Homeಅಂಕಣಗಳುಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

- Advertisement -
- Advertisement -

ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ ಕಾಂಗ್ರೆಸ್ಸಿಗರು ಪೇಸಿಎಂ ಪೋಸ್ಟರುಗಳನ್ನು ಕಂಡಕಂಡಲ್ಲಿ ಹಚ್ಚತೊಡಗಿದ್ದಾರೆ. ಅಷ್ಟಕ್ಕೂ ಸಿಎಂಗೂ ಕೂಡ ಇಂತಹ ಅವಹೇಳನಕಾರಿಯಾದ ಪೋಸ್ಟರ್ ಬಗ್ಗೆ ಏನೂ ಅನ್ನಿಸುವುದಿಲ್ಲ, ಏಕೆಂದರೆ ಅವರಿರುವ ಪಾರ್ಟಿಯೇ ಹಾಗೆ, ಅದಕ್ಕೆ ಅವಮಾನ ಮಾಡುವಂತಹ ಪದಗಳೇಯಿಲ್ಲ. ಬಿಜೆಪಿಗಳ ವಿಷಯದಲ್ಲಿ ಅವರಿಗೆ ಸರಿಯಾಗಿ ತಾಗುವ ಕಟು ಟೀಕೆಯ ಪದ ಕನ್ನಡ ಭಾಷೆಯಲ್ಲೇ ಇಲ್ಲದಂತಾಗಿದೆಯಂತಲ್ಲಾ. ಇಂತಹ ಪಾರ್ಟಿಗೆ ಇಲ್ಲವೇ ಇಲ್ಲದ ಮಾನ ಹರಾಜಾಗಿ ಹೋಗಿದೆಯೆಂದು ನಾರಾಯಣಸ್ವಾಮಿ ಎಂಬ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದಾರಂತಲ್ಲಾ. ಅದಕ್ಕಾಗಿ ಯಾವ ಲಾಯರ್ ಹಿಡಿಯುವುದು ಲಾಯರ್ ಫೀಜ್‌ನ ಯಾರಿಂದ ವಸೂಲು ಮಾಡಬೇಕೆಂಬ ಚಿಂತೆಗೆ ಬಿದ್ದಿದ್ದಾರಂತಲ್ಲಾ, ಥೂತ್ತೇರಿ.

