Homeನಿಜವೋ ಸುಳ್ಳೋನೀವು ನಂಬಿಯೇ ಬಿಟ್ಟಿದ್ದ ಈ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

ನೀವು ನಂಬಿಯೇ ಬಿಟ್ಟಿದ್ದ ಈ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

- Advertisement -
- Advertisement -

ಸುಳ್ಳು 1: ವಿಶ್ವದ 35 ದೇಶಗಳಿಗೆ ಮೋದಿ ಜೀವದಾನಿ: ಭಾರತವನ್ನು ಹಾಡಿಹೊಗಳಿದ 35 ವಿಶ್ವನಾಯಕರು

ಈ ರೀತಿಯಾಗಿ ಕನ್ನಡಪ್ರಭ ಪ್ರತ್ರಿಕೆ ವರದಿ ಪ್ರಕಟಿಸಿದೆ. ಇದಕ್ಕೆ ಪತ್ರಿಕೆ ಕೊಟ್ಟಿರುವ ಕಾರಣ ಕೊರೊನಾಗೆ ಸದ್ಯ ಬಳಸುತ್ತಿರುವ ಮಲೆರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಮೋದಿ 35 ದೇಶಗಳಿಗೆ ರಫ್ತು ಮಾಡುತ್ತಿದ್ದಾರೆ ಎಂಬುದಾಗಿದೆ.

ಸತ್ಯ: ಭಾರತ ಏಪ್ರಿಲ್ 6ರವರೆಗೆ ಈ ಮಾತ್ರೆಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿತ್ತು. ಭಾರತಕ್ಕೆ ಹೆಚ್ಚು ಈ ಮಾತ್ರೆಗಳ ಅಗತ್ಯವಿದೆಯೆಂಬುದು ಅದಕ್ಕೆ ಕಾರಣವಾಗಿತ್ತು. ಆದರೆ ಏಪ್ರಿಲ್ 7 ರಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ಆ ಮಾತ್ರೆಗಳನ್ನು ಅಮೆರಿಕಾಕೆ ರಫ್ತು ಮಾಡದಿದ್ದರೆ ಭಾರತದ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ಅಂದು ಮಧ್ಯಾಹ್ನದಿಂದಲೇ ಭಾರತ ರಫ್ತು ನಿಷೇಧವನ್ನು ತೆರವುಗೊಳಿಸಿತು.

ಭಾರತವೊಂದೇ ಪ್ರಪಂಚದ ಶೇ.70 ರಷ್ಟು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಉತ್ಪಾದಿಸುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶವಿನ್ನು ಮಲೇರಿಯಾ, ಡೆಂಗ್ಯುನಂತರ ಮಾರಕ ಕಾಯಿಲೆಗಳಿಂದ ಬಳಲುತ್ತಿದೆ ಎಂಬುದೇ ಆಗಿದೆ. ಬೇರೆ ದೇಶಗಳು ಈ ವಿಷಯಲ್ಲಿ ಸುಧಾರಿಸಿರುವುದರಿಂದ ಅವು ಉತ್ಪಾದನೆಯನ್ನು ನಿಲ್ಲಿಸಿವೆ.

ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಉತ್ಪಾದಿಸಲು ಬೇಕಾಗುವ ಮಿಶ್ರಣಾಂಶ ಎಪಿಐ ಅನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿದೆ. ಚೀನಾ ನೀಡದಿದ್ದರೆ ನಮ್ಮ ಉತ್ಪಾದನೆ ಕಷ್ಟ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳು ಕಡಿಮೆ ಬೆಲೆಗೆ ಸಿಗಲು ಕಾರಣ ಹಿಂದಿನ ನೆಹರೂ ಕಾಲದ ಭಾರತದ ಪೆಟೇಂಟ್ ನೀತಿ ಕಾರಣ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳು ಹೆಚ್ಚು ಉತ್ಪಾದನೆಯಾಗಲು 2014ರ ನಂತ ಬಂದ ಮೋದಿ ಸರ್ಕಾರ ಕಾರಣವಲ್ಲ. ಅದಕ್ಕೂ ಮುಂಚೆ ಇದ್ದ ಸರ್ಕಾರಗಳ ದೂರದೃಷ್ಟಿಯೇ ಕಾರಣ.

ಮೋದಿ ಅಮೆರಿಕಾದ ಬೆದರಿಕೆಗೆ ಮಣಿದು ಮಾತ್ರೆಗಳನ್ನು ರಫ್ತು ಮಾಡುತ್ತಿರುವುದರಿಂದ ಮುಂದೊಂದು ದಿನ ಕೊರೊನಾ ಉಲ್ಭಣಿಸಿದರೆ ಭಾರತಕ್ಕೆ ಕೊರತೆಯುಂಟಾಗುವ ಅಪಾಯವಿದೆ.

ಸುಳ್ಳು 2: ಅಮೆರಿಕಾದಲ್ಲಿ ಕೊರೊನಾ ಚಿಕಿತ್ಸೆಗೆ 55 ಲಕ್ಷ ರೂ (73 ಸಾವಿರ ಡಾಲರ್) ಖರ್ಚು. ಭಾರತದಲ್ಲಿ ಫ್ರಿ?

