Homeಅಂಕಣಗಳುಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

- Advertisement -
- Advertisement -

ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ ಕಾಂಗ್ರೆಸ್ಸಿಗರು ಪೇಸಿಎಂ ಪೋಸ್ಟರುಗಳನ್ನು ಕಂಡಕಂಡಲ್ಲಿ ಹಚ್ಚತೊಡಗಿದ್ದಾರೆ. ಅಷ್ಟಕ್ಕೂ ಸಿಎಂಗೂ ಕೂಡ ಇಂತಹ ಅವಹೇಳನಕಾರಿಯಾದ ಪೋಸ್ಟರ್ ಬಗ್ಗೆ ಏನೂ ಅನ್ನಿಸುವುದಿಲ್ಲ, ಏಕೆಂದರೆ ಅವರಿರುವ ಪಾರ್ಟಿಯೇ ಹಾಗೆ, ಅದಕ್ಕೆ ಅವಮಾನ ಮಾಡುವಂತಹ ಪದಗಳೇಯಿಲ್ಲ. ಬಿಜೆಪಿಗಳ ವಿಷಯದಲ್ಲಿ ಅವರಿಗೆ ಸರಿಯಾಗಿ ತಾಗುವ ಕಟು ಟೀಕೆಯ ಪದ ಕನ್ನಡ ಭಾಷೆಯಲ್ಲೇ ಇಲ್ಲದಂತಾಗಿದೆಯಂತಲ್ಲಾ. ಇಂತಹ ಪಾರ್ಟಿಗೆ ಇಲ್ಲವೇ ಇಲ್ಲದ ಮಾನ ಹರಾಜಾಗಿ ಹೋಗಿದೆಯೆಂದು ನಾರಾಯಣಸ್ವಾಮಿ ಎಂಬ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದಾರಂತಲ್ಲಾ. ಅದಕ್ಕಾಗಿ ಯಾವ ಲಾಯರ್ ಹಿಡಿಯುವುದು ಲಾಯರ್ ಫೀಜ್‌ನ ಯಾರಿಂದ ವಸೂಲು ಮಾಡಬೇಕೆಂಬ ಚಿಂತೆಗೆ ಬಿದ್ದಿದ್ದಾರಂತಲ್ಲಾ, ಥೂತ್ತೇರಿ.

