Homeಮುಖಪುಟಮೋದಿಗೆ ಯಡಿಯೂರಪ್ಪ ಯಾಕೆ ಈ ಹೊತ್ತಿನ ಆದರ್ಶವಾಗಬಲ್ಲರು ಗೊತ್ತಾ?

ಮೋದಿಗೆ ಯಡಿಯೂರಪ್ಪ ಯಾಕೆ ಈ ಹೊತ್ತಿನ ಆದರ್ಶವಾಗಬಲ್ಲರು ಗೊತ್ತಾ?

- Advertisement -
- Advertisement -

ಇಡೀ ಮನುಷ್ಯ ಕುಲವನ್ನೇ ನಿರ್ನಾಮ ಮಾಡುವತ್ತ ಮುನ್ನುಗ್ಗುತ್ತಿರುವ ಕೊರೊನ ರೋಗದ ವಿರುದ್ಧ ಹೋರಾಟ ನಡೆದಿರುವ ಈ ಸಂದರ್ಭದಲ್ಲಿ, ಒಂದು ಧರ್ಮದ ಅನುಯಾಯಿಗಳನ್ನು ಗುರಿಯಾಗಿಸಿಕೊಂಡು ವಿಕೃತ ಮನೋಸ್ಥಿತಿಯನ್ನು ಸಮಾಜದಲ್ಲಿ ಬಿತ್ತುವ ಕೆಲಸ ನಡೆದಿರುವ ಹೊತ್ತಿನಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪನವರು ಅತ್ಯಂತ ಹೊಣೆಗಾರಿಕೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯವನ್ನು ಅನುಮಾನದಿಂದ ನೋಡುವ ಅಗತ್ಯವಿಲ್ಲ. ಅಲ್ಪಸಂಖ್ಯಾತರ ವಿರುದ್ದ ಯಾರೇ ಟೀಕೆ ಮಾಡಲಿ, ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಲಿ ಅಂತಹವರ ವಿರುದ್ದ ಕಾನೂನು ಕ್ರಮ ಅನಿವಾರ್ಯ ಎಂಬ ಸಂದೇಶ ಸಾರಿದ ಕೆಲವೆ ನಿಮಿಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯಾರಾದರೂ ಕೋಮುದ್ವೇಷ ಬಿತ್ತುವ, ಸೌಹಾರ್ದತೆ ಕದಡುವ ಅಥವಾ ಯಾವುದೇ ಧರ್ಮ, ಜಾತಿಯವರ ವಿರುದ್ದ ಅವಹೇಳನಕಾರಿ ಮಾತುಗಳನ್ನು ಆಡಿದರೆ ಅವರ ವಿರುದ್ದ ಕಾನೂನುಕ್ರಮ ಜರುಗಿಸುವ ಆದೇಶಗಳು ಹೊರಡಿಸಿದ್ದಾರೆ. ಅಂದರೆ ಮುಖ್ಯಮಂತ್ರಿಗಳ ಮಾತು ಕಾರ್ಯರೂಪಕ್ಕೆ ಬಂದಿದೆ. ಇದುವೆ ಅಧಿಕಾರದ ಇಚ್ಛಾಶಕ್ತಿ ಎಂದು ಭಾವಿಸಬಹುದು. ಇಂತಹದ್ದೊಂದು ಮುತ್ಸದ್ದಿತನ ಜನ ಹೋರಾಟದ ನೆಲೆಯಲ್ಲಿ ಬೆಳೆದು ಬಂದ ನಾಯಕನಿಗೆ ಮಾತ್ರ ದಕ್ಕಬಲ್ಲದೇನೋ. ಈಗ ಯಡಿಯೂರಪ್ಪ ಅವರು ಆಡಿದ ಮಾತಿಗೆ ಬದ್ದರಾಗಿಯೂ ನಡೆದುಕೊಳ್ಳಬೇಕಾದ ಪಾರದರ್ಶಕತೆಯನ್ನು ತೋರಬೇಕಿದೆ. ಅಲ್ಪಸಂಖ್ಯಾತ ಸಮುದಾಯದ ವಿರುದ್ದ ತಮ್ಮ ಪಕ್ಷದ ಶಾಸಕರು, ಸಂಸದರು, ಮುಂದಾಳುಗಳ ನಾಲಿಗೆಗೂ ಕಾನೂನು ಕುಣಿಕೆ ಹಾಕಿ ಹದ್ದುಬಸ್ತಿನಲ್ಲಿಡಬೇಕು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ 


ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿ ಮತ್ತದರ ಮಾತೃಕೋಣೆ ಪರಿವಾರದಲ್ಲಿ ಕೊರೊನ ಬಾಧಿತ ನರಳಾಟ ವಕ್ಕರಿಸಿಕೊಂಡಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊರೊನಾ ಹರಡುವಿಕೆಗೆ ತಬ್ಲೀಘಿಗಳೆ ಕಾರಣ. ಕೊರೊನಾ ಹರುಡುವಿಕೆ ಇದೊಂದು ರೂಪದ ಜಿಹಾದ್ ಎಂದು ಬಹಿರಂಗವಾಗಿ ಹೇಳಿದ್ದರು. ಶಾಸಕ ರೇಣುಕಾಚಾರ್ಯ ಸೇರಿದಂತೆ ಅನೇಕ ಬಿಜೆಪಿ ಶಾಸಕ ,ಸಂಸದರುಗಳು ಅಲ್ಪಸಂಖ್ಯಾತ ಸಮುದಾಯವನ್ನೆ ಗುರಿಯಾಗಿಸಿಕೊಂಡು ನಾಲಿಗೆ ಹರಿಬಿಟ್ಟಿದ್ದರು. ಕೊರೊನಾ ಸೋಂಕಿಗೆ ಮುಸ್ಲಿಮರೇ ಕಾರಣ ಎಂಬಂತೆ ಅವರ ವಿರುದ್ದ ಸಂಪಾದ್ರಾಯಿಕ ನ್ಯೂಸ್ ಚಾನಲ್‌ಗಳು, ಸಾಮಾಜಿಕ ಜಾಲತಾಣಗಳು ಒಂದೇ ಸಮನೆ ಚೀರಿಕೊಳ್ಳತೊಡಗಿದ್ದವು. ಇವೆಲ್ಲದಕ್ಕೂ ಯಡಿಯೂರಪ್ಪ ಅವರ ಈ ಮೇಲಿನ ಮಾತು ಅಂಕುಶವಿಟ್ಟಂತಾಗಿದೆ.

ರಾಜ್ಯದಲ್ಲಿ ಈಗಾಗಲೆ ಧರ್ಮನಿಂದನೆ ಧೂರ್ತರ ವಿರುದ್ದ ಕೇಸುಗಳು ದಾಖಲಾಗತೊಡಗಿವೆ. ಇದೊಂದು ಪರಿಣಾಮಕಾರಿ ಬೆಳವಣಿಗೆ ಮತ್ತು ಅಲ್ಪಸಂಖ್ಯಾತ ಜನ ಸಮುದಾಯದಲ್ಲಿ ಭರವಸೆ ಮೂಡಿಸಿದ ಬಗೆ ಎನ್ನಬಹುದು. ಹಾಗೆ ನೋಡಿದರೆ ಯಡಿಯೂರಪ್ಪ ಎಂದಿಗೂ ಕೋಮುವಾದಿಯಲ್ಲ ಎಂಬುದನ್ನು ಅನೇಕ ಸಾರಿ ಅವರ ನಡೆ-ನುಡಿಗಳು ಸಾಬೀತು ಮಾಡುತ್ತಲೆ ಬಂದಿವೆ. ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಅತ್ಯಂತ ಸೌಹಾರ್ದಮಯವಾಗಿ ಕಾಯ್ದುಕೊಂಡು ಬರುತ್ತಿರುವುದರಿಂದಲೇ ಎಂತಹುದ್ದೇ ಸಂದರ್ಭದಲ್ಲೂ ಶೇ. ೩೦ ರಷ್ಟು ಮುಸ್ಲಿಂ ಮತಗಳು ಯಡಿಯೂರಪ್ಪ ಅವರಿಗೆ ಮೀಸಲಾಗಿರುತ್ತದೆ. ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದಾಗ ಪ್ರಬಲ ಲಿಂಗಾಯಿತ ಸಮುದಾಯದ ನಂತರ ಯಡಿಯೂರಪ್ಪ ಅವರಿಗೆ ಬೆಂಬಲ ಕೊಟ್ಟ ಇನ್ನೊಂದು ಸಮುದಾಯವೆಂದರೆ ಅದು ಮುಸ್ಲಿಂ ಸಮುದಾಯ. ಅವರೆಂದೂ ಮುಸ್ಲಿಂರ ವಿರುದ್ದ ಬಹಿರಂಗವಾಗಿ ಕಾರಿಕೊಂಡ ಸನ್ನಿವೇಶವಂತೂ ಕಂಡಿದ್ದಿಲ್ಲ. ರಾಜಕೀಯ ಕಾರಣಗಳಿಗಾಗಿ ಅಂತಹ ವೇದಿಕೆಗಳನ್ನು ಹಂಚಿಕೊಂಡಿದ್ದರೂ ಯಡಿಯೂರಪ್ಪ ಆಂತರ್ಯದಲ್ಲಿ ಧರ್ಮ ದ್ವೇಷದ ಸೋಂಕು ಅಂಟಿಸಿಕೊಂಡವರಲ್ಲ ಎಂಬುದನ್ನು ಒಪ್ಪಲೇ ಬೇಕಾದ ಮಾತು. ಇಂತಹ ಕಾರಣಗಳಿಂದಲೇ ರಾಜ್ಯ ಬಿಜೆಪಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸ ಉಳಿಸಿಕೊಂಡಿರುವವರಲ್ಲಿ ಯಡಿಯೂರಪ್ಪ ಅಗ್ರಮಾನ್ಯರು ಎನ್ನಬಹುದು.

