Homeಮುಖಪುಟಸರ್ಕಾರಿ ದಾಖಲೆಗಳಲ್ಲಿ ದಲಿತ ಯುವಕನನ್ನು ಸಾಯಿಸಿ ಮಾಡಿದ್ದೇನು ಗೊತ್ತೇ?

ಸರ್ಕಾರಿ ದಾಖಲೆಗಳಲ್ಲಿ ದಲಿತ ಯುವಕನನ್ನು ಸಾಯಿಸಿ ಮಾಡಿದ್ದೇನು ಗೊತ್ತೇ?

- Advertisement -
- Advertisement -

ಭೋಪಾಲ್: ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಮಖನ್ ನಗರ ತಹಸಿಲ್‌ನ ಬಾಗಲ್ಖೇಡಿ ಗ್ರಾಮದ ಆಘಾತಕಾರಿ ಪ್ರಕರಣವು ಸರ್ಕಾರದ ಪ್ರಕ್ರಿಯೆಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, 2020ರಲ್ಲಿ ಜೀವಂತ ದಲಿತ ವ್ಯಕ್ತಿಯೊಬ್ಬರು ಸತ್ತಿದ್ದಾರೆ ಎಂದು ಅಧಿಕೃತ ದಾಖಲೆಗಳಲ್ಲಿ ಘೋಷಿಸಲಾಗಿದೆ.

ದಾಖಲೆಗಳಲ್ಲಿ ಯುವಕನನ್ನು ಸಾಯಿಸಿದ್ದು ಮಾತ್ರವಲ್ಲದೆ “ಅಂತ್ಯಕ್ರಿಯೆ ನೆರವು” ಯೋಜನೆಯಡಿ ಈ ದಲಿತ ಯುವಕನ ಹೆಸರಿನಲ್ಲಿ ₹ 5,000 ಮಂಜೂರು ಮಾಡಿಕೊಳ್ಳಲಾಗಿದೆ. ದಾಖಲೆಯಲ್ಲಿ ಸತ್ತ ದಲಿತ ಯುವಕ, ದೂರುದಾರ ನರೇಶ್ ಅಹಿರ್ವಾರ್ ತನ್ನ ಪತ್ನಿಯ ಹೆರಿಗೆಯ ನಂತರ ಸಬಲ್ ಯೋಜನೆಯಡಿ ಆನ್‌ಲೈನ್ ನೋಂದಣಿಗೆ ಅರ್ಜಿ ಸಲ್ಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ದಲಿತ ದಲಿತ ದಲಿತ ದಲಿತ ದಲಿತ

ಬಾಗಲಖೇಡಿಯ ನಿವಾಸಿ ನರೇಶ್ ಅಹಿರ್ವಾರ್ ಅವರು 2020ರಲ್ಲಿ ಅಂದಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಂಜು ಅಹಿರ್ವಾರ್ ಮತ್ತು ಮಾಜಿ ಸರಪಂಚರಾದ ಸುರೇಖಾ ಯಾದವ್ ಅವರು ಸರಕಾರಿ ಅಧಿಕೃತ ದಾಖಲೆಗಳಲ್ಲಿ ನರೇಶ್ ಸತ್ತಿದ್ದಾರೆ ಎಂದು ಘೋಷಿಸಿದ್ದರು. ದಲಿತ ದಲಿತ ದಲಿತ ದಲಿತ ದಲಿತ

ಇದಲ್ಲದೆ, ಜುಲೈ 13, 2020ರಂದು ಅವರ ಹೆಸರಿನಲ್ಲಿ ₹5,000 ಅನ್ನು ಅಂತ್ಯಕ್ರಿಯೆಯ ಸಹಾಯಕ್ಕಾಗಿ ಪಡೆಯಲಾಗಿತ್ತು. ನರೇಶ್ ತನ್ನ ಪತ್ನಿ ಭಾರತಿ ಅಹಿರ್ವಾರ್ ಅವರ ಹೆರಿಗೆಯ ನಂತರ ನವೆಂಬರ್ 23, 2024 ರಂದು  ಸಬಲ್ ಯೋಜನೆಯಡಿ ಪ್ರಯೋಜನಗಳಿಗಾಗಿ ಅರ್ಜಿ ಸಲ್ಲಿಸಿದಾಗ ಈ ವಂಚನೆ ಪತ್ತೆಯಾಗಿದೆ.

