Homeಮುಖಪುಟಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕೆ?- ದೇವೇಂದ್ರ ಫಡ್ನವಿಸ್‌ಗೆ ಸಂಜಯ್ ರಾವತ್ ಪ್ರಶ್ನೆ

"ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ" ಎಂದು ಫಡ್ನವೀಸ್ ಹೇಳಿದ್ದರು.

- Advertisement -
- Advertisement -

“ನೀವು ಹಿಂದುತ್ವದ ಬಗ್ಗೆ ಮಾತನಾಡುತ್ತೀರಿ. ಯಾರದೋ ಫೋಟೋ ಹಾಕಿದರೆ ಬೆದರುವಷ್ಟು ನಿಮ್ಮ ಹಿಂದುತ್ವ ದುರ್ಬಲವೇ? ಚುನಾವಣೆ ಗೆಲ್ಲಲು ನಿಮಗೆ ಔರಂಗಜೇಬ್ ಬೇಕಾ? ಕರ್ನಾಟಕದಲ್ಲಿ ಬಜರಂಗ ಬಲಿ ನಿಮಗೆ ಸಹಾಯ ಮಾಡಲಿಲ್ಲ. ಹಾಗಾಗಿ ಮಹಾರಾಷ್ಟ್ರದಲ್ಲಿ ನಿಮಗೆ ಔರಂಗಜೇಬ್ ಹಿಡಿದುಕೊಂಡಿದ್ದೀರಿ” ಎಂದು ದೇವೇಂದ್ರ ಫಡ್ನವಿಸ್‌ ಉದ್ದೇಶಿಸಿ ಶಿವಸೇನೆ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸುವ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕುರಿತು ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಮು ಘರ್ಷಣೆಗಳು ಹೆಚ್ಚುತ್ತಿರುವುದೇಕೆ ಎಂದು ರಾವತ್ ಪ್ರಶ್ನಿಸಿದ್ದಾರೆ.

ರಾಜ್ಯದ ಗೃಹ ಸಚಿವರೂ ಆಗಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಒಂದು ಕಡೆ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಾರೆ ಮತ್ತೊಂದು ಕಡೆ ಹಿಂದುತ್ವವಾದಿಗಳ ಆಕ್ರಮಣವನ್ನು ಸಮರ್ಥಿಸಿಕೊಂಡಿರುವುದನ್ನು ರಾವತ್ ಟೀಕಿಸಿದ್ದಾರೆ.

“ಔರಂಗಜೇಬನನ್ನು ವೈಭವೀಕರಿಸಿದರೆ ಪ್ರತಿಕ್ರಿಯೆ ಇರುತ್ತದೆ. ನಾವು ಅದನ್ನು ಸಹಿಸುವುದಿಲ್ಲ. ಇದು ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರ” ಎಂದು ಫಡ್ನವೀಸ್ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾದ ಕಾರಣ ಫಡ್ನವೀಸ್ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಕೋಮುಗಲಭೆ ಸೃಷ್ಟಿಸುವುದು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಳ್ಳುವ ಬಿಜೆಪಿಯ ಕುತಂತ್ರದ ಯೋಜನೆಯ ಭಾಗವಾಗಿದೆ. ಮುಂಬೈನಲ್ಲಿ ಮಹಿಳೆಯರು ಮತ್ತು ಹುಡುಗಿಯರು ಸುರಕ್ಷಿತವಾಗಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ಪ್ರಕರಣವೇನು?

ಮೊಘಲ್‌ ದೊರೆ ಔರಂಗ್‌ಜೇಬ್‌ ಮತ್ತು ಟಿಪ್ಪು ಸುಲ್ತಾನ್‌ ಇಬ್ಬರನ್ನೂ ವೈಭವೀಕರಿಸಿ ವಾಟ್ಸಪ್‌ನಲ್ಲಿ ಸ್ಟೆಟಸ್‌ ಹಾಕಿಕೊಂಡಿದ್ದ ಮೂವರು ಅಪ್ರಾಪ್ತ ಬಾಲಕರ ನಡೆಯನ್ನು ವಿರೋಧಿಸಿ ಮಹಾರಷ್ಟ್ರದ ಕೊಲ್ಲಾಪುರದಲ್ಲಿ ಬಲಪಂಥೀಯ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿವೆ. ಶಾಂತಿಯುತವಾಗಿ ಶುರುವಾಗಿದ್ದ ಈ ಪ್ರತಿಭಟನೆ ಕೆಲವೇ ಹೊತ್ತಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಕೊಲ್ಲಾಪುರದ ನಿವಾಸಿಗಳಾದ ಮೂವರು ಅಪ್ರಾಪ್ತರು ಮಂಗಳವಾರ ಔರಂಗ್‌ಜೇಬ್‌ ಮತ್ತು ಟಿಪ್ಪುವನ್ನು ವೈಭವೀಕರಿಸುವ ಫೋಟೋಗಳನ್ನು ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಂಚಿಕೊಂಡು ವಿವಾದಾತ್ಮಕ ಆಡಿಯೋವನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಪೋಟೋಗಳು ಮತ್ತು ವಿವಾದಾತ್ಮಕ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಬುಧವಾರ ಕೊಲ್ಲಾಪುರ ಬಂದ್‌ಗೆ ಕರೆ ನೀಡಿವೆ. ವಿಷಯ ತಿಳಿದ ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ‌ ರಾಹುಲ್‌ ರೇಖಾವರ್‌ ಕೂಡ ಕೆಲ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿ ಬಂದ್‌ ಕರೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಅವರ ಪ್ರಯತ್ನ ವಿಫಲವಾಗಿದೆ.

ಬುಧವಾರ ಬೆಳಗ್ಗೆ ಬಲಪಂಥೀಯ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಕೊಲ್ಲಾಪುರದ ಶಿವಾಜಿ ಚೌಕ್‌ ಬಳಿ ಜಮಾಯಿಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ಅಂಗಡಿ-ಮುಂಗಟ್ಟುಗಳನ್ನು ದೋಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಲಾಠಿ ಚಾರ್ಜ್‌ ನಡೆಸಿರುವ ಪೊಲೀಸರು 36 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜ್ಯದ ಬೊಕ್ಕಸ ಬರಿದಾಗಿಸಿರುವುದನ್ನು ಸ್ವತಃ ಒಪ್ಪಿಕೊಂಡ ಬಿಜೆಪಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...