Homeಅಂಕಣಗಳುಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

- Advertisement -
- Advertisement -

ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ ಕಾಂಗ್ರೆಸ್ಸಿಗರು ಪೇಸಿಎಂ ಪೋಸ್ಟರುಗಳನ್ನು ಕಂಡಕಂಡಲ್ಲಿ ಹಚ್ಚತೊಡಗಿದ್ದಾರೆ. ಅಷ್ಟಕ್ಕೂ ಸಿಎಂಗೂ ಕೂಡ ಇಂತಹ ಅವಹೇಳನಕಾರಿಯಾದ ಪೋಸ್ಟರ್ ಬಗ್ಗೆ ಏನೂ ಅನ್ನಿಸುವುದಿಲ್ಲ, ಏಕೆಂದರೆ ಅವರಿರುವ ಪಾರ್ಟಿಯೇ ಹಾಗೆ, ಅದಕ್ಕೆ ಅವಮಾನ ಮಾಡುವಂತಹ ಪದಗಳೇಯಿಲ್ಲ. ಬಿಜೆಪಿಗಳ ವಿಷಯದಲ್ಲಿ ಅವರಿಗೆ ಸರಿಯಾಗಿ ತಾಗುವ ಕಟು ಟೀಕೆಯ ಪದ ಕನ್ನಡ ಭಾಷೆಯಲ್ಲೇ ಇಲ್ಲದಂತಾಗಿದೆಯಂತಲ್ಲಾ. ಇಂತಹ ಪಾರ್ಟಿಗೆ ಇಲ್ಲವೇ ಇಲ್ಲದ ಮಾನ ಹರಾಜಾಗಿ ಹೋಗಿದೆಯೆಂದು ನಾರಾಯಣಸ್ವಾಮಿ ಎಂಬ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದಾರಂತಲ್ಲಾ. ಅದಕ್ಕಾಗಿ ಯಾವ ಲಾಯರ್ ಹಿಡಿಯುವುದು ಲಾಯರ್ ಫೀಜ್‌ನ ಯಾರಿಂದ ವಸೂಲು ಮಾಡಬೇಕೆಂಬ ಚಿಂತೆಗೆ ಬಿದ್ದಿದ್ದಾರಂತಲ್ಲಾ, ಥೂತ್ತೇರಿ.

