Homeಅಂಕಣಗಳುಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

- Advertisement -
- Advertisement -

ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ ಕಾಂಗ್ರೆಸ್ಸಿಗರು ಪೇಸಿಎಂ ಪೋಸ್ಟರುಗಳನ್ನು ಕಂಡಕಂಡಲ್ಲಿ ಹಚ್ಚತೊಡಗಿದ್ದಾರೆ. ಅಷ್ಟಕ್ಕೂ ಸಿಎಂಗೂ ಕೂಡ ಇಂತಹ ಅವಹೇಳನಕಾರಿಯಾದ ಪೋಸ್ಟರ್ ಬಗ್ಗೆ ಏನೂ ಅನ್ನಿಸುವುದಿಲ್ಲ, ಏಕೆಂದರೆ ಅವರಿರುವ ಪಾರ್ಟಿಯೇ ಹಾಗೆ, ಅದಕ್ಕೆ ಅವಮಾನ ಮಾಡುವಂತಹ ಪದಗಳೇಯಿಲ್ಲ. ಬಿಜೆಪಿಗಳ ವಿಷಯದಲ್ಲಿ ಅವರಿಗೆ ಸರಿಯಾಗಿ ತಾಗುವ ಕಟು ಟೀಕೆಯ ಪದ ಕನ್ನಡ ಭಾಷೆಯಲ್ಲೇ ಇಲ್ಲದಂತಾಗಿದೆಯಂತಲ್ಲಾ. ಇಂತಹ ಪಾರ್ಟಿಗೆ ಇಲ್ಲವೇ ಇಲ್ಲದ ಮಾನ ಹರಾಜಾಗಿ ಹೋಗಿದೆಯೆಂದು ನಾರಾಯಣಸ್ವಾಮಿ ಎಂಬ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದಾರಂತಲ್ಲಾ. ಅದಕ್ಕಾಗಿ ಯಾವ ಲಾಯರ್ ಹಿಡಿಯುವುದು ಲಾಯರ್ ಫೀಜ್‌ನ ಯಾರಿಂದ ವಸೂಲು ಮಾಡಬೇಕೆಂಬ ಚಿಂತೆಗೆ ಬಿದ್ದಿದ್ದಾರಂತಲ್ಲಾ, ಥೂತ್ತೇರಿ.

