Homeಮುಖಪುಟಮೋದಿಗೆ ಯಡಿಯೂರಪ್ಪ ಯಾಕೆ ಈ ಹೊತ್ತಿನ ಆದರ್ಶವಾಗಬಲ್ಲರು ಗೊತ್ತಾ?

ಮೋದಿಗೆ ಯಡಿಯೂರಪ್ಪ ಯಾಕೆ ಈ ಹೊತ್ತಿನ ಆದರ್ಶವಾಗಬಲ್ಲರು ಗೊತ್ತಾ?

- Advertisement -
- Advertisement -

ಇಡೀ ಮನುಷ್ಯ ಕುಲವನ್ನೇ ನಿರ್ನಾಮ ಮಾಡುವತ್ತ ಮುನ್ನುಗ್ಗುತ್ತಿರುವ ಕೊರೊನ ರೋಗದ ವಿರುದ್ಧ ಹೋರಾಟ ನಡೆದಿರುವ ಈ ಸಂದರ್ಭದಲ್ಲಿ, ಒಂದು ಧರ್ಮದ ಅನುಯಾಯಿಗಳನ್ನು ಗುರಿಯಾಗಿಸಿಕೊಂಡು ವಿಕೃತ ಮನೋಸ್ಥಿತಿಯನ್ನು ಸಮಾಜದಲ್ಲಿ ಬಿತ್ತುವ ಕೆಲಸ ನಡೆದಿರುವ ಹೊತ್ತಿನಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪನವರು ಅತ್ಯಂತ ಹೊಣೆಗಾರಿಕೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯವನ್ನು ಅನುಮಾನದಿಂದ ನೋಡುವ ಅಗತ್ಯವಿಲ್ಲ. ಅಲ್ಪಸಂಖ್ಯಾತರ ವಿರುದ್ದ ಯಾರೇ ಟೀಕೆ ಮಾಡಲಿ, ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಲಿ ಅಂತಹವರ ವಿರುದ್ದ ಕಾನೂನು ಕ್ರಮ ಅನಿವಾರ್ಯ ಎಂಬ ಸಂದೇಶ ಸಾರಿದ ಕೆಲವೆ ನಿಮಿಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯಾರಾದರೂ ಕೋಮುದ್ವೇಷ ಬಿತ್ತುವ, ಸೌಹಾರ್ದತೆ ಕದಡುವ ಅಥವಾ ಯಾವುದೇ ಧರ್ಮ, ಜಾತಿಯವರ ವಿರುದ್ದ ಅವಹೇಳನಕಾರಿ ಮಾತುಗಳನ್ನು ಆಡಿದರೆ ಅವರ ವಿರುದ್ದ ಕಾನೂನುಕ್ರಮ ಜರುಗಿಸುವ ಆದೇಶಗಳು ಹೊರಡಿಸಿದ್ದಾರೆ. ಅಂದರೆ ಮುಖ್ಯಮಂತ್ರಿಗಳ ಮಾತು ಕಾರ್ಯರೂಪಕ್ಕೆ ಬಂದಿದೆ. ಇದುವೆ ಅಧಿಕಾರದ ಇಚ್ಛಾಶಕ್ತಿ ಎಂದು ಭಾವಿಸಬಹುದು. ಇಂತಹದ್ದೊಂದು ಮುತ್ಸದ್ದಿತನ ಜನ ಹೋರಾಟದ ನೆಲೆಯಲ್ಲಿ ಬೆಳೆದು ಬಂದ ನಾಯಕನಿಗೆ ಮಾತ್ರ ದಕ್ಕಬಲ್ಲದೇನೋ. ಈಗ ಯಡಿಯೂರಪ್ಪ ಅವರು ಆಡಿದ ಮಾತಿಗೆ ಬದ್ದರಾಗಿಯೂ ನಡೆದುಕೊಳ್ಳಬೇಕಾದ ಪಾರದರ್ಶಕತೆಯನ್ನು ತೋರಬೇಕಿದೆ. ಅಲ್ಪಸಂಖ್ಯಾತ ಸಮುದಾಯದ ವಿರುದ್ದ ತಮ್ಮ ಪಕ್ಷದ ಶಾಸಕರು, ಸಂಸದರು, ಮುಂದಾಳುಗಳ ನಾಲಿಗೆಗೂ ಕಾನೂನು ಕುಣಿಕೆ ಹಾಕಿ ಹದ್ದುಬಸ್ತಿನಲ್ಲಿಡಬೇಕು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ 


ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿ ಮತ್ತದರ ಮಾತೃಕೋಣೆ ಪರಿವಾರದಲ್ಲಿ ಕೊರೊನ ಬಾಧಿತ ನರಳಾಟ ವಕ್ಕರಿಸಿಕೊಂಡಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊರೊನಾ ಹರಡುವಿಕೆಗೆ ತಬ್ಲೀಘಿಗಳೆ ಕಾರಣ. ಕೊರೊನಾ ಹರುಡುವಿಕೆ ಇದೊಂದು ರೂಪದ ಜಿಹಾದ್ ಎಂದು ಬಹಿರಂಗವಾಗಿ ಹೇಳಿದ್ದರು. ಶಾಸಕ ರೇಣುಕಾಚಾರ್ಯ ಸೇರಿದಂತೆ ಅನೇಕ ಬಿಜೆಪಿ ಶಾಸಕ ,ಸಂಸದರುಗಳು ಅಲ್ಪಸಂಖ್ಯಾತ ಸಮುದಾಯವನ್ನೆ ಗುರಿಯಾಗಿಸಿಕೊಂಡು ನಾಲಿಗೆ ಹರಿಬಿಟ್ಟಿದ್ದರು. ಕೊರೊನಾ ಸೋಂಕಿಗೆ ಮುಸ್ಲಿಮರೇ ಕಾರಣ ಎಂಬಂತೆ ಅವರ ವಿರುದ್ದ ಸಂಪಾದ್ರಾಯಿಕ ನ್ಯೂಸ್ ಚಾನಲ್‌ಗಳು, ಸಾಮಾಜಿಕ ಜಾಲತಾಣಗಳು ಒಂದೇ ಸಮನೆ ಚೀರಿಕೊಳ್ಳತೊಡಗಿದ್ದವು. ಇವೆಲ್ಲದಕ್ಕೂ ಯಡಿಯೂರಪ್ಪ ಅವರ ಈ ಮೇಲಿನ ಮಾತು ಅಂಕುಶವಿಟ್ಟಂತಾಗಿದೆ.

ರಾಜ್ಯದಲ್ಲಿ ಈಗಾಗಲೆ ಧರ್ಮನಿಂದನೆ ಧೂರ್ತರ ವಿರುದ್ದ ಕೇಸುಗಳು ದಾಖಲಾಗತೊಡಗಿವೆ. ಇದೊಂದು ಪರಿಣಾಮಕಾರಿ ಬೆಳವಣಿಗೆ ಮತ್ತು ಅಲ್ಪಸಂಖ್ಯಾತ ಜನ ಸಮುದಾಯದಲ್ಲಿ ಭರವಸೆ ಮೂಡಿಸಿದ ಬಗೆ ಎನ್ನಬಹುದು. ಹಾಗೆ ನೋಡಿದರೆ ಯಡಿಯೂರಪ್ಪ ಎಂದಿಗೂ ಕೋಮುವಾದಿಯಲ್ಲ ಎಂಬುದನ್ನು ಅನೇಕ ಸಾರಿ ಅವರ ನಡೆ-ನುಡಿಗಳು ಸಾಬೀತು ಮಾಡುತ್ತಲೆ ಬಂದಿವೆ. ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಅತ್ಯಂತ ಸೌಹಾರ್ದಮಯವಾಗಿ ಕಾಯ್ದುಕೊಂಡು ಬರುತ್ತಿರುವುದರಿಂದಲೇ ಎಂತಹುದ್ದೇ ಸಂದರ್ಭದಲ್ಲೂ ಶೇ. ೩೦ ರಷ್ಟು ಮುಸ್ಲಿಂ ಮತಗಳು ಯಡಿಯೂರಪ್ಪ ಅವರಿಗೆ ಮೀಸಲಾಗಿರುತ್ತದೆ. ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದಾಗ ಪ್ರಬಲ ಲಿಂಗಾಯಿತ ಸಮುದಾಯದ ನಂತರ ಯಡಿಯೂರಪ್ಪ ಅವರಿಗೆ ಬೆಂಬಲ ಕೊಟ್ಟ ಇನ್ನೊಂದು ಸಮುದಾಯವೆಂದರೆ ಅದು ಮುಸ್ಲಿಂ ಸಮುದಾಯ. ಅವರೆಂದೂ ಮುಸ್ಲಿಂರ ವಿರುದ್ದ ಬಹಿರಂಗವಾಗಿ ಕಾರಿಕೊಂಡ ಸನ್ನಿವೇಶವಂತೂ ಕಂಡಿದ್ದಿಲ್ಲ. ರಾಜಕೀಯ ಕಾರಣಗಳಿಗಾಗಿ ಅಂತಹ ವೇದಿಕೆಗಳನ್ನು ಹಂಚಿಕೊಂಡಿದ್ದರೂ ಯಡಿಯೂರಪ್ಪ ಆಂತರ್ಯದಲ್ಲಿ ಧರ್ಮ ದ್ವೇಷದ ಸೋಂಕು ಅಂಟಿಸಿಕೊಂಡವರಲ್ಲ ಎಂಬುದನ್ನು ಒಪ್ಪಲೇ ಬೇಕಾದ ಮಾತು. ಇಂತಹ ಕಾರಣಗಳಿಂದಲೇ ರಾಜ್ಯ ಬಿಜೆಪಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸ ಉಳಿಸಿಕೊಂಡಿರುವವರಲ್ಲಿ ಯಡಿಯೂರಪ್ಪ ಅಗ್ರಮಾನ್ಯರು ಎನ್ನಬಹುದು.

