗುವುದು. ಇದರರ್ಥ, ಇದು ಉದ್ದೇಶಪೂರ್ವಕವಾಗಿ ಮಾಡಿದ ರಣತಂತ್ರದ ಒಂದು ಭಾಗವಾಗಿದೆ; ರೈತರನ್ನು ಕೃಷಿಯಿಂದ ಹೊರತಂದು, ನಗರಕ್ಕೆ ತರುವುದು ಇದರ ಉದ್ದೇಶ. ಇದನ್ನು ಮೊದಲು ತಿಳಿದುಕೊಳ್ಳಬೇಕಿದೆ. ಇದರ ಅನುಗುಣವಾಗಿಯೇ ಈ ಒಂದು ಆರ್ಥಿಕ ಸಂರಚನೆಯನ್ನು ತಯಾರಿಸಲಾಗುತ್ತದೆ.

ಈಗ ನೋಡಿ, ಕೃಷಿಯಲ್ಲಿ ಬಿಕ್ಕಟ್ಟು ಇದೆ. ಇತರ ವಲಯಗಳನ್ನು ನೋಡಿದರೆ ರೈತರಿಗೆ ಆದಾಯ ಆಗುತ್ತಿಲ್ಲ ಎಂದು ಹೇಳುತ್ತೇವೆ. ಒಂದು ಉದಾಹರಣೆ ಕೊಡುವೆ: 1970ರಲ್ಲಿ ಗೋದಿಯ ಬೆಲೆ ಒಂದು ಕ್ವಿಂಟಲ್‌ಗೆ 76 ರೂಪಾಯಿ ಇತ್ತು. ಅದು 2015ರಲ್ಲಿ ಅಂದರೆ 45 ವರ್ಷಗಳ ನಂತರ ಏರಿಕೆ ಆಗಿ, 1450 ರೂಪಾಯಿ ಆಯಿತು. ಅದೇ ಸಮಯದಲ್ಲಿ ನಾನು ಇತರ ವಲಯಗಳಲ್ಲಿ ಆದಾಯದ ಮಟ್ಟದಲ್ಲಿ ಏನಾಗಿದೆ ಎಂಬುದನ್ನು ನೋಡಿದೆ. ನಾನು ಕೇವಲ ಮೂಲ (ಬೇಸಿಕ್) ವೇತನ ಮತ್ತು ತುಟ್ಟಿ ಭತ್ಯೆ (ಡಿಎ) ಗಳನ್ನು ಪರೀಕ್ಷಿಸಿದೆ. ಸರಕಾರಿ ನೌಕರರ ಬೇಸಿಕ್ ಆದಾಯ ಮತ್ತು ಡಿಎ ಯಲ್ಲಿ ಆದ ಏರಿಕೆ 120ರಿಂದ 150ಪಟ್ಟು! ಅದೇ ಅವಧಿಯಲ್ಲಿ ಶಾಲಾ ಶಿಕ್ಷಕರ ಆದಾಯದಲ್ಲಿ ಆದ ವೃದ್ಧಿಯನ್ನು ನೋಡಿದರೆ, 280ರಿಂದ 320ಪಟ್ಟು. ಹಾಗು ಕಾಲೇಜು ಮತ್ತು ಯುನಿವರ್ಸಿಟಿಯ ಅಧ್ಯಾಪಕರ ವೇತನದಲ್ಲಿ ಆದ ವೃದ್ಧಿ- 150 ರಿಂದ 170 ಪಟ್ಟು. ಅದೇ ಸಮಯದಲ್ಲಿ ರೈತರ ಆದಾಯ ಎಷ್ಟು ಹೆಚ್ಚಾಗಿದೆ ಎಂದು ನೋಡಿದರೆ, ಅದಕ್ಕೆ ನಾನು ಗೋಧಿ ಹಾಗೂ ಭತ್ತದ ದರವನ್ನು ಗಮನದಲ್ಲಿಟ್ಟುಕೊಂಡು ಹೇಳುತ್ತಿದ್ದೇನೆ; ರೈತರ ಆದಾಯದಲ್ಲಿ ಆದ ಹೆಚ್ಚಳ – 19 ಪಟ್ಟು. ಒಂದು ವೇಳೆ ಈ ಸರಕಾರಿ ನೌಕರರು ಮತ್ತು ಶಿಕ್ಷಕರ ಆದಾಯವೂ ಇಷ್ಟೇ ವೃದ್ಧಿ ಆಗಿದ್ದಲ್ಲಿ, ಅವರೆಲ್ಲರೂ ಕೆಲಸ ಬಿಟ್ಟು ಹೋಗಿರುತ್ತಿದ್ದರು. ಈಗ ರೈತರ ಆದಾಯವೂ ಒಂದು ವೇಳೆ ಇತರ ವಲಯಗಳಂತೆ ವೃದ್ಧಿ ಆಗಿದ್ದಲ್ಲಿ, ಅವರ ಆದಾಯದ ಸಮಾನಂತರವಾಗಿ ವೃದ್ಧಿಯಾಗಿದ್ದಲ್ಲಿ, ಕೇವಲ ಒಂದು ನೂರು ಪಟ್ಟು ಹೆಚ್ಚಾಗಿದ್ದರೂ, ಗೋದಿಯ ಕನಿಷ್ಠ ಬೆಂಬಲ ಬೆಲೆ ಈಗ 7600 ರೂ ಪ್ರತಿ ಕ್ವಿಂಟಲ್ ಆಗಿರಬೇಕಿದೆ. ಇದು ಅವರ ಹಕ್ಕು. 7600 ರೂ ಆಗಿರಬೇಕಾಗಿದೆ, ಆದರೆ ಅವರಿಗೆ ಸಿಗುತ್ತಿರುವುದು 1450 ರೂಪಾಯಿಗಳು.