******

ಭ್ರಷ್ಟನ ಅಥವಾ ಲಫಂಗನ ಕೊನೆಯ ಅಸ್ತ್ರ ಜಾತಿಯಂತಲ್ಲಾ. ನಮ್ಮ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಸೇರಿಕೊಂಡಿರುವ ಲಫಂಗರು ತಾವು ಮಾಡುವ ಭ್ರಷ್ಟ ಕೆಲಸ ಅಥವಾ ವ್ಯಭಿಚಾರದ ಕೆಲಸ- ಇಂತಹ ಯಾವುದೇ ಕೃತ್ಯ ಬಯಲಾದಾಗ ಆತ ಬಳಸುವ ಕಟ್ಟಕಡೆಯ ಅಸ್ತ್ರ ಜಾತಿಯಾಗಿರುತ್ತದೆ. ಏಕೆಂದರೆ ಭಾರತದಲ್ಲಿ ಅದು ಹುಟ್ಟಿನಾಗಿನಿಂದ ಜಾತಿ ಒಂದು ಶಾಪವಾಗಿ ಪರಿಣಮಿಸಿದೆ. ಭ್ರಷ್ಟ ಅಥವಾ ಲಫಂಗನ ಕೃತ್ಯ ಬಯಲಿಗೆಳೆದಾಗ ಆತ ಕೂಗಿಕೊಳ್ಳುವುದೇ “ನೋಡ್ರಪ್ಪ ನಾನು ಇಂಥ ಜಾತಿಲುಟ್ಟಿದ್ದೆ ತಪ್ಪಾ, ನನಿಗೇನಾದ್ರು ಅನ್ಲಿ ನಮ್ಮ ಜಾತಿನೆ ಹಿಡಿದು ಬೈತ ಕುಂತವುರಲ್ಲಾ” ಎಂಬ ಆಕ್ರಂದನ ಅಪರಾಧಿಯ ಬಾಯಲ್ಲಿ ಬರತ್ತಂತಲ್ಲಾ. ಆ ಆಕ್ರಂದನ ಬಂದಿದ್ದೇ ತಡ ಜಾತಿ ಮನಸ್ಸುಗಳು ಮುತ್ತಿಗೊಳ್ಳುತ್ತವೆ. ತಮ್ಮವನನ್ನ ರಕ್ಷಿಸುತ್ತವೆ. ಈಗ ಕರ್ನಾಟಕದಲ್ಲಿ ಆಗುತ್ತಿರುವುದೂ ಅದೆ. ನಲವತ್ತು ಪರಸೆಂಟಿನ ಆರೋಪವೆದುರಿಸುತ್ತಿರುವ ಸರ್ಕಾರದ ಮುಂದಾಳಾದ ಬೊಮ್ಮಾಯಿ ಕುರಿತ ಪೋಸ್ಟರುಗಳು ರಾರಾಜಿಸಿದ ಕೂಡಲೇ ಅನಾದಿಕಾಲದಿಂದಲೂ ನರಿ ಬುದ್ಧಿಯಲ್ಲೇ ಬದುಕುತ್ತಿರುವ ಜನ ಬೇರೆ ದಾರಿಕಾಣದೆ, ನೋಡಿ ಲಿಂಗಾಯಿತ ಮುಖ್ಯಮಂತ್ರಿಗಳನ್ನು ಕಂಡರಾಗದ ಕಾಂಗೈಗಳು ಹೇಗೆ ಭ್ರಷ್ಟತೆಯ ಆಪಾದನೆ ಮಾಡಿ ಅಪಮಾನ ಮಾಡುತ್ತಿವೆ. ಇದು ನಿಜ್ಕಕೂ ಸಾದ ಲಿಂಗಾಯಿತರಿಗೆ ಮಾಡುತ್ತಿರುವ ಅವಮಾನವೆಂದು ಬೊಬ್ಬೆಹೊಡೆದವಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷದ ಸಮಸ್ಯೆಗಳು, ಸ್ಫೋಟಗಳು ಯಾವುದನ್ನು ತಲೆಗೆ ಹಚ್ಚಿಕೊಳ್ಳದ ರಾಹುಲಗಾಂಧಿ ಕೇರಳದ ಮುಖಾಂತರ ಕರ್ನಾಟಕವನ್ನು ಪ್ರವೇಶಿಸಲಿದ್ದಾರೆ. ಈ ನಡಿಗೆ ಕಾಂಗ್ರೆಸ್ ರಾಜಕಾರಣದಲ್ಲಿ ಹಿಂದೆಂದೂ ಕಾಣದಿದ್ದ ಸಂತೋಷವನ್ನು ಕೊಟ್ಟಿದೆಯಂತಲ್ಲಾ. ನಡೆಯುವ ಮಾರ್ಗದ ಊರುಗಳ ಮಾಹಿತಿ ಪಡೆಯುತ್ತ, ಅಲ್ಲಿನ ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ರಾಹುಲಗಾಂಧಿ ಪಡೆಯುತ್ತ ಹೋಗುತ್ತಿರಬೇಕಾದರೆ ಈ ಬಗ್ಗೆ ಕಾಂಗ್ರೆಸ್ಸಿನ ರಾಜಕಾರಣಿಗಳನ್ನ ಅವರು ಕೇಳುತ್ತಿಲ್ಲವಂತಲ್ಲಾ. ರಾಹುಲಗಾಂಧಿ ಏನಾದರೂ ಪಾರ್ಟಿ ಸದಸ್ಯರಿಗೆ ಈ ಕೆಲಸ ವಹಿಸಿದ್ದಾದರೆ ಕಲೆ, ಸಾಹಿತ್ಯ, ಸಂಗೀತ, ಜಾನಪದದ ವಿಷಯದಲ್ಲಿ ಗಂಧಗಾಳಿಯಿಲ್ಲದ ಅವರು ತಮ್ಮ ಹತ್ತಿರದ ದೂರದ ಸಂಬಂಧಿಗಳನ್ನ ಕರೆಸಿ ರಾಹುಲಗಾಂಧಿ ಎದುರು ನಿಲ್ಲಿಸಿ ಫೋಟೊ ತೆಗೆಸಿಕೊಳ್ಳಬಲ್ಲರು ಎಂದು ಊಹಿಸಿದ್ದಾರಲ್ಲಾ. ಈ ಊಹೆ ರಾಹುಲಗಾಂಧಿಗೆ ಮೊದಲೇ ಹೊಳೆದು ಕಾಂಗೈ ರಾಜಕಾರಣದ ಆವರಣದಿಂದ ಹೊರಗಿರುವ ನಿಷ್ಠಾವಂತ ವ್ಯಕ್ತಿಗಳನ್ನು ನೇಮಿಸಿದ್ದಾರಂತಲ್ಲಾ. ಈ ನಡುವೆ ಮುಂದಿನ ಚುನಾವಣೆಗೆ ಹೇಳಿಕೊಂಡು ಹೋಗಲು ಯಾವ ಸಾಧನೆಯೂ ಇಲ್ಲದ ಬಿಜೆಪಿಯ ರಾಷ್ಟ್ರೀಯ ನಾಯಕರು ಭಾರತ ಜೋಡೋ ಯಾತ್ರೆ ವಿಫಲಗೊಳಿಸಲು ಪರಿಕರಗಳನ್ನು ತಯಾರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