ಕೊರೊನ ಸೋಂಕು ವಿರುದ್ದದ ಹೋರಾಟದ ಜೊತೆಗೆ ಮತಾಂಧರ ಧೋರಣೆಗಳನ್ನು ಹತ್ತಿಕ್ಕುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒಂದು ಸವಾಲಿನ ಕೆಲಸವೂ ಆಗಿದೆ. ಅದಕ್ಕಾಗಿ ಮಾನಸಿಕವಾಗಿ ಅವರು ಸಿದ್ದರಾದಂತೆ ಕಂಡಿದ್ದಾರೆ. ವಾಸ್ತವವಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ಆರೆಸ್ಸೆಸ್ಸಿನ ವ್ಯಕ್ತಿಯಾಗಿ ಇಂದು ಉಳಿದಿಲ್ಲ. ಅವರೆಂದೂ ಯಾರ ಕೈಗೊಂಬೆಯಂತೆ ಕೆಲಸ ಮಾಡುವ ಜಯಮಾನದವರೇ ಅಲ್ಲ. ಹಾಗಾಗಿಯೇ ಅವರು ಬಹುತೇಕ ಸಂದರ್ಭಗಳಲ್ಲಿ ಸ್ವಪಕ್ಷೀಯರ ಅಸಮಾಧಾನಗಳಿಗೆ ತುತ್ತಾಗುತ್ತಲೆ, ಸ್ಫೋಟಗೊಳ್ಳತ್ತಲೆ ಬಂದಿದ್ದಾರೆ. ರಾಜ್ಯದಲ್ಲಿರುವುದು ಪರಿವಾರ ಪ್ರೇಣಿತ ಬಿಜೆಪಿ ಸರ್ಕಾರವಲ್ಲ. ಹೋರಾಟಗಾರ ಯಡಿಯೂರಪ್ಪ ಅವರ ಸರ್ಕಾರ. ಇದು ಪರಿವಾರಕ್ಕೆ ನುಂಗಲಾರದ ತುತ್ತಾಗಿದೆ. ಸರ್ಕಾರವನ್ನು ತಮ್ಮ ನಿರ್ಧಾರಗಳಿಗೆ ತಕ್ಕಂತೆ ನಿರ್ದೇಶಿಸುವ ಪರಿವಾರದ ತಲೆಯಾಳುಗಳ ಆಟ ಯಡಿಯೂರಪ್ಪನವರ ಮುಂದೆ ನಡೆಯದ ಕಾರಣವೇ ಅವರೆಲ್ಲಾ ಈಗ ಸರ್ಕಾರ ಮತ್ತು ಪಕ್ಷವನ್ನು ಬೇರ್ಪಡಿಸಿಕೊಂಡು ಯಡಿಯೂರಪ್ಪನವರ ಪದಚ್ಯುತಿಗಾಗಿ ಕಾಯತೊಡಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಹಿತದ ಯಡಿಯೂರಪ್ಪ ಅವರ ಮಾತುಗಳು ಪರಿವಾರದ ತಲೆಯಾಳುಗಳಿಗೆ ಬಿಜೆಪಿಯಲ್ಲಿನ ಯಡಿಯೂರಪ್ಪ ಅವರ ವಿರೋಧಿಗಳಿಗೆ ಅಸ್ತ್ರವೊಂದು ಸಿಕ್ಕಂತಾಗಿದೆ. ಆಟ ಮುಂದಿದೆ.