PC : YourStory

ಅನೇಕರು ಕೇಳುತ್ತಾರೆ; ಈ ದುಡ್ಡನ್ನು ಎಲ್ಲಿಂದ ತರುವುದು ಎಂದು. ನಾನು ಕೇಳುವುದು; ಕಾರ್ಪೊರೆಟ್‌ಗಳಿಗೆ ದುಡ್ಡು ಕೊಡುವಾಗ ಆ ದುಡ್ಡು ಎಲ್ಲಿಂದ ಬರುತ್ತೆ ಎಂದು ಕೇಳಿದ್ದೀರಾ? 7ನೇ ವೇತನ ಆಯೋಗದ ದುಡ್ಡು ಎಲ್ಲಿಂದ ಬರುತ್ತದೆ ಎಂದು ಎಂದಾದರೂ ಕೇಳಿದ್ದೀರಾ? 7ನೇ ವೇತನ ಆಯೋಗ ಸದ್ಯಕ್ಕೆ ಕೇಂದ್ರ ಸರಕಾರದ ಉದ್ಯೋಗಿಗಳಿಗಾಗಿ ಜಾರಿಯಲ್ಲಿದೆ. ಒಂದು ವೇಳೆ ಎಲ್ಲಾ ರಾಜ್ಯಗಳಲ್ಲೂ ಜಾರಿಯಾದರೆ, (ಕ್ರೆಡಿಟ್ ಸ್ವಿಸ್ ಬ್ಯಾಂಕ್‌ನ ಅಧ್ಯಯನದ ಅನುಗುಣವಾಗಿ) ಪ್ರತಿವರ್ಷ 4 ಲಕ್ಷ 80 ಸಾವಿರ ಕೋಟಿ ರೂಪಾಯಿಗಳ ಹೆಚ್ಚುವರಿ ಖರ್ಚು ಆಗುತ್ತೆ. ಈ ದುಡ್ಡು ಎಲ್ಲಿಂದ ಬರುವುದು ಎಂದು ಯಾರೂ ಕೇಳುವುದಿಲ್ಲ. ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಹೆಚ್ಚುತ್ತೆ ಎಂದು ಯಾರೂ ಹೇಳುವುದಿಲ್ಲ.

