Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....