ಕೊನೆ ಮಾತು:

ಉತ್ತರದ ರಾಜ್ಯಗಳಲ್ಲಿ ದಲಿತರನ್ನು ಭಕ್ತಗಣ ಗುಂಪು ಹತ್ಯೆ ಮಾಡುತ್ತಿರುವಾಗ, ಹತ್ಯಾಚಾರವೆಸಗುತ್ತಿರುವಾಗ, ಐಷಾರಾಮಿ ಕಾರಿಗೆ ಕಟ್ಟಿ ನಡುರಸ್ತೆಯಲ್ಲೇ ಚರ್ಮಸುಲಿದು ಬಡಿಯುತ್ತಿರುವಾಗ ಅಂತಹ ಕೊಲೆಪಾತಕರಿಗೆ ಖಡಕ್ ಆದ ಅಧಿಕಾರಯುಕ್ತ ಎಚ್ಚರಿಕೆಯೊಂದನ್ನು ಕೊಡಬೇಕಾದ ಅಧಿಕಾರ ದಂಡ ಹಿಡಿದ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಆಡಿದ ಹೇಡಿತನದ ಮಾತೇನು ಗೊತ್ತಾ? ಬೇಕಾದರೆ ನನ್ನ ಎದೆಗೆ ಗುಂಡಿಡಿ, ದಲಿತರನ್ನು ಮಾತ್ರ ಕೊಲ್ಲಬೇಡಿ. ಈ ಮಾತು ಒಬ್ಬ ಹೇಡಿ ಮಾತ್ರ ಆಡಬಲ್ಲ. ಅಧಿಕಾರ ದಂಡ ಕೈಯಲ್ಲಿಟ್ಟುಕೊಂಡು ಅವರನ್ನು ಕೊಲ್ಲಬೇಡಿ ನನ್ನನ್ನು ಕೊಲ್ಲಿ ಎಂದು ಹೇಳುವುದು ನ್ಯಾಯ ನಿಷ್ಠುರ, ಕಾನೂನು ಕಾಯಬೇಕಾದ ನಾಯಕನೊಬ್ಬ ಸ್ವತಃ ಕೊಲ್ಲುವ ಕ್ರಿಯೆಯನ್ನು ಮಾನ್ಯ ಮಾಡಿದಂತಲ್ಲವೇ? ಯಾವತ್ತಾದರೂ ಪ್ರಧಾನಿ ಈ ನೆಲದ ಯಾವೊಬ್ಬ ನಾಗರೀಕರನಿಗೂ ಜೀವಹಾನಿ, ಮಾನಹಾನಿ ಆಗಿದ್ದೇ ಆದರೆ ಅಂತಹವರನ್ನು ಕಾನೂನು ಕ್ರಮಗಳಿಂದ ಶಿಕ್ಷಿಸುತ್ತೇನೆ ಎಂದು ಆಡಿದ್ದೇ(ರಾಜಧರ್ಮ ಪಾಲನೆ) ಆಗಿದ್ದರೆ ಇಂದು ದೇಶದಲ್ಲಿ ಇಷ್ಟೊಂದು ಧರ್ಮದ್ವೇಷ, ಜಾತಿ ದ್ವೇಷದ ರಕ್ತಪಾತಗಳು ಆಗುತ್ತಿರಲಿಲ್ಲವೇನೊ?. ಇಂದು ಈ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಡಿದ ಮಾತನ್ನೇ ಈ ದೇಶದ ಪ್ರಧಾನಮಂತ್ರಿ ಆಡಬೇಕು. ದೀಪ ಹಚ್ಚುವುದು, ಜಾಗಟೆ ಬಾರಿಸುವುದು, ತಪ್ಪಾಳೆ ತಟ್ಟಿ ಬೀದಿಯಲ್ಲಿ ಅರಚಲು ಕರೆ ಕೊಡುವುದನ್ನು ಬಿಟ್ಟು ಅದಕ್ಕಾಗಿ ಮೋದಿ ಈ ಹೊತ್ತಿಗೆ ಯಡಿಯೂರಪ್ಪ ಅವರನ್ನು ರಾಜಧರ್ಮದ ಆದರ್ಶವನ್ನಾಗಿ ಅನುಸರಿಸಲಿ.

