Homeಕರ್ನಾಟಕಗಿರ್ಮಿಟ್ ಚಿತ್ರದಲ್ಲಿ ಮಿಂಚಿದ ಮಕ್ಕಳ ಹೊಸ ಆಸೆ ಏನು ಗೊತ್ತಾ..?

ಗಿರ್ಮಿಟ್ ಚಿತ್ರದಲ್ಲಿ ಮಿಂಚಿದ ಮಕ್ಕಳ ಹೊಸ ಆಸೆ ಏನು ಗೊತ್ತಾ..?

- Advertisement -
- Advertisement -

ನಿರ್ದೇಶಕ, ಸಂಗೀತ ನಿದೇಶಕ ಬಸ್ರೂರು ಅವರ ಹೊಸ ಪ್ರಯತ್ನದ ಗಿರ್ಮಿಟ್ ಚಿತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮೊದಲ ಕಮರ್ಷಿಯಲ್​ ಚಿತ್ರ ಗಿರ್ಮಿಟ್​ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ಮಕ್ಕಳು ದೊಡ್ಡವರ ಧಿರಿಸಿನಲ್ಲಿ ಮನೋಜ್ಞವಾಗಿ ಅಭಿನಿಯಿಸಿದ್ದಾರೆ. ಸ್ಟಾರ್​ ನಟರ ಹಿನ್ನಲೆ ಧ್ವನಿ ಕೂಡ ಸಖತ್ ಆಗಿ ಮೂಡಿ ಬಂದಿದೆ.

ಈಗ ಹೊಸ ವಿಷಯವೆಂದರೆ ಚಿತ್ರದಲ್ಲಿ ಅಭಿನಯಿಸಿರುವ ಮಕ್ಕಳು ಹೊಸ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಪಾತ್ರಗಳಿಗೆ ಧ್ವನಿ ನೀಡಿರುವ ನಟ ಯಶ್​ ಮತ್ತು ರಾಧಿಕಾ ಜತೆ ಚಿತ್ರ ವೀಕ್ಷಿಸಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. ಟಿವಿ ವಾಹಿನಿಗಳ ಸಂದರ್ಶನಗಳಲ್ಲಿ ತಮ್ಮ ಆಸೆ ಹೇಳಿಕೊಂಡಿದ್ದಾರೆ.

ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಮಕ್ಕಳು ಕುಂದಾಪುರದವರು, ಇವರು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಮಾನಿಗಳಾಗಿದ್ದಾರೆ. ತಮ್ಮ ನೆಚ್ಚಿನ ನಟ ಡಿ ಬಾಸ್​ ಜತೆಯೂ ಚಿತ್ರ ನೋಡಬೇಕು ಎಂಬ ಇಚ್ಛೆ ಹೊರ ಹಾಕಿದ್ದಾರೆ. ನಟ ದರ್ಶನ್​ ತಮ್ಮ ಬಿಡುವಿಲ್ಲದ ಶೂಟಿಂಗ್​ ಸಮಯದ ಮಧ್ಯೆ ಮಕ್ಕಳ ಆಸೆ  ಈಡೇರಿಸುತ್ತಾರೆ ಅಂತಾ ನೋಡಬೇಕು.

ಈ ಮಧ್ಯೆ ಚಿತ್ರಕ್ಕೆ ಮತ್ತೊಂದು ಅಚ್ಚರಿ ಸಂಗತಿ ಎದುರಾಗಿದೆ. ಚಿತ್ರದ ಟ್ರೇಲರ್​ ನೋಡಿ ಮೆಚ್ಚಿಕೊಂಡಿರುವ ಹ್ಯಾಟ್ರಿಕ್​ ಹೀರೊ ಶಿವರಾಜ್​ ಕುಮಾರ್​ ಚಿತ್ರ ತಂಡದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ತೆಲುಗು, ತಮಿಳು ಚಿತ್ರರಂಗಗಳಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿರುತ್ತವೆ. ಕನ್ನಡದ ಈ ಪ್ರಯತ್ನ ಮೆಚ್ಚುವಂತಹದ್ದು, ಇಂತಹ ಪ್ರಯತ್ನಗಳು ಹೆಚ್ಚಾಗಲಿ. ಚಿತ್ರಕ್ಕೆ ಡಬ್​ ಮಾಡುವಂತೆ ನನಗೆ ಕೇಳಿದ್ದರೆ ಖಂಡಿತ ಮಾಡುತ್ತಿದ್ದೆ, ಎಂದು ಹೇಳಿ ಅಚ್ಚರಿ ಮೂಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...