******

ಭ್ರಷ್ಟನ ಅಥವಾ ಲಫಂಗನ ಕೊನೆಯ ಅಸ್ತ್ರ ಜಾತಿಯಂತಲ್ಲಾ. ನಮ್ಮ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಸೇರಿಕೊಂಡಿರುವ ಲಫಂಗರು ತಾವು ಮಾಡುವ ಭ್ರಷ್ಟ ಕೆಲಸ ಅಥವಾ ವ್ಯಭಿಚಾರದ ಕೆಲಸ- ಇಂತಹ ಯಾವುದೇ ಕೃತ್ಯ ಬಯಲಾದಾಗ ಆತ ಬಳಸುವ ಕಟ್ಟಕಡೆಯ ಅಸ್ತ್ರ ಜಾತಿಯಾಗಿರುತ್ತದೆ. ಏಕೆಂದರೆ ಭಾರತದಲ್ಲಿ ಅದು ಹುಟ್ಟಿನಾಗಿನಿಂದ ಜಾತಿ ಒಂದು ಶಾಪವಾಗಿ ಪರಿಣಮಿಸಿದೆ. ಭ್ರಷ್ಟ ಅಥವಾ ಲಫಂಗನ ಕೃತ್ಯ ಬಯಲಿಗೆಳೆದಾಗ ಆತ ಕೂಗಿಕೊಳ್ಳುವುದೇ “ನೋಡ್ರಪ್ಪ ನಾನು ಇಂಥ ಜಾತಿಲುಟ್ಟಿದ್ದೆ ತಪ್ಪಾ, ನನಿಗೇನಾದ್ರು ಅನ್ಲಿ ನಮ್ಮ ಜಾತಿನೆ ಹಿಡಿದು ಬೈತ ಕುಂತವುರಲ್ಲಾ” ಎಂಬ ಆಕ್ರಂದನ ಅಪರಾಧಿಯ ಬಾಯಲ್ಲಿ ಬರತ್ತಂತಲ್ಲಾ. ಆ ಆಕ್ರಂದನ ಬಂದಿದ್ದೇ ತಡ ಜಾತಿ ಮನಸ್ಸುಗಳು ಮುತ್ತಿಗೊಳ್ಳುತ್ತವೆ. ತಮ್ಮವನನ್ನ ರಕ್ಷಿಸುತ್ತವೆ. ಈಗ ಕರ್ನಾಟಕದಲ್ಲಿ ಆಗುತ್ತಿರುವುದೂ ಅದೆ. ನಲವತ್ತು ಪರಸೆಂಟಿನ ಆರೋಪವೆದುರಿಸುತ್ತಿರುವ ಸರ್ಕಾರದ ಮುಂದಾಳಾದ ಬೊಮ್ಮಾಯಿ ಕುರಿತ ಪೋಸ್ಟರುಗಳು ರಾರಾಜಿಸಿದ ಕೂಡಲೇ ಅನಾದಿಕಾಲದಿಂದಲೂ ನರಿ ಬುದ್ಧಿಯಲ್ಲೇ ಬದುಕುತ್ತಿರುವ ಜನ ಬೇರೆ ದಾರಿಕಾಣದೆ, ನೋಡಿ ಲಿಂಗಾಯಿತ ಮುಖ್ಯಮಂತ್ರಿಗಳನ್ನು ಕಂಡರಾಗದ ಕಾಂಗೈಗಳು ಹೇಗೆ ಭ್ರಷ್ಟತೆಯ ಆಪಾದನೆ ಮಾಡಿ ಅಪಮಾನ ಮಾಡುತ್ತಿವೆ. ಇದು ನಿಜ್ಕಕೂ ಸಾದ ಲಿಂಗಾಯಿತರಿಗೆ ಮಾಡುತ್ತಿರುವ ಅವಮಾನವೆಂದು ಬೊಬ್ಬೆಹೊಡೆದವಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷದ ಸಮಸ್ಯೆಗಳು, ಸ್ಫೋಟಗಳು ಯಾವುದನ್ನು ತಲೆಗೆ ಹಚ್ಚಿಕೊಳ್ಳದ ರಾಹುಲಗಾಂಧಿ ಕೇರಳದ ಮುಖಾಂತರ ಕರ್ನಾಟಕವನ್ನು ಪ್ರವೇಶಿಸಲಿದ್ದಾರೆ. ಈ ನಡಿಗೆ ಕಾಂಗ್ರೆಸ್ ರಾಜಕಾರಣದಲ್ಲಿ ಹಿಂದೆಂದೂ ಕಾಣದಿದ್ದ ಸಂತೋಷವನ್ನು ಕೊಟ್ಟಿದೆಯಂತಲ್ಲಾ. ನಡೆಯುವ ಮಾರ್ಗದ ಊರುಗಳ ಮಾಹಿತಿ ಪಡೆಯುತ್ತ, ಅಲ್ಲಿನ ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ರಾಹುಲಗಾಂಧಿ ಪಡೆಯುತ್ತ ಹೋಗುತ್ತಿರಬೇಕಾದರೆ ಈ ಬಗ್ಗೆ ಕಾಂಗ್ರೆಸ್ಸಿನ ರಾಜಕಾರಣಿಗಳನ್ನ ಅವರು ಕೇಳುತ್ತಿಲ್ಲವಂತಲ್ಲಾ. ರಾಹುಲಗಾಂಧಿ ಏನಾದರೂ ಪಾರ್ಟಿ ಸದಸ್ಯರಿಗೆ ಈ ಕೆಲಸ ವಹಿಸಿದ್ದಾದರೆ ಕಲೆ, ಸಾಹಿತ್ಯ, ಸಂಗೀತ, ಜಾನಪದದ ವಿಷಯದಲ್ಲಿ ಗಂಧಗಾಳಿಯಿಲ್ಲದ ಅವರು ತಮ್ಮ ಹತ್ತಿರದ ದೂರದ ಸಂಬಂಧಿಗಳನ್ನ ಕರೆಸಿ ರಾಹುಲಗಾಂಧಿ ಎದುರು ನಿಲ್ಲಿಸಿ ಫೋಟೊ ತೆಗೆಸಿಕೊಳ್ಳಬಲ್ಲರು ಎಂದು ಊಹಿಸಿದ್ದಾರಲ್ಲಾ. ಈ ಊಹೆ ರಾಹುಲಗಾಂಧಿಗೆ ಮೊದಲೇ ಹೊಳೆದು ಕಾಂಗೈ ರಾಜಕಾರಣದ ಆವರಣದಿಂದ ಹೊರಗಿರುವ ನಿಷ್ಠಾವಂತ ವ್ಯಕ್ತಿಗಳನ್ನು ನೇಮಿಸಿದ್ದಾರಂತಲ್ಲಾ. ಈ ನಡುವೆ ಮುಂದಿನ ಚುನಾವಣೆಗೆ ಹೇಳಿಕೊಂಡು ಹೋಗಲು ಯಾವ ಸಾಧನೆಯೂ ಇಲ್ಲದ ಬಿಜೆಪಿಯ ರಾಷ್ಟ್ರೀಯ ನಾಯಕರು ಭಾರತ ಜೋಡೋ ಯಾತ್ರೆ ವಿಫಲಗೊಳಿಸಲು ಪರಿಕರಗಳನ್ನು ತಯಾರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