ಕೊರೊನ ಸೋಂಕು ವಿರುದ್ದದ ಹೋರಾಟದ ಜೊತೆಗೆ ಮತಾಂಧರ ಧೋರಣೆಗಳನ್ನು ಹತ್ತಿಕ್ಕುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒಂದು ಸವಾಲಿನ ಕೆಲಸವೂ ಆಗಿದೆ. ಅದಕ್ಕಾಗಿ ಮಾನಸಿಕವಾಗಿ ಅವರು ಸಿದ್ದರಾದಂತೆ ಕಂಡಿದ್ದಾರೆ. ವಾಸ್ತವವಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ಆರೆಸ್ಸೆಸ್ಸಿನ ವ್ಯಕ್ತಿಯಾಗಿ ಇಂದು ಉಳಿದಿಲ್ಲ. ಅವರೆಂದೂ ಯಾರ ಕೈಗೊಂಬೆಯಂತೆ ಕೆಲಸ ಮಾಡುವ ಜಯಮಾನದವರೇ ಅಲ್ಲ. ಹಾಗಾಗಿಯೇ ಅವರು ಬಹುತೇಕ ಸಂದರ್ಭಗಳಲ್ಲಿ ಸ್ವಪಕ್ಷೀಯರ ಅಸಮಾಧಾನಗಳಿಗೆ ತುತ್ತಾಗುತ್ತಲೆ, ಸ್ಫೋಟಗೊಳ್ಳತ್ತಲೆ ಬಂದಿದ್ದಾರೆ. ರಾಜ್ಯದಲ್ಲಿರುವುದು ಪರಿವಾರ ಪ್ರೇಣಿತ ಬಿಜೆಪಿ ಸರ್ಕಾರವಲ್ಲ. ಹೋರಾಟಗಾರ ಯಡಿಯೂರಪ್ಪ ಅವರ ಸರ್ಕಾರ. ಇದು ಪರಿವಾರಕ್ಕೆ ನುಂಗಲಾರದ ತುತ್ತಾಗಿದೆ. ಸರ್ಕಾರವನ್ನು ತಮ್ಮ ನಿರ್ಧಾರಗಳಿಗೆ ತಕ್ಕಂತೆ ನಿರ್ದೇಶಿಸುವ ಪರಿವಾರದ ತಲೆಯಾಳುಗಳ ಆಟ ಯಡಿಯೂರಪ್ಪನವರ ಮುಂದೆ ನಡೆಯದ ಕಾರಣವೇ ಅವರೆಲ್ಲಾ ಈಗ ಸರ್ಕಾರ ಮತ್ತು ಪಕ್ಷವನ್ನು ಬೇರ್ಪಡಿಸಿಕೊಂಡು ಯಡಿಯೂರಪ್ಪನವರ ಪದಚ್ಯುತಿಗಾಗಿ ಕಾಯತೊಡಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಹಿತದ ಯಡಿಯೂರಪ್ಪ ಅವರ ಮಾತುಗಳು ಪರಿವಾರದ ತಲೆಯಾಳುಗಳಿಗೆ ಬಿಜೆಪಿಯಲ್ಲಿನ ಯಡಿಯೂರಪ್ಪ ಅವರ ವಿರೋಧಿಗಳಿಗೆ ಅಸ್ತ್ರವೊಂದು ಸಿಕ್ಕಂತಾಗಿದೆ. ಆಟ ಮುಂದಿದೆ.