ಆದರೆ ರೈತರಿಗೆ ಎರಡು ಲಕ್ಷ ಕೋಟಿ ಕೊಡುತ್ತೇವೆ ಎಂದು ಘೋಷಿಸಿದ ಕೂಡಲೇ, ಹಾಹಾಕಾರ ಶುರು ಆಗಿಬಿಡುತ್ತೆ. ದುಡ್ಡು ವ್ಯರ್ಥ ಆಗುತ್ತೆ, ಇವರಿಗೆ ಈ ರೀತಿ ಕೊಡುವುದು ಸೂಕ್ತವಿಲ್ಲ, ಇವರು ಡಿಸರ್ವ್ ಮಾಡುವುದಿಲ್ಲ, ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಹೆಚ್ಚಾಗುತ್ತೆ ಎಂದೆಲ್ಲಾ ಹೇಳತೊಡಗುತ್ತಾರೆ. ಆದರೆ ಸರಕಾರಿ ನೌಕರರಿಗೆ ಆಯೋಗ ಸೂಚಿಸಿದ ವೇತನ ಜಾರಿ ಮಾಡಿದಾಗ ಯಾರಾದರೂ ಹೇಳಿದರಾ – ಫಿಸ್ಕಲ್ ಡೆಫಿಸಿಟ್ ಹೆಚ್ಚಾಗುತ್ತೆ ಎಂದು? ಇದೇ ಈ ಎಲ್ಲಾ ಆರ್ಥಿಕ ನೀತಿಗಳನ್ನು ಹೇಗೆ ವಿನ್ಯಾಸಗೊಳಿಸಲಾಗಿದೆ ಎನ್ನುವುದನ್ನು ಸೂಚಿಸುತ್ತದೆ. ರೈತರನ್ನು ಬಡವರನ್ನಾಗಿಯೇ ಇಡಲೆಂದು ವಿನ್ಯಾಸಗೊಳಿಸಲಾಗಿದೆ ಎಂಬುದು ತಿಳಿಯುತ್ತದೆ. ಹಾಗೂ ಈ ನೀತಿಗಳು ಅನೇಕ ದಶಕಗಳಿಂದ ನಡೆದುಬರುತ್ತಿವೆ ಹಾಗಾಗಿ ಎಲ್ಲಾ ಸರಕಾರಗಳು ಇದರಲ್ಲಿ ಶಾಮೀಲಾಗಿವೆ.

