Homeಮುಖಪುಟಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

"ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ" ಎಂದು ಫಡ್ನವೀಸ್ ಹೇಳಿದ್ದರು.

- Advertisement -
- Advertisement -

“ನೀವು ಹಿಂದುತ್ವದ ಬಗ್ಗೆ ಮಾತನಾಡುತ್ತೀರಿ. ಯಾರದೋ ಫೋಟೋ ಹಾಕಿದರೆ ಬೆದರುವಷ್ಟು ನಿಮ್ಮ ಹಿಂದುತ್ವ ದುರ್ಬಲವೇ? ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕಾ? ಕರ್ನಾಟಕದಲ್ಲಿ ಬಜರಂಗ ಬಲಿ ನಿಮಗೆ ಸಹಾಯ ಮಾಡಲಿಲ್ಲ. ಹಾಗಾಗಿ ಮಹಾರಾಷ್ಟ್ರದಲ್ಲಿ ನಿಮಗೆ ಔರಂಗಜೇಬ್ ಹಿಡಿದುಕೊಂಡಿದ್ದೀರಿ” ಎಂದು ದೇವೇಂದ್ರ ಫಡ್ನವಿಸ್‌ ಉದ್ದೇಶಿಸಿ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸುವ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕುರಿತು ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಮು ಘರ್ಷಣೆಗಳು ಹೆಚ್ಚುತ್ತಿರುವುದೇಕೆ ಎಂದು ರಾವತ್ ಪ್ರಶ್ನಿಸಿದ್ದಾರೆ.

ರಾಜ್ಯದ ಗೃಹ ಸಚಿವರೂ ಆಗಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಒಂದು ಕಡೆ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಾರೆ ಮತ್ತೊಂದು ಕಡೆ ಹಿಂದುತ್ವವಾದಿಗಳ ಆಕ್ರಮಣವನ್ನು ಸಮರ್ಥಿಸಿಕೊಂಡಿರುವುದನ್ನು ರಾವತ್ ಟೀಕಿಸಿದ್ದಾರೆ.

“ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ” ಎಂದು ಫಡ್ನವೀಸ್ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾದ ಕಾರಣ ಫಡ್ನವೀಸ್ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಕೋಮುಗಲಭೆ ಸೃಷ್ಟಿಸುವುದು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಳ್ಳುವ ಬಿಜೆಪಿಯ ಕುತಂತ್ರದ ಯೋಜನೆಯ ಭಾಗವಾಗಿದೆ. ಮುಂಬೈನಲ್ಲಿ ಮಹಿಳೆಯರು ಮತ್ತು ಹುಡುಗಿಯರು ಸುರಕ್ಷಿತವಾಗಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ಪ್ರಕರಣವೇನು?

ಮೊಘಲ್‌ ದೊರೆ ಔರಂಗ್‌ಜೇಬ್‌ ಮತ್ತು ಟಿಪ್ಪು ಸುಲ್ತಾನ್‌ ಇಬ್ಬರನ್ನೂ ವೈಭವೀಕರಿಸಿ ವಾಟ್ಸಪ್‌ನಲ್ಲಿ ಸ್ಟೆಟಸ್‌ ಹಾಕಿಕೊಂಡಿದ್ದ ಮೂವರು ಅಪ್ರಾಪ್ತ ಬಾಲಕರ ನಡೆಯನ್ನು ವಿರೋಧಿಸಿ ಮಹಾರಷ್ಟ್ರದ ಕೊಲ್ಲಾಪುರದಲ್ಲಿ ಬಲಪಂಥೀಯ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿವೆ. ಶಾಂತಿಯುತವಾಗಿ ಶುರುವಾಗಿದ್ದ ಈ ಪ್ರತಿಭಟನೆ ಕೆಲವೇ ಹೊತ್ತಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಕೊಲ್ಲಾಪುರದ ನಿವಾಸಿಗಳಾದ ಮೂವರು ಅಪ್ರಾಪ್ತರು ಮಂಗಳವಾರ ಔರಂಗ್‌ಜೇಬ್‌ ಮತ್ತು ಟಿಪ್ಪುವನ್ನು ವೈಭವೀಕರಿಸುವ ಫೋಟೋಗಳನ್ನು ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಂಚಿಕೊಂಡು ವಿವಾದಾತ್ಮಕ ಆಡಿಯೋವನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಪೋಟೋಗಳು ಮತ್ತು ವಿವಾದಾತ್ಮಕ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಬುಧವಾರ ಕೊಲ್ಲಾಪುರ ಬಂದ್‌ಗೆ ಕರೆ ನೀಡಿವೆ. ವಿಷಯ ತಿಳಿದ ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ‌ ರಾಹುಲ್‌ ರೇಖಾವರ್‌ ಕೂಡ ಕೆಲ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿ ಬಂದ್‌ ಕರೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಅವರ ಪ್ರಯತ್ನ ವಿಫಲವಾಗಿದೆ.

ಬುಧವಾರ ಬೆಳಗ್ಗೆ ಬಲಪಂಥೀಯ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಕೊಲ್ಲಾಪುರದ ಶಿವಾಜಿ ಚೌಕ್‌ ಬಳಿ ಜಮಾಯಿಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ಅಂಗಡಿ-ಮುಂಗಟ್ಟುಗಳನ್ನು ದೋಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಲಾಠಿ ಚಾರ್ಜ್‌ ನಡೆಸಿರುವ ಪೊಲೀಸರು 36 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...