ವಂಚನೆ ಬೆಳಕಿಗೆ ಬಂದ ನಂತರ ನರೇಶ್ ಅವರು ಡಿಸೆಂಬರ್ 24, 2024 ರಂದು ಜಿಲ್ಲಾಧಿಕಾರಿ ಕಚೇರಿ ಮತ್ತು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದರು. ಪತ್ರಿಕೆಗಳಲ್ಲೂ ಅವರ ದೂರಿನ ಸುದ್ದಿ ಪ್ರಕಟವಾಗಿತ್ತು. ಆದರೆ, ದೂರು ದಾಖಲಾದ ನಂತರ ನರೇಶ್ ಅವರಿಗೆ ಕಿರುಕುಳ ಪ್ರಾರಂಭಿಸಲಾಗಿದೆ.ದಲಿತ ದಲಿತ ದಲಿತ ದಲಿತ ದಲಿತ

ಜನವರಿ 31, 2025ರಂದು, ನಾಸಿರಾಬಾದ್ ಕ್ರಾಸ್ರೋಡ್ ನಲ್ಲಿ ಮಾಜಿ ಪಂಚಾಯತ್ ಕಾರ್ಯದರ್ಶಿ ಸಂಜು ಅಹಿರ್ವಾರ್ ಅವರ ತಂದೆ ಮದನ್‌ಲಾಲ್ ಅಹಿರ್ವಾರ್ ಅವರು ನರೇಶ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. “ನಿಮ್ಮ ದೂರಿನಿಂದ ನನ್ನ ಮಗನಿಗೆ ಯಾವುದೇ ರೀತಿಯಲ್ಲಿ ಹಾನಿಯಾಗುವುದಿಲ್ಲ. ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ” ಎಂದು ಮದನ್ ಲಾಲ್ ಬೆದರಿಕೆ ಹಾಕಿದ್ದಾರೆ.

ಈ ಪ್ರಕರಣವು ವ್ಯಕ್ತಿಯ ಕಿರುಕುಳಕ್ಕೆ ಸಂಬಂಧಿಸಿದ್ದಲ್ಲದೇ ಗ್ರಾಮೀಣ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಅಧಕ್ಷತೆಯನ್ನು ಬಯಲಿಗೆಳೆಯುತ್ತದೆ. ನರೇಶ್ ಅವರು ಸರ್ಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ಸಾಬೀತುಪಡಿಸಲು ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ, ತಪ್ಪಿತಸ್ಥರ ವಿರುದ್ಧ ಇನ್ನೂ ಯಾವುದೇ ನಿರ್ಣಾಯಕ ಕ್ರಮ ಕೈಗೊಂಡಿಲ್ಲ.

ಕಾನೂನು ಏನು ಹೇಳುತ್ತದೆ?
ಹಣವನ್ನು ದುರುಪಯೋಗಪಡಿಸಿಕೊಳ್ಳಲು ಯಾರಾದರೂ ಸರ್ಕಾರದ ಯೋಜನೆಗಳನ್ನು ದುರುಪಯೋಗಪಡಿಸಿಕೊಂಡರೆ, ಅದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 420 (ವಂಚನೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಅಪರಾಧವಾಗಿದೆ. ಇದಲ್ಲದೆ, ಯಾರಿಗಾದರೂ ಬೆದರಿಕೆ ಹಾಕುವುದು ಮತ್ತು ಮೌಖಿಕವಾಗಿ ನಿಂದಿಸುವುದು ಐಪಿಸಿಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಶಿಕ್ಷಾರ್ಹವಾಗಿದೆ.

ಈ ಕುರಿತು ನರೇಶ್ ಅಹಿರ್ವಾರ್ ಅವರು ಮಾತನಾಡಿ, “ನಾನು ಸರ್ಕಾರಿ ದಾಖಲೆಗಳಲ್ಲಿ ಸತ್ತಿದ್ದೇನೆ ಎಂದು ಘೋಷಿಸಿರುವುದು ಅತ್ಯಂತ ಅವಮಾನಕರ ಮತ್ತು ನೋವಿನ ಸಂಗತಿಯಾಗಿದೆ. ಈ ವಂಚನೆಯಿಂದಾಗಿ, ನನ್ನ ಹೆಂಡತಿಗೆ ಸಬಲ್ ಯೋಜನೆಯ ಪ್ರಯೋಜನಗಳನ್ನು ಸಹ ಪಡೆಯಲು ನನಗೆ ಸಾಧ್ಯವಾಗಲಿಲ್ಲ. ನಾನು ಇದನ್ನು ಬಹಿರಂಗಪಡಿಸಲು ಪ್ರಯತ್ನಿಸಿದಾಗ, ನನಗೆ ಬೆದರಿಕೆಗಳು ಬರಲಾರಂಭಿಸಿದವು. ನಾನು ಇದಕ್ಕೆ ಸಂಬಂಧಿಸಿದ ಹೊಣೆಗಾರರ ​​ವಿರುದ್ಧ ಕಠಿಣ ಕ್ರಮಕ್ಕೆ ಬಯಸುತ್ತೇನೆ ಮತ್ತು ನನ್ನ ಇರುವಿಕೆಯ ಗುರುತು ಮತ್ತು ಹಕ್ಕುಗಳನ್ನು ಪಡೆಯಲು ಮಾತ್ರ ಬಯಸುತ್ತೇನೆ” ಎಂದಿದ್ದಾರೆ.ದಲಿತ ದಲಿತ ದಲಿತ ದಲಿತ ದಲಿತ

