Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...