******

ಭ್ರಷ್ಟನ ಅಥವಾ ಲಫಂಗನ ಕೊನೆಯ ಅಸ್ತ್ರ ಜಾತಿಯಂತಲ್ಲಾ. ನಮ್ಮ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಸೇರಿಕೊಂಡಿರುವ ಲಫಂಗರು ತಾವು ಮಾಡುವ ಭ್ರಷ್ಟ ಕೆಲಸ ಅಥವಾ ವ್ಯಭಿಚಾರದ ಕೆಲಸ- ಇಂತಹ ಯಾವುದೇ ಕೃತ್ಯ ಬಯಲಾದಾಗ ಆತ ಬಳಸುವ ಕಟ್ಟಕಡೆಯ ಅಸ್ತ್ರ ಜಾತಿಯಾಗಿರುತ್ತದೆ. ಏಕೆಂದರೆ ಭಾರತದಲ್ಲಿ ಅದು ಹುಟ್ಟಿನಾಗಿನಿಂದ ಜಾತಿ ಒಂದು ಶಾಪವಾಗಿ ಪರಿಣಮಿಸಿದೆ. ಭ್ರಷ್ಟ ಅಥವಾ ಲಫಂಗನ ಕೃತ್ಯ ಬಯಲಿಗೆಳೆದಾಗ ಆತ ಕೂಗಿಕೊಳ್ಳುವುದೇ “ನೋಡ್ರಪ್ಪ ನಾನು ಇಂಥ ಜಾತಿಲುಟ್ಟಿದ್ದೆ ತಪ್ಪಾ, ನನಿಗೇನಾದ್ರು ಅನ್ಲಿ ನಮ್ಮ ಜಾತಿನೆ ಹಿಡಿದು ಬೈತ ಕುಂತವುರಲ್ಲಾ” ಎಂಬ ಆಕ್ರಂದನ ಅಪರಾಧಿಯ ಬಾಯಲ್ಲಿ ಬರತ್ತಂತಲ್ಲಾ. ಆ ಆಕ್ರಂದನ ಬಂದಿದ್ದೇ ತಡ ಜಾತಿ ಮನಸ್ಸುಗಳು ಮುತ್ತಿಗೊಳ್ಳುತ್ತವೆ. ತಮ್ಮವನನ್ನ ರಕ್ಷಿಸುತ್ತವೆ. ಈಗ ಕರ್ನಾಟಕದಲ್ಲಿ ಆಗುತ್ತಿರುವುದೂ ಅದೆ. ನಲವತ್ತು ಪರಸೆಂಟಿನ ಆರೋಪವೆದುರಿಸುತ್ತಿರುವ ಸರ್ಕಾರದ ಮುಂದಾಳಾದ ಬೊಮ್ಮಾಯಿ ಕುರಿತ ಪೋಸ್ಟರುಗಳು ರಾರಾಜಿಸಿದ ಕೂಡಲೇ ಅನಾದಿಕಾಲದಿಂದಲೂ ನರಿ ಬುದ್ಧಿಯಲ್ಲೇ ಬದುಕುತ್ತಿರುವ ಜನ ಬೇರೆ ದಾರಿಕಾಣದೆ, ನೋಡಿ ಲಿಂಗಾಯಿತ ಮುಖ್ಯಮಂತ್ರಿಗಳನ್ನು ಕಂಡರಾಗದ ಕಾಂಗೈಗಳು ಹೇಗೆ ಭ್ರಷ್ಟತೆಯ ಆಪಾದನೆ ಮಾಡಿ ಅಪಮಾನ ಮಾಡುತ್ತಿವೆ. ಇದು ನಿಜ್ಕಕೂ ಸಾದ ಲಿಂಗಾಯಿತರಿಗೆ ಮಾಡುತ್ತಿರುವ ಅವಮಾನವೆಂದು ಬೊಬ್ಬೆಹೊಡೆದವಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷದ ಸಮಸ್ಯೆಗಳು, ಸ್ಫೋಟಗಳು ಯಾವುದನ್ನು ತಲೆಗೆ ಹಚ್ಚಿಕೊಳ್ಳದ ರಾಹುಲಗಾಂಧಿ ಕೇರಳದ ಮುಖಾಂತರ ಕರ್ನಾಟಕವನ್ನು ಪ್ರವೇಶಿಸಲಿದ್ದಾರೆ. ಈ ನಡಿಗೆ ಕಾಂಗ್ರೆಸ್ ರಾಜಕಾರಣದಲ್ಲಿ ಹಿಂದೆಂದೂ ಕಾಣದಿದ್ದ ಸಂತೋಷವನ್ನು ಕೊಟ್ಟಿದೆಯಂತಲ್ಲಾ. ನಡೆಯುವ ಮಾರ್ಗದ ಊರುಗಳ ಮಾಹಿತಿ ಪಡೆಯುತ್ತ, ಅಲ್ಲಿನ ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ರಾಹುಲಗಾಂಧಿ ಪಡೆಯುತ್ತ ಹೋಗುತ್ತಿರಬೇಕಾದರೆ ಈ ಬಗ್ಗೆ ಕಾಂಗ್ರೆಸ್ಸಿನ ರಾಜಕಾರಣಿಗಳನ್ನ ಅವರು ಕೇಳುತ್ತಿಲ್ಲವಂತಲ್ಲಾ. ರಾಹುಲಗಾಂಧಿ ಏನಾದರೂ ಪಾರ್ಟಿ ಸದಸ್ಯರಿಗೆ ಈ ಕೆಲಸ ವಹಿಸಿದ್ದಾದರೆ ಕಲೆ, ಸಾಹಿತ್ಯ, ಸಂಗೀತ, ಜಾನಪದದ ವಿಷಯದಲ್ಲಿ ಗಂಧಗಾಳಿಯಿಲ್ಲದ ಅವರು ತಮ್ಮ ಹತ್ತಿರದ ದೂರದ ಸಂಬಂಧಿಗಳನ್ನ ಕರೆಸಿ ರಾಹುಲಗಾಂಧಿ ಎದುರು ನಿಲ್ಲಿಸಿ ಫೋಟೊ ತೆಗೆಸಿಕೊಳ್ಳಬಲ್ಲರು ಎಂದು ಊಹಿಸಿದ್ದಾರಲ್ಲಾ. ಈ ಊಹೆ ರಾಹುಲಗಾಂಧಿಗೆ ಮೊದಲೇ ಹೊಳೆದು ಕಾಂಗೈ ರಾಜಕಾರಣದ ಆವರಣದಿಂದ ಹೊರಗಿರುವ ನಿಷ್ಠಾವಂತ ವ್ಯಕ್ತಿಗಳನ್ನು ನೇಮಿಸಿದ್ದಾರಂತಲ್ಲಾ. ಈ ನಡುವೆ ಮುಂದಿನ ಚುನಾವಣೆಗೆ ಹೇಳಿಕೊಂಡು ಹೋಗಲು ಯಾವ ಸಾಧನೆಯೂ ಇಲ್ಲದ ಬಿಜೆಪಿಯ ರಾಷ್ಟ್ರೀಯ ನಾಯಕರು ಭಾರತ ಜೋಡೋ ಯಾತ್ರೆ ವಿಫಲಗೊಳಿಸಲು ಪರಿಕರಗಳನ್ನು ತಯಾರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