******

ಮೋದಿಯವರು ಎಪ್ಪತ್ತು ವರ್ಷಗಳ ಹಿಂದೆಯೇ ಭಾರತದಿಂದ ಕಾಲ್ತೆಗೆದ ಚೀತಾಗಳನ್ನು ತರಿಸಿ ಅವುಗಳನ್ನು ಬೋನಿನಿಂದ ಹೊರಬಿಟ್ಟು ಕ್ಲಾಪ್ ತೆಗೆಯದೆ ಕ್ಯಾಮರಾ ಕ್ಲಿಕ್ಕಿಸಿದ್ದು ಭಾರತದಾದ್ಯಂತ ಸುದ್ದಿಯಾಗಿದ್ದು ಹಳೆ ವಿಷಯ. ಸಂಘಿಗಳ ಪ್ರಕಾರ ಮೋದಿ ಕ್ಯಾಮರ ಕ್ಲಿಕ್ಕಿಸಿಲ್ಲ ಚಿರತೆಗಳ ಫೋಟೊ ತೆಗೆಯುವ ಫೋಟೊಗಾಗಿ ಕ್ಯಾಮರ ಹಿಡಿದು ನಿಂತಿದ್ದರು. ಮಾಧ್ಯಮದವರು ಫೋಟೊ ತೆಗೆಯಲು ಪೋಸು ಕೊಡುವಾಗ ತಾವೇ ಫೋಟೊ ತೆಗೆವ ಅಗತ್ಯವಿಲ್ಲ ಎಂಬುದು ಅಜ್ಞಾನಿಗಳಿಗೆ ಅರಿವಾಗಬೇಕೆಂದು ಹೇಳಿರುವ ಬಿಜೆಪಿಗಳು ಈ ಬಗ್ಗೆ ದೇಶದ್ರೋಹದ ಕೇಸು ಹಾಕಲು ಇನ್ನೂ ರೆಡಿಯಾಗಿಲ್ಲವಂತಲ್ಲಾ. ಇದೇನಾದರಾಗಲಿ ನಮಗೆ ಕಿವಿ ಮತ್ತು ಕಣ್ಣು ಸರಿಯಾಗಿದ್ದು, ಅವನ್ನು ಸರಿಯಾಗಿ ತೆರೆದುಕೊಂಡರೆ, ನಮ್ಮ ನಡುವೆ ಹಿಂಡುಹಿಂಡಾಗಿ ಬದುಕಿದ್ದ ಕಾಗೆಯೇ ಕಣ್ಮರೆಯಾಗುತ್ತಿವೆಯಲ್ಲಾ. ಕೆಲವು ಊರುಗಳಲ್ಲಂತೂ ಇಲ್ಲವೇ ಇಲ್ಲ. ಸತ್ತವನಿಗೆ ಕೂಳು ಹಾಕುವಾಗ ಅದನ್ನು ತಿನ್ನಲು ಬರುತ್ತಿದ್ದ ಈ ಕಾಗೆಗಳು ಕಾಣೆಯಾಗುತ್ತಿರುವ ಬಗ್ಗೆ ಯಾವ ಪಕ್ಷಿ ತಜ್ಞನೂ ಬಾಯಿಬಿಟ್ಟಿಲ್ಲ. ಹೊಲದಲ್ಲಿ ಮನೆ ಮೇಲೆ ಎದುರಿನ ಮರದ ಮೇಲೆ ಕುಳಿತು ಕಾಕಾ ಎನ್ನುತ್ತಿದ್ದ ಕಾಗೆ ನಿರ್ನಾಮವಾದರೆ ಗತಿಯೇನು. ಪಕ್ಷಿ ತಜ್ಞರು ನಿಜವಾದ ಕಾರಣ ಹೇಳಿ ಎಚ್ಚರಿಸಬಲ್ಲರೆ? ಅದಕ್ಕಿಂತ ಕಾಗೆ ಕಣ್ಮರೆಯಾದರೆ ಕೋಗಿಲೆಯೂ ನಿರ್ನಾಮವಾಗುತ್ತವಲ್ಲಾ ಎನ್ನಲು ನೋವಾಗುತ್ತದೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...