Homeಮುಖಪುಟಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

"ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ" ಎಂದು ಫಡ್ನವೀಸ್ ಹೇಳಿದ್ದರು.

- Advertisement -
- Advertisement -

“ನೀವು ಹಿಂದುತ್ವದ ಬಗ್ಗೆ ಮಾತನಾಡುತ್ತೀರಿ. ಯಾರದೋ ಫೋಟೋ ಹಾಕಿದರೆ ಬೆದರುವಷ್ಟು ನಿಮ್ಮ ಹಿಂದುತ್ವ ದುರ್ಬಲವೇ? ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕಾ? ಕರ್ನಾಟಕದಲ್ಲಿ ಬಜರಂಗ ಬಲಿ ನಿಮಗೆ ಸಹಾಯ ಮಾಡಲಿಲ್ಲ. ಹಾಗಾಗಿ ಮಹಾರಾಷ್ಟ್ರದಲ್ಲಿ ನಿಮಗೆ ಔರಂಗಜೇಬ್ ಹಿಡಿದುಕೊಂಡಿದ್ದೀರಿ” ಎಂದು ದೇವೇಂದ್ರ ಫಡ್ನವಿಸ್‌ ಉದ್ದೇಶಿಸಿ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸುವ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕುರಿತು ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಮು ಘರ್ಷಣೆಗಳು ಹೆಚ್ಚುತ್ತಿರುವುದೇಕೆ ಎಂದು ರಾವತ್ ಪ್ರಶ್ನಿಸಿದ್ದಾರೆ.

ರಾಜ್ಯದ ಗೃಹ ಸಚಿವರೂ ಆಗಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಒಂದು ಕಡೆ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಾರೆ ಮತ್ತೊಂದು ಕಡೆ ಹಿಂದುತ್ವವಾದಿಗಳ ಆಕ್ರಮಣವನ್ನು ಸಮರ್ಥಿಸಿಕೊಂಡಿರುವುದನ್ನು ರಾವತ್ ಟೀಕಿಸಿದ್ದಾರೆ.

“ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ” ಎಂದು ಫಡ್ನವೀಸ್ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾದ ಕಾರಣ ಫಡ್ನವೀಸ್ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಕೋಮುಗಲಭೆ ಸೃಷ್ಟಿಸುವುದು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಳ್ಳುವ ಬಿಜೆಪಿಯ ಕುತಂತ್ರದ ಯೋಜನೆಯ ಭಾಗವಾಗಿದೆ. ಮುಂಬೈನಲ್ಲಿ ಮಹಿಳೆಯರು ಮತ್ತು ಹುಡುಗಿಯರು ಸುರಕ್ಷಿತವಾಗಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ಪ್ರಕರಣವೇನು?

ಮೊಘಲ್‌ ದೊರೆ ಔರಂಗ್‌ಜೇಬ್‌ ಮತ್ತು ಟಿಪ್ಪು ಸುಲ್ತಾನ್‌ ಇಬ್ಬರನ್ನೂ ವೈಭವೀಕರಿಸಿ ವಾಟ್ಸಪ್‌ನಲ್ಲಿ ಸ್ಟೆಟಸ್‌ ಹಾಕಿಕೊಂಡಿದ್ದ ಮೂವರು ಅಪ್ರಾಪ್ತ ಬಾಲಕರ ನಡೆಯನ್ನು ವಿರೋಧಿಸಿ ಮಹಾರಷ್ಟ್ರದ ಕೊಲ್ಲಾಪುರದಲ್ಲಿ ಬಲಪಂಥೀಯ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿವೆ. ಶಾಂತಿಯುತವಾಗಿ ಶುರುವಾಗಿದ್ದ ಈ ಪ್ರತಿಭಟನೆ ಕೆಲವೇ ಹೊತ್ತಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಕೊಲ್ಲಾಪುರದ ನಿವಾಸಿಗಳಾದ ಮೂವರು ಅಪ್ರಾಪ್ತರು ಮಂಗಳವಾರ ಔರಂಗ್‌ಜೇಬ್‌ ಮತ್ತು ಟಿಪ್ಪುವನ್ನು ವೈಭವೀಕರಿಸುವ ಫೋಟೋಗಳನ್ನು ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಂಚಿಕೊಂಡು ವಿವಾದಾತ್ಮಕ ಆಡಿಯೋವನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಪೋಟೋಗಳು ಮತ್ತು ವಿವಾದಾತ್ಮಕ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಬುಧವಾರ ಕೊಲ್ಲಾಪುರ ಬಂದ್‌ಗೆ ಕರೆ ನೀಡಿವೆ. ವಿಷಯ ತಿಳಿದ ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ‌ ರಾಹುಲ್‌ ರೇಖಾವರ್‌ ಕೂಡ ಕೆಲ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿ ಬಂದ್‌ ಕರೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಅವರ ಪ್ರಯತ್ನ ವಿಫಲವಾಗಿದೆ.

ಬುಧವಾರ ಬೆಳಗ್ಗೆ ಬಲಪಂಥೀಯ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಕೊಲ್ಲಾಪುರದ ಶಿವಾಜಿ ಚೌಕ್‌ ಬಳಿ ಜಮಾಯಿಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ಅಂಗಡಿ-ಮುಂಗಟ್ಟುಗಳನ್ನು ದೋಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಲಾಠಿ ಚಾರ್ಜ್‌ ನಡೆಸಿರುವ ಪೊಲೀಸರು 36 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...