******

ಮೋದಿಯವರು ಎಪ್ಪತ್ತು ವರ್ಷಗಳ ಹಿಂದೆಯೇ ಭಾರತದಿಂದ ಕಾಲ್ತೆಗೆದ ಚೀತಾಗಳನ್ನು ತರಿಸಿ ಅವುಗಳನ್ನು ಬೋನಿನಿಂದ ಹೊರಬಿಟ್ಟು ಕ್ಲಾಪ್ ತೆಗೆಯದೆ ಕ್ಯಾಮರಾ ಕ್ಲಿಕ್ಕಿಸಿದ್ದು ಭಾರತದಾದ್ಯಂತ ಸುದ್ದಿಯಾಗಿದ್ದು ಹಳೆ ವಿಷಯ. ಸಂಘಿಗಳ ಪ್ರಕಾರ ಮೋದಿ ಕ್ಯಾಮರ ಕ್ಲಿಕ್ಕಿಸಿಲ್ಲ ಚಿರತೆಗಳ ಫೋಟೊ ತೆಗೆಯುವ ಫೋಟೊಗಾಗಿ ಕ್ಯಾಮರ ಹಿಡಿದು ನಿಂತಿದ್ದರು. ಮಾಧ್ಯಮದವರು ಫೋಟೊ ತೆಗೆಯಲು ಪೋಸು ಕೊಡುವಾಗ ತಾವೇ ಫೋಟೊ ತೆಗೆವ ಅಗತ್ಯವಿಲ್ಲ ಎಂಬುದು ಅಜ್ಞಾನಿಗಳಿಗೆ ಅರಿವಾಗಬೇಕೆಂದು ಹೇಳಿರುವ ಬಿಜೆಪಿಗಳು ಈ ಬಗ್ಗೆ ದೇಶದ್ರೋಹದ ಕೇಸು ಹಾಕಲು ಇನ್ನೂ ರೆಡಿಯಾಗಿಲ್ಲವಂತಲ್ಲಾ. ಇದೇನಾದರಾಗಲಿ ನಮಗೆ ಕಿವಿ ಮತ್ತು ಕಣ್ಣು ಸರಿಯಾಗಿದ್ದು, ಅವನ್ನು ಸರಿಯಾಗಿ ತೆರೆದುಕೊಂಡರೆ, ನಮ್ಮ ನಡುವೆ ಹಿಂಡುಹಿಂಡಾಗಿ ಬದುಕಿದ್ದ ಕಾಗೆಯೇ ಕಣ್ಮರೆಯಾಗುತ್ತಿವೆಯಲ್ಲಾ. ಕೆಲವು ಊರುಗಳಲ್ಲಂತೂ ಇಲ್ಲವೇ ಇಲ್ಲ. ಸತ್ತವನಿಗೆ ಕೂಳು ಹಾಕುವಾಗ ಅದನ್ನು ತಿನ್ನಲು ಬರುತ್ತಿದ್ದ ಈ ಕಾಗೆಗಳು ಕಾಣೆಯಾಗುತ್ತಿರುವ ಬಗ್ಗೆ ಯಾವ ಪಕ್ಷಿ ತಜ್ಞನೂ ಬಾಯಿಬಿಟ್ಟಿಲ್ಲ. ಹೊಲದಲ್ಲಿ ಮನೆ ಮೇಲೆ ಎದುರಿನ ಮರದ ಮೇಲೆ ಕುಳಿತು ಕಾಕಾ ಎನ್ನುತ್ತಿದ್ದ ಕಾಗೆ ನಿರ್ನಾಮವಾದರೆ ಗತಿಯೇನು. ಪಕ್ಷಿ ತಜ್ಞರು ನಿಜವಾದ ಕಾರಣ ಹೇಳಿ ಎಚ್ಚರಿಸಬಲ್ಲರೆ? ಅದಕ್ಕಿಂತ ಕಾಗೆ ಕಣ್ಮರೆಯಾದರೆ ಕೋಗಿಲೆಯೂ ನಿರ್ನಾಮವಾಗುತ್ತವಲ್ಲಾ ಎನ್ನಲು ನೋವಾಗುತ್ತದೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...