******

ಭ್ರಷ್ಟನ ಅಥವಾ ಲಫಂಗನ ಕೊನೆಯ ಅಸ್ತ್ರ ಜಾತಿಯಂತಲ್ಲಾ. ನಮ್ಮ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಸೇರಿಕೊಂಡಿರುವ ಲಫಂಗರು ತಾವು ಮಾಡುವ ಭ್ರಷ್ಟ ಕೆಲಸ ಅಥವಾ ವ್ಯಭಿಚಾರದ ಕೆಲಸ- ಇಂತಹ ಯಾವುದೇ ಕೃತ್ಯ ಬಯಲಾದಾಗ ಆತ ಬಳಸುವ ಕಟ್ಟಕಡೆಯ ಅಸ್ತ್ರ ಜಾತಿಯಾಗಿರುತ್ತದೆ. ಏಕೆಂದರೆ ಭಾರತದಲ್ಲಿ ಅದು ಹುಟ್ಟಿನಾಗಿನಿಂದ ಜಾತಿ ಒಂದು ಶಾಪವಾಗಿ ಪರಿಣಮಿಸಿದೆ. ಭ್ರಷ್ಟ ಅಥವಾ ಲಫಂಗನ ಕೃತ್ಯ ಬಯಲಿಗೆಳೆದಾಗ ಆತ ಕೂಗಿಕೊಳ್ಳುವುದೇ “ನೋಡ್ರಪ್ಪ ನಾನು ಇಂಥ ಜಾತಿಲುಟ್ಟಿದ್ದೆ ತಪ್ಪಾ, ನನಿಗೇನಾದ್ರು ಅನ್ಲಿ ನಮ್ಮ ಜಾತಿನೆ ಹಿಡಿದು ಬೈತ ಕುಂತವುರಲ್ಲಾ” ಎಂಬ ಆಕ್ರಂದನ ಅಪರಾಧಿಯ ಬಾಯಲ್ಲಿ ಬರತ್ತಂತಲ್ಲಾ. ಆ ಆಕ್ರಂದನ ಬಂದಿದ್ದೇ ತಡ ಜಾತಿ ಮನಸ್ಸುಗಳು ಮುತ್ತಿಗೊಳ್ಳುತ್ತವೆ. ತಮ್ಮವನನ್ನ ರಕ್ಷಿಸುತ್ತವೆ. ಈಗ ಕರ್ನಾಟಕದಲ್ಲಿ ಆಗುತ್ತಿರುವುದೂ ಅದೆ. ನಲವತ್ತು ಪರಸೆಂಟಿನ ಆರೋಪವೆದುರಿಸುತ್ತಿರುವ ಸರ್ಕಾರದ ಮುಂದಾಳಾದ ಬೊಮ್ಮಾಯಿ ಕುರಿತ ಪೋಸ್ಟರುಗಳು ರಾರಾಜಿಸಿದ ಕೂಡಲೇ ಅನಾದಿಕಾಲದಿಂದಲೂ ನರಿ ಬುದ್ಧಿಯಲ್ಲೇ ಬದುಕುತ್ತಿರುವ ಜನ ಬೇರೆ ದಾರಿಕಾಣದೆ, ನೋಡಿ ಲಿಂಗಾಯಿತ ಮುಖ್ಯಮಂತ್ರಿಗಳನ್ನು ಕಂಡರಾಗದ ಕಾಂಗೈಗಳು ಹೇಗೆ ಭ್ರಷ್ಟತೆಯ ಆಪಾದನೆ ಮಾಡಿ ಅಪಮಾನ ಮಾಡುತ್ತಿವೆ. ಇದು ನಿಜ್ಕಕೂ ಸಾದ ಲಿಂಗಾಯಿತರಿಗೆ ಮಾಡುತ್ತಿರುವ ಅವಮಾನವೆಂದು ಬೊಬ್ಬೆಹೊಡೆದವಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷದ ಸಮಸ್ಯೆಗಳು, ಸ್ಫೋಟಗಳು ಯಾವುದನ್ನು ತಲೆಗೆ ಹಚ್ಚಿಕೊಳ್ಳದ ರಾಹುಲಗಾಂಧಿ ಕೇರಳದ ಮುಖಾಂತರ ಕರ್ನಾಟಕವನ್ನು ಪ್ರವೇಶಿಸಲಿದ್ದಾರೆ. ಈ ನಡಿಗೆ ಕಾಂಗ್ರೆಸ್ ರಾಜಕಾರಣದಲ್ಲಿ ಹಿಂದೆಂದೂ ಕಾಣದಿದ್ದ ಸಂತೋಷವನ್ನು ಕೊಟ್ಟಿದೆಯಂತಲ್ಲಾ. ನಡೆಯುವ ಮಾರ್ಗದ ಊರುಗಳ ಮಾಹಿತಿ ಪಡೆಯುತ್ತ, ಅಲ್ಲಿನ ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ರಾಹುಲಗಾಂಧಿ ಪಡೆಯುತ್ತ ಹೋಗುತ್ತಿರಬೇಕಾದರೆ ಈ ಬಗ್ಗೆ ಕಾಂಗ್ರೆಸ್ಸಿನ ರಾಜಕಾರಣಿಗಳನ್ನ ಅವರು ಕೇಳುತ್ತಿಲ್ಲವಂತಲ್ಲಾ. ರಾಹುಲಗಾಂಧಿ ಏನಾದರೂ ಪಾರ್ಟಿ ಸದಸ್ಯರಿಗೆ ಈ ಕೆಲಸ ವಹಿಸಿದ್ದಾದರೆ ಕಲೆ, ಸಾಹಿತ್ಯ, ಸಂಗೀತ, ಜಾನಪದದ ವಿಷಯದಲ್ಲಿ ಗಂಧಗಾಳಿಯಿಲ್ಲದ ಅವರು ತಮ್ಮ ಹತ್ತಿರದ ದೂರದ ಸಂಬಂಧಿಗಳನ್ನ ಕರೆಸಿ ರಾಹುಲಗಾಂಧಿ ಎದುರು ನಿಲ್ಲಿಸಿ ಫೋಟೊ ತೆಗೆಸಿಕೊಳ್ಳಬಲ್ಲರು ಎಂದು ಊಹಿಸಿದ್ದಾರಲ್ಲಾ. ಈ ಊಹೆ ರಾಹುಲಗಾಂಧಿಗೆ ಮೊದಲೇ ಹೊಳೆದು ಕಾಂಗೈ ರಾಜಕಾರಣದ ಆವರಣದಿಂದ ಹೊರಗಿರುವ ನಿಷ್ಠಾವಂತ ವ್ಯಕ್ತಿಗಳನ್ನು ನೇಮಿಸಿದ್ದಾರಂತಲ್ಲಾ. ಈ ನಡುವೆ ಮುಂದಿನ ಚುನಾವಣೆಗೆ ಹೇಳಿಕೊಂಡು ಹೋಗಲು ಯಾವ ಸಾಧನೆಯೂ ಇಲ್ಲದ ಬಿಜೆಪಿಯ ರಾಷ್ಟ್ರೀಯ ನಾಯಕರು ಭಾರತ ಜೋಡೋ ಯಾತ್ರೆ ವಿಫಲಗೊಳಿಸಲು ಪರಿಕರಗಳನ್ನು ತಯಾರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