ಗ್ರಾಮದ ಕೆಲ ಪ್ರಭಾವಿ ವ್ಯಕ್ತಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾನು ದಿನಗೂಲಿ ಕಾರ್ಮಿಕನಾಗಿ ನನ್ನ ಕುಟುಂಬವನ್ನು ಪೋಷಿಸಲು ಪ್ರಯತ್ನಿಸುತ್ತಿದ್ದೇನೆ. ಈ ರೀತಿಯ ವಂಚನೆಯಿಂದ ನನಗೆ ಆರ್ಥಿಕ ಮತ್ತು ಮಾನಸಿಕ ತೊಂದರೆಯಾಗಿದೆ. ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.ದಲಿತ ದಲಿತ ದಲಿತ ದಲಿತ ದಲಿತ

ಬಾಗಲಖೇಡಿಯ ಹಾಲಿ ಸರಪಂಚ್ ರಾಮಭರೋಷ್ ಯಾದವ್, ಹಿಂದಿನ ಆಡಳಿತದ ಅವಧಿಯಲ್ಲಿ ನರೇಶ್ ಅಹಿರ್ವಾರ್ ಮೃತಪಟ್ಟಿದ್ದಾರೆ ಎಂದು ಅಧಿಕೃತ ದಾಖಲೆಗಳಲ್ಲಿ ಘೋಷಿಸಲಾಗಿದೆ ಎಂದು ದಿ ಮೂಕ್ನಾಯಕ್‌ ಪತ್ರಿಕೆಗೆ ಖಚಿತಪಡಿಸಿದ್ದಾರೆ. ನರೇಶ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದು, ಸರ್ಕಾರಿ ಯೋಜನೆಯ ಹಣ ದುರುಪಯೋಗಪಡಿಸಿಕೊಂಡಿದ್ದು ನಿಜ. ಪರಿಣಾಮವಾಗಿ, ಅವರು ಈಗ ಯಾವುದೇ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.ದಲಿತ ದಲಿತ ದಲಿತ ದಲಿತ ದಲಿತ

ಮಾಜಿ ಸರಪಂಚ ಸುರೇಖಾ ಯಾದವ್ ಮತ್ತು ಕಾರ್ಯದರ್ಶಿ ರಾಜೇಂದ್ರ ದುಬೆ ಅವರ ಅಧಿಕಾರಾವಧಿಯಲ್ಲಿ ಈ ಈ ಪ್ರಕರಣ ಸಂಭವಿಸಿದೆ ಎಂದು ರಾಮಭರೋಷ್ ವಿವರಿಸಿದರು. ಇದು ಘೋರ ಅಕ್ರಮವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಹೊಣೆಗಾರರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.ದಲಿತ ದಲಿತ ದಲಿತ ದಲಿತ ದಲಿತ

ಈ ಪ್ರಕರಣದ ಕುರಿತು ನರ್ಮದಾಪುರಂ ಜಿಲ್ಲಾಧಿಕಾರಿ ಸೋನಿಯಾ ಮೀನಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅವರು ಫೋನ್ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಅವರಿಗೆ ಪಠ್ಯ ಸಂದೇಶವನ್ನು ಸಹ ಕಳುಹಿಸಲಾಗಿದೆ, ಆದರೆ ಈ ವರದಿಯನ್ನು ಬರೆಯುವ ಸಮಯದವರೆಗೆ ಯಾವುದೇ ಉತ್ತರವನ್ನು ಸ್ವೀಕರಿಸಲಾಗಿಲ್ಲ ಎಂದು ಮೂಕ್ನಾಯಕ್ ಪತ್ರಿಕೆ ವರದಿ ಮಾಡಿದೆ.

ದಲಿತ ದಲಿತ ದಲಿತ ದಲಿತ ದಲಿತದಲಿತ ದಲಿತ ದಲಿತ ದಲಿತ ದಲಿತದಲಿತ ದಲಿತ ದಲಿತ ದಲಿತ ದಲಿತದಲಿತ ದಲಿತ ದಲಿತ ದಲಿತ ದಲಿತದಲಿತ ದಲಿತ ದಲಿತ ದಲಿತ ದಲಿತದಲಿತ ದಲಿತ ದಲಿತ ದಲಿತ ದಲಿತ

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...