Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...