ಕೊನೆ ಮಾತು:

ಉತ್ತರದ ರಾಜ್ಯಗಳಲ್ಲಿ ದಲಿತರನ್ನು ಭಕ್ತಗಣ ಗುಂಪು ಹತ್ಯೆ ಮಾಡುತ್ತಿರುವಾಗ, ಹತ್ಯಾಚಾರವೆಸಗುತ್ತಿರುವಾಗ, ಐಷಾರಾಮಿ ಕಾರಿಗೆ ಕಟ್ಟಿ ನಡುರಸ್ತೆಯಲ್ಲೇ ಚರ್ಮಸುಲಿದು ಬಡಿಯುತ್ತಿರುವಾಗ ಅಂತಹ ಕೊಲೆಪಾತಕರಿಗೆ ಖಡಕ್ ಆದ ಅಧಿಕಾರಯುಕ್ತ ಎಚ್ಚರಿಕೆಯೊಂದನ್ನು ಕೊಡಬೇಕಾದ ಅಧಿಕಾರ ದಂಡ ಹಿಡಿದ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಆಡಿದ ಹೇಡಿತನದ ಮಾತೇನು ಗೊತ್ತಾ? ಬೇಕಾದರೆ ನನ್ನ ಎದೆಗೆ ಗುಂಡಿಡಿ, ದಲಿತರನ್ನು ಮಾತ್ರ ಕೊಲ್ಲಬೇಡಿ. ಈ ಮಾತು ಒಬ್ಬ ಹೇಡಿ ಮಾತ್ರ ಆಡಬಲ್ಲ. ಅಧಿಕಾರ ದಂಡ ಕೈಯಲ್ಲಿಟ್ಟುಕೊಂಡು ಅವರನ್ನು ಕೊಲ್ಲಬೇಡಿ ನನ್ನನ್ನು ಕೊಲ್ಲಿ ಎಂದು ಹೇಳುವುದು ನ್ಯಾಯ ನಿಷ್ಠುರ, ಕಾನೂನು ಕಾಯಬೇಕಾದ ನಾಯಕನೊಬ್ಬ ಸ್ವತಃ ಕೊಲ್ಲುವ ಕ್ರಿಯೆಯನ್ನು ಮಾನ್ಯ ಮಾಡಿದಂತಲ್ಲವೇ? ಯಾವತ್ತಾದರೂ ಪ್ರಧಾನಿ ಈ ನೆಲದ ಯಾವೊಬ್ಬ ನಾಗರೀಕರನಿಗೂ ಜೀವಹಾನಿ, ಮಾನಹಾನಿ ಆಗಿದ್ದೇ ಆದರೆ ಅಂತಹವರನ್ನು ಕಾನೂನು ಕ್ರಮಗಳಿಂದ ಶಿಕ್ಷಿಸುತ್ತೇನೆ ಎಂದು ಆಡಿದ್ದೇ(ರಾಜಧರ್ಮ ಪಾಲನೆ) ಆಗಿದ್ದರೆ ಇಂದು ದೇಶದಲ್ಲಿ ಇಷ್ಟೊಂದು ಧರ್ಮದ್ವೇಷ, ಜಾತಿ ದ್ವೇಷದ ರಕ್ತಪಾತಗಳು ಆಗುತ್ತಿರಲಿಲ್ಲವೇನೊ?. ಇಂದು ಈ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಡಿದ ಮಾತನ್ನೇ ಈ ದೇಶದ ಪ್ರಧಾನಮಂತ್ರಿ ಆಡಬೇಕು. ದೀಪ ಹಚ್ಚುವುದು, ಜಾಗಟೆ ಬಾರಿಸುವುದು, ತಪ್ಪಾಳೆ ತಟ್ಟಿ ಬೀದಿಯಲ್ಲಿ ಅರಚಲು ಕರೆ ಕೊಡುವುದನ್ನು ಬಿಟ್ಟು ಅದಕ್ಕಾಗಿ ಮೋದಿ ಈ ಹೊತ್ತಿಗೆ ಯಡಿಯೂರಪ್ಪ ಅವರನ್ನು ರಾಜಧರ್ಮದ ಆದರ್ಶವನ್ನಾಗಿ ಅನುಸರಿಸಲಿ.