******

ಮೋದಿಯವರು ಎಪ್ಪತ್ತು ವರ್ಷಗಳ ಹಿಂದೆಯೇ ಭಾರತದಿಂದ ಕಾಲ್ತೆಗೆದ ಚೀತಾಗಳನ್ನು ತರಿಸಿ ಅವುಗಳನ್ನು ಬೋನಿನಿಂದ ಹೊರಬಿಟ್ಟು ಕ್ಲಾಪ್ ತೆಗೆಯದೆ ಕ್ಯಾಮರಾ ಕ್ಲಿಕ್ಕಿಸಿದ್ದು ಭಾರತದಾದ್ಯಂತ ಸುದ್ದಿಯಾಗಿದ್ದು ಹಳೆ ವಿಷಯ. ಸಂಘಿಗಳ ಪ್ರಕಾರ ಮೋದಿ ಕ್ಯಾಮರ ಕ್ಲಿಕ್ಕಿಸಿಲ್ಲ ಚಿರತೆಗಳ ಫೋಟೊ ತೆಗೆಯುವ ಫೋಟೊಗಾಗಿ ಕ್ಯಾಮರ ಹಿಡಿದು ನಿಂತಿದ್ದರು. ಮಾಧ್ಯಮದವರು ಫೋಟೊ ತೆಗೆಯಲು ಪೋಸು ಕೊಡುವಾಗ ತಾವೇ ಫೋಟೊ ತೆಗೆವ ಅಗತ್ಯವಿಲ್ಲ ಎಂಬುದು ಅಜ್ಞಾನಿಗಳಿಗೆ ಅರಿವಾಗಬೇಕೆಂದು ಹೇಳಿರುವ ಬಿಜೆಪಿಗಳು ಈ ಬಗ್ಗೆ ದೇಶದ್ರೋಹದ ಕೇಸು ಹಾಕಲು ಇನ್ನೂ ರೆಡಿಯಾಗಿಲ್ಲವಂತಲ್ಲಾ. ಇದೇನಾದರಾಗಲಿ ನಮಗೆ ಕಿವಿ ಮತ್ತು ಕಣ್ಣು ಸರಿಯಾಗಿದ್ದು, ಅವನ್ನು ಸರಿಯಾಗಿ ತೆರೆದುಕೊಂಡರೆ, ನಮ್ಮ ನಡುವೆ ಹಿಂಡುಹಿಂಡಾಗಿ ಬದುಕಿದ್ದ ಕಾಗೆಯೇ ಕಣ್ಮರೆಯಾಗುತ್ತಿವೆಯಲ್ಲಾ. ಕೆಲವು ಊರುಗಳಲ್ಲಂತೂ ಇಲ್ಲವೇ ಇಲ್ಲ. ಸತ್ತವನಿಗೆ ಕೂಳು ಹಾಕುವಾಗ ಅದನ್ನು ತಿನ್ನಲು ಬರುತ್ತಿದ್ದ ಈ ಕಾಗೆಗಳು ಕಾಣೆಯಾಗುತ್ತಿರುವ ಬಗ್ಗೆ ಯಾವ ಪಕ್ಷಿ ತಜ್ಞನೂ ಬಾಯಿಬಿಟ್ಟಿಲ್ಲ. ಹೊಲದಲ್ಲಿ ಮನೆ ಮೇಲೆ ಎದುರಿನ ಮರದ ಮೇಲೆ ಕುಳಿತು ಕಾಕಾ ಎನ್ನುತ್ತಿದ್ದ ಕಾಗೆ ನಿರ್ನಾಮವಾದರೆ ಗತಿಯೇನು. ಪಕ್ಷಿ ತಜ್ಞರು ನಿಜವಾದ ಕಾರಣ ಹೇಳಿ ಎಚ್ಚರಿಸಬಲ್ಲರೆ? ಅದಕ್ಕಿಂತ ಕಾಗೆ ಕಣ್ಮರೆಯಾದರೆ ಕೋಗಿಲೆಯೂ ನಿರ್ನಾಮವಾಗುತ್ತವಲ್ಲಾ ಎನ್ನಲು ನೋವಾಗುತ್ತದೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...