ಈಗ ನಿಮ್ಮ ಪ್ರಶ್ನೆ, ಇದಕ್ಕೆ ಕಾರಣವೇನು? ಇದರಲ್ಲಿ ಮಧ್ಯದ ದಾರಿ ಇಲ್ಲವೇ? ಮಧ್ಯದ ದಾರಿ? ನನಗೊಂದು ವಿಷಯ ಹೇಳಿ; ನಿಮಗೆ ಏಳನೇ ವೇತನ ಆಯೋಗದ ಪ್ರಕಾರ ವೇತನ ಸಿಗುತ್ತೆ ಅಥವಾ ಮತ್ಯಾವುದೋ ವೇತನ ಸಿಗುತ್ತೆ, ಆ ವೇತನ ಪಡೆದುಕೊಳ್ಳುವಾಗ ರೈತನಿಗೆ ಯಾವಾಗಾದರೂ ಮನೆ ಬಾಡಿಗೆಯ ಭತ್ಯೆ ಸಿಗುತ್ತಾ ಎಂದು ಯೋಚಿಸಿದ್ದೀರಾ? ಯಾವಾಗಾದರೂ ಆರೋಗ್ಯ ಭತ್ಯೆ ಸಿಕ್ಕಿದೆಯೇ, ಯಾವಾಗಾದರೂ ಶಿಕ್ಷಣದ ಭತ್ಯೆ ಸಿಕ್ಕಿದಿಯೇ, ಮಕ್ಕಳ ಮೆಡಿಕಲ್ ಅಲೋವನ್ಸ್ ಸಿಕ್ಕಿದೆಯೇ? ಹೀಗೆ ಎಂದಾದರೂ ಯೋಚಿಸಿದ್ದೀರಾ? ಏಕೆ ಹೀಗೆ? ಯಾಕೆ ರೈತರು ಸಮಾಜದ ಭಾಗವಲ್ಲವೇ? ಸುಪ್ರೀಮ್ ಕೋರ್ಟಿನ ಅಧಿಕಾರಿಗಳಿಗೆ ಬಟ್ಟೆ ಒಗೆಯಲೆಂದೇ 21 ಸಾವಿರ ರೂಪಾಯಿ ಸಿಗುತ್ತದೆ ವರ್ಷಕ್ಕೆ. ಭದ್ರತಾ ಸಿಬ್ಬಂದಿಗಳಿಗೆ 20 ಸಾವಿರ ರೂಪಾಯಿ ಸಿಗುತ್ತೆ ಬಟ್ಟೆ ತೊಳೆಯುವ ಸಲುವಾಗಿ, ಹಾಗೂ ಈಗ ಭದ್ರತಾ ವಲಯದವರು ಸುಪ್ರೀಮ್ ಕೋರ್ಟಿನವರೊಂದಿಗೆ ವ್ಯಾಜ್ಯ ತೆಗೆದಿದ್ದಾರೆ; ಸುಪ್ರೀಮ್ ಕೋರ್ಟನವರಿಗೇಕೆ ಹೆಚ್ಚು, ನಮಗೇಕೆ ಕಡಿಮೆ, ಗಡಿಗಳಲ್ಲಿ ಇರುವವರು ನಾವು ಎಂದು. ನನ್ನ ಪ್ರಶ್ನೆ: ರೈತರ ಬಳಿ ಬಟ್ಟೆಗಳೇ ಇರುವುದಿಲ್ಲವೇ? ಅವುಗಳನ್ನು ತೊಳೆಯಬಾರದೇ? ರೈತರ ಬಟ್ಟೆ ತೊಳೆಯಲು 20 ಸಾವಿರ ಸೇರಿಸಲಾಗಿದೆ ಎಂದು ಎಂದಾದರೂ ಕೇಳಿದ್ದೀರಾ? ಕನಿಷ್ಠ ಬೆಂಬಲ ಬೆಲೆಯಲ್ಲಿ ನಾವು ಸೇರಿಸುವುದೇನು, ಅವಳಿ/ನಿಗೆ ಆ ಬೆಳೆ ಬೆಳೆಯಲು ತಗಲುವ ಖರ್ಚು ಮತ್ತು ಅವಳ/ನ ಕುಟುಂಬದ ವಹಿಸಿದ ಶ್ರಮ; ಇವರೆಡನ್ನು ಸೇರಿಸುತ್ತೇವೆ. ಇಷ್ಟೇ..,