ದಕ್ಷಿಣ ಆಫ್ರಿಕಾದಲ್ಲಿ ಬಿಳಿಯರ ಕ್ರೌರ್ಯದ ವಿರುದ್ದ ಹೋರಾಡುತ್ತಾ ತಮ್ಮ ಯೌವ್ವನದ ಆಯಸ್ಸಿನ ಕಾಲು ಶತಮಾನವನ್ನೆ (೨೭ವರ್ಷ) ಜೈಲಿನ ಕತ್ತಲೆ ಕೋಣೆಯಲ್ಲಿ ಕಳೆದ ನೆಲ್ಸನ್ ಮಂಡೇಲಾ ಅವರು ಶಾಂತಿಯಹೋರಾಟದ ಫಲವಾಗಿಯೇ ಆ ದೇಶದ ಅಧ್ಯಕ್ಷರಾದಾಗ ಜಗತ್ತಿನ ಇಡೀ ಬಿಳಿಯರ ಸಾಮ್ರಾಜ್ಯ ಭಯ, ಅತಂಕದಿಂದ ನೆಲ್ಸನ್ ಮಂಡೇಲ ಅವರ ಕಡೆ ನೋಡುತ್ತಿತ್ತು. ಅವರ ಮೊದಲ ಅಧ್ಯಕ್ಷೀಯ ಭಾಷಣಕ್ಕಾಗಿ ಬಿಳಿಯರ ಜಗತ್ತು ಭಯದಿಂದ ಕಾಯುತ್ತಿದ್ದರೆ. ತಮ್ಮ ಮೇಲೆ ಅಮಾನುಷ ಕ್ರೌರ್ಯ ಮೆರೆದ ಬಿಳಿಯ ವಿರುದ್ದ ಸೇಡು ತೀರಿಸಿಕೊಳ್ಳಲು ಕಾದು ಕುಂತ ಕರಿಯ ಸಮುದಾಯ ರಣೋತ್ಸಾಹದಿಂದ ತಮ್ಮ ನಾಯಕನ ಸೇಡಿನ ಆದೇಶದ ನಿರೀಕ್ಷೆಯಲ್ಲಿ ಕಾಯುತ್ತಿತ್ತು. ಆದರೆ ಮಂಡಲೇ ತಮ್ಮ ಮೊದಲ ಅಧ್ಯಕ್ಷೀಯ ಭಾಷಣದಲ್ಲಿ ಅಡಿದ ಮಾತು ಎಂದರೆ ದಕ್ಷಿಣ ಆಫ್ರಿಕಾದ ಯಾವೊಬ್ಬ ಬಿಳಿಯನ ಒಂದು ತೊಟ್ಟು ರಕ್ತ ನೆಲಕ್ಕೆ ಬಿದ್ದಿದ್ದೇ ಆದರೆ ಅದಕ್ಕೆ ಕಾರಣರಾದವರೂ ಯಾರೇ ಇರಲಿ ಅವರನ್ನು ಅತ್ಯಂತ ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂಬುದಾಗಿತ್ತು. ಈ ಕಾರಣಕ್ಕಾಗಿಯೇ ಮಂಡೇಲ ಜಗತ್ತಿನ ಮಾನವತೆಯ ಮಹಾ ಸಂತನಂತೆ ಚರಿತ್ರೆಯಲ್ಲಿ ಉಳಿದು ಹೋಗಿದ್ದಾರೆ.
ಚರಿತ್ರೆಯನ್ನು ಅರಿಯದವನು ಚರಿತ್ರೆಯನ್ನು ಸೃಷ್ಟಿಸಲಾರ.
ಎಲ್ಲಿಯ ಮಂಡೇಲ.. ? ಎಲ್ಲಿಯ ಯಡಿಯೂರಪ್ಪ…? ಎಲ್ಲಿಯ ಮೋದಿ.?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...