ಇದು ಪೋಸ್ಟ್‌ಕಾರ್ಡ್‌ನ ಮತ್ತೊಂದು ಸುಳ್ಳು ಸುದ್ದಿಯಾಗಿದೆ. ಭಾರತವನ್ನು ಹೊಗಳುವ ಭರದಲ್ಲಿ ಬಾಯಿಗೆ ಬಂದಷ್ಟು ವೆಚ್ಚವನ್ನು ಅಮೆರಿಕಾದಲ್ಲಿ ಮಾಡಲಾಗುತ್ತಿದೆ ಎಂದು ಬರೆದುಕೊಂಡಿದೆ. ಇದಕ್ಕೆ ಯಾವುದೇ ಮೂಲವನ್ನು ಅದು ಉಲ್ಲೇಖಿಸಿಲ್ಲ.

ಸತ್ಯ: ಚಿಕಿತ್ಸೆಯಲ್ಲಿ ಕೆಲವು ವ್ಯಕ್ತಿಗಳಿಗೆ ಅವರ ಪರಿಸ್ಥಿತಿ ನೋಡಿ ತೀರ್ಮಾನವಾಗುತ್ತದೆಯೇ ಹೊರತು ಎಲ್ಲರಿಗೂ 55 ಲಕ್ಷ ಅಥವಾ 73 ಸಾವಿರ ಡಾಲರ್ ಮಾಡಲು ಸಾಧ್ಯವಿಲ್ಲ.

ಈ ಕುರಿತು ಅಮೆರಿಕಾ ಪ್ರಮುಖ ಪತ್ರಿಕೆಗಳಾದ ಟೈಮ್, ದಿ ನ್ಯೂಯಾರ್ಕ್ ಟೈಮ್ಸ್ ಮತ್ತು ವಾಲ್‌ಸ್ಟ್ರೀಟ್ ಜರ್ನಲ್ ಲೇಖನಗಳನ್ನು ಪರಿಶೀಲಿಸಿದಾಗ ಆರೋಗ್ಯ ವಿಮೆ ಇದ್ದವರಿಗೆ 9 ಸಾವಿರ ಡಾಲರ್ ಮತ್ತು ಇಲ್ಲದವರಿಗೆ 23 ಸಾವಿರ ಡಾಲರ್‌ವರೆಗೆ ಹಣ ಖರ್ಚಾದ ಉಲ್ಲೇಖವಿದೆ ಅಷ್ಟೇ. 73 ಸಾವಿರ ಎಂಬುದು ಕೇವಲ ವದಂತಿ ಅಷ್ಟೇ.

ಸುಳ್ಳು 3: ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಕೆರೆ ಸ್ವಚ್ಛಗೊಳಿಸುವ ಶಿಕ್ಷೆ ಕೊಟ್ಟ ಕರ್ನಾಟಕ ಪೊಲೀಸರು

ಈ ಟೈಟಲ್‌ನಲ್ಲಿ Awesome things in India ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಕೆರೆ ಸ್ವಚ್ಛ ಮಾಡುವ ಫೋಟೊವೊಂದು ಪ್ರಕಟಿಸಿದ್ದು ಅದು ವೈರಲ್ ಆಗಿದೆ.

ಸತ್ಯ: ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಇದು ಸುಳ್ಳೆಂದು ಸಾಬೀತಾಗಿದೆ. ಜುಲೈ 3, 2017ರಂದೇ ಬೆಂಗಳೂರು ಮಿರರ್ ಪತ್ರಿಕೆ ಕೆಲವು ಟೆಕ್ಕಿಗಳು ಕೆರೆ ಸ್ವಚ್ಚಗೊಳಿಸುತ್ತಿರುವುದು ಎಂದು ಈ ಫೋಟೊವನ್ನು ಪ್ರಕಟಿಸಿದೆ.

ಸುಳ್ಳು 4: ಕೊರೊನಾ ತಗುಲಿ ಒಂದೇ ದಿನ ಇಟಲಿಯಲ್ಲಿ 200 ವೈದ್ಯರು, ದಾದಿಯರ ಸಾವು.

Bem vindo ಎಂಬ ಫೇಸ್‌ಬುಕ್ ಬಳಕೆದಾರ ಚಿತ್ರವೊಂದನ್ನು ಪ್ರಕಟಿಸಿ ಏಪ್ರಿಲ್ 13ರ ಒಂದೇ ದಿನ ಇಟಲಿಯಲ್ಲಿ 200 ವೈದ್ಯರು, ದಾದಿಯರ ಸಾವು ಎಂಬ ಸುದ್ದಿ ಹರಡಿದ್ದಾರೆ.

ಸತ್ಯ: ಫೋಟೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಅಮೆರಿಕಾದ ಟಿವಿ ಧಾರವಾಹಿ “Grey’s Anatomy” ಯ ಫೋಟೊ ಎಂದು ತಿಳಿದುಬಂದಿದೆ. ‘Wishin’ and Hopin’ ಎಪಿಸೋಡ್‌ನಲ್ಲಿ ಬರುವ ಚಿತ್ರವನ್ನು ನಿಜವೆಂದು ಹರಡಲಾಗಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. This looks like kannada version of fake news peddler the print.
    1. It doesn’t say the deal to export HCQ to US was taken before banning it, it also doesn’t say additional negotiation deals that Modi did with US before agreeing to export HCQ. Btw it doesn’t highlight why India has been kept filthy by INC (ruled over 60 years) which increase chances of maleria
    2. So there is a discrepancy of amount being charged, but it doesn’t highlight that it’s still charging patients whereas it’s free in India

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...