ಹಾಗೂ ಈಗಂತೂ ನೌಕರರಿಗೆ 108 ಭತ್ಯೆಗಳೂ ಸಿಗುತ್ತವೆ; ಈಗ ವೇತನ ಮತ್ತು ತುಟ್ಟಿ ಭತ್ಯೆಯ (ಡಿಎ) ನಂತರ ಇತರೆ ಭತ್ಯೆಗಳು (ಅಲೋವನ್ಸ್‌ಸ್‌ಗಳು) ಸಿಗುತ್ತವೆ, ನನಗೊಂದು ಮಾತು ಹೇಳಿ; ಯಾವುದೇ ವ್ಯಕ್ತಿಗೆ 108 ಭತ್ಯೆಗಳು ಸಿಗುತ್ತಿದ್ದರೆ, ಆ ವ್ಯಕ್ತಿಗೆ ವೇತನದ ಅವಶ್ಯಕತೆ ಏನಿದೆ? ಇಲ್ಲ, ಅದೆಲ್ಲ ಸಿಗುತ್ತಿದೆ ಎಂದರೆ ನಾನು ಸಿಗಬಾರದು ಎಂದು ಹೇಳುತ್ತಿಲ್ಲ. ಆದರೆ, ರೈತ ಏನು ತಪ್ಪು ಮಾಡಿದ್ದಾನೆಂದು ಅವಳಿ/ನಿಗೆ ಇವೆಲ್ಲ ಸಿಗುವುದಿಲ್ಲ, ಅದಕ್ಕೆ ಕಾರಣ ಹೇಳಿ. ರೈತರ ಎಮ್‌ಎಸ್‌ಪಿ (ಕನಿಷ್ಠ ಬೆಂಬಲ ಬೆಲೆ)ಯಲ್ಲಿ ಮನೆ ಬಾಡಿಗೆಯನ್ನು ಸೇರಿಸಲಾಗಿದೆಯೇ? ವೈದ್ಯಕೀಯ ಭತ್ಯೆ ಸೇರಿಸಲಾಗಿದೆಯೇ? ಅವಳ/ನ ಮಕ್ಕಳಿಗೆ ಶಿಕ್ಷಣದ ಅಲೋವನ್ಸ್ ಸೇರಿಸಲಾಗಿದೆಯೇ? ಯಾಕೆ ಅವಳಿ/ನಿಗೆ ಮಕ್ಕಳಿರುವುದಿಲ್ಲವಾ, ಅವಳು/ನು ಮಕ್ಕಳನ್ನು ಬೆಳೆಸಬಾರದಾ? ರೈತರನ್ನು ದೇಶದ ಮೇಲಿನ ಹೊರೆ ಎಂದು ಯಾಕೆ ಭಾವಿಸಿದ್ದೇವೆ? ಅವರಿಗೆ ದಾನ ಮಾಡುತ್ತಿದ್ದೇವೆ ಎಂದು ನಮಗೇಕೆ ಅನಿಸತ್ತದೆ? ನೀವು ಅವಳಿ/ನಿಗೆ ದಾನ ನೀಡುತ್ತಿಲ್ಲ, ಅವಳ/ನ ಶೋಷಣೆ ಮಾಡುತ್ತಿದ್ದೀರ, ನೀವು ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದೀರಿ, ಹಾಗೂ ಅದೇ ಕಾರಣದಿಂದ ನಮ್ಮ ಆರ್ಥಿಕತೆ ನಡೆಯುತ್ತಿದೆ. ಈ ಅರ್ಥವ್ಯವಸ್ಥೆಯ ಸಂರಚನೆಯನ್ನು ನೋಡದಿದ್ದರೆ, ಸರಿಯಾಗಿ ಅರ್ಥಮಾಡಿಕೊಳ್ಳದಿದ್ದರೆ, ರೈತರಿಗೆ ಇಷ್ಟು ವರ್ಷಗಳಿಂದ ಯಾಕೆ ಈ ಪೆಟ್ಟುಗಳು ಬೀಳುತ್ತಿವೆ ಎಂಬುದು ನಮಗೆ ಗೊತ್ತಾಗುವುದಿಲ್ಲ.

( ಈ ಲೇಖನ ದೇವಿಂದರ್ ಶರ್ಮಾ ಅವರ ಭಾಷಣದ ಆಯ್ದ ಭಾಗದ ಪಠ್ಯರೂಪ)
ಪಠ್ಯರೂಪ ಮತ್ತು ಅನುವಾದ: ರಾಜಶೇಖರ ಅಕ್ಕಿ

ದೇವಿಂದರ್ ಶರ್ಮ

ಪತ್ರಕರ್ತ ಹಾಗೂ ಕೃಷಿ ತಜ್ಞ. ಇಂಡಿಯನ್ ಎಕ್ಸ್‌ಪ್ರೆಸ್, ದಿ ವೈರ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಮತ್ತು ಆಹಾರ ನೀತಿ ಕುರಿತು ವಿಶೇಷ ವರದಿ, ಲೇಖನಗಳನ್ನು ಬರೆದಿದ್ದಾರೆ. ಕೃಷಿ ನೀತಿಗೆ ಸಂಬಂಧಿಸಿದ ಇವರ 5 ಕೃತಿಗಳು ಪ್ರಕಟಗೊಂಡಿವೆ.


ಇದನ್ನೂ ಓದಿ: ಕೃಷಿ ಕಾನೂನಿನ ಪ್ರಚಾರಕ್ಕೆ ತನ್ನ ಫೋಟೋ ಬಳಸಿದ ಬಿಜೆಪಿಗೆ ಲೀಗಲ್ ನೋಟಿಸ್ ನೀಡಿದ ರೈತ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...