Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...