ದಕ್ಷಿಣ ಆಫ್ರಿಕಾದಲ್ಲಿ ಬಿಳಿಯರ ಕ್ರೌರ್ಯದ ವಿರುದ್ದ ಹೋರಾಡುತ್ತಾ ತಮ್ಮ ಯೌವ್ವನದ ಆಯಸ್ಸಿನ ಕಾಲು ಶತಮಾನವನ್ನೆ (೨೭ವರ್ಷ) ಜೈಲಿನ ಕತ್ತಲೆ ಕೋಣೆಯಲ್ಲಿ ಕಳೆದ ನೆಲ್ಸನ್ ಮಂಡೇಲಾ ಅವರು ಶಾಂತಿಯಹೋರಾಟದ ಫಲವಾಗಿಯೇ ಆ ದೇಶದ ಅಧ್ಯಕ್ಷರಾದಾಗ ಜಗತ್ತಿನ ಇಡೀ ಬಿಳಿಯರ ಸಾಮ್ರಾಜ್ಯ ಭಯ, ಅತಂಕದಿಂದ ನೆಲ್ಸನ್ ಮಂಡೇಲ ಅವರ ಕಡೆ ನೋಡುತ್ತಿತ್ತು. ಅವರ ಮೊದಲ ಅಧ್ಯಕ್ಷೀಯ ಭಾಷಣಕ್ಕಾಗಿ ಬಿಳಿಯರ ಜಗತ್ತು ಭಯದಿಂದ ಕಾಯುತ್ತಿದ್ದರೆ. ತಮ್ಮ ಮೇಲೆ ಅಮಾನುಷ ಕ್ರೌರ್ಯ ಮೆರೆದ ಬಿಳಿಯ ವಿರುದ್ದ ಸೇಡು ತೀರಿಸಿಕೊಳ್ಳಲು ಕಾದು ಕುಂತ ಕರಿಯ ಸಮುದಾಯ ರಣೋತ್ಸಾಹದಿಂದ ತಮ್ಮ ನಾಯಕನ ಸೇಡಿನ ಆದೇಶದ ನಿರೀಕ್ಷೆಯಲ್ಲಿ ಕಾಯುತ್ತಿತ್ತು. ಆದರೆ ಮಂಡಲೇ ತಮ್ಮ ಮೊದಲ ಅಧ್ಯಕ್ಷೀಯ ಭಾಷಣದಲ್ಲಿ ಅಡಿದ ಮಾತು ಎಂದರೆ ದಕ್ಷಿಣ ಆಫ್ರಿಕಾದ ಯಾವೊಬ್ಬ ಬಿಳಿಯನ ಒಂದು ತೊಟ್ಟು ರಕ್ತ ನೆಲಕ್ಕೆ ಬಿದ್ದಿದ್ದೇ ಆದರೆ ಅದಕ್ಕೆ ಕಾರಣರಾದವರೂ ಯಾರೇ ಇರಲಿ ಅವರನ್ನು ಅತ್ಯಂತ ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂಬುದಾಗಿತ್ತು. ಈ ಕಾರಣಕ್ಕಾಗಿಯೇ ಮಂಡೇಲ ಜಗತ್ತಿನ ಮಾನವತೆಯ ಮಹಾ ಸಂತನಂತೆ ಚರಿತ್ರೆಯಲ್ಲಿ ಉಳಿದು ಹೋಗಿದ್ದಾರೆ.
ಚರಿತ್ರೆಯನ್ನು ಅರಿಯದವನು ಚರಿತ್ರೆಯನ್ನು ಸೃಷ್ಟಿಸಲಾರ.
ಎಲ್ಲಿಯ ಮಂಡೇಲ.. ? ಎಲ್ಲಿಯ ಯಡಿಯೂರಪ್ಪ…? ಎಲ್ಲಿಯ ಮೋದಿ.?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...