******

ಮೋದಿಯವರು ಎಪ್ಪತ್ತು ವರ್ಷಗಳ ಹಿಂದೆಯೇ ಭಾರತದಿಂದ ಕಾಲ್ತೆಗೆದ ಚೀತಾಗಳನ್ನು ತರಿಸಿ ಅವುಗಳನ್ನು ಬೋನಿನಿಂದ ಹೊರಬಿಟ್ಟು ಕ್ಲಾಪ್ ತೆಗೆಯದೆ ಕ್ಯಾಮರಾ ಕ್ಲಿಕ್ಕಿಸಿದ್ದು ಭಾರತದಾದ್ಯಂತ ಸುದ್ದಿಯಾಗಿದ್ದು ಹಳೆ ವಿಷಯ. ಸಂಘಿಗಳ ಪ್ರಕಾರ ಮೋದಿ ಕ್ಯಾಮರ ಕ್ಲಿಕ್ಕಿಸಿಲ್ಲ ಚಿರತೆಗಳ ಫೋಟೊ ತೆಗೆಯುವ ಫೋಟೊಗಾಗಿ ಕ್ಯಾಮರ ಹಿಡಿದು ನಿಂತಿದ್ದರು. ಮಾಧ್ಯಮದವರು ಫೋಟೊ ತೆಗೆಯಲು ಪೋಸು ಕೊಡುವಾಗ ತಾವೇ ಫೋಟೊ ತೆಗೆವ ಅಗತ್ಯವಿಲ್ಲ ಎಂಬುದು ಅಜ್ಞಾನಿಗಳಿಗೆ ಅರಿವಾಗಬೇಕೆಂದು ಹೇಳಿರುವ ಬಿಜೆಪಿಗಳು ಈ ಬಗ್ಗೆ ದೇಶದ್ರೋಹದ ಕೇಸು ಹಾಕಲು ಇನ್ನೂ ರೆಡಿಯಾಗಿಲ್ಲವಂತಲ್ಲಾ. ಇದೇನಾದರಾಗಲಿ ನಮಗೆ ಕಿವಿ ಮತ್ತು ಕಣ್ಣು ಸರಿಯಾಗಿದ್ದು, ಅವನ್ನು ಸರಿಯಾಗಿ ತೆರೆದುಕೊಂಡರೆ, ನಮ್ಮ ನಡುವೆ ಹಿಂಡುಹಿಂಡಾಗಿ ಬದುಕಿದ್ದ ಕಾಗೆಯೇ ಕಣ್ಮರೆಯಾಗುತ್ತಿವೆಯಲ್ಲಾ. ಕೆಲವು ಊರುಗಳಲ್ಲಂತೂ ಇಲ್ಲವೇ ಇಲ್ಲ. ಸತ್ತವನಿಗೆ ಕೂಳು ಹಾಕುವಾಗ ಅದನ್ನು ತಿನ್ನಲು ಬರುತ್ತಿದ್ದ ಈ ಕಾಗೆಗಳು ಕಾಣೆಯಾಗುತ್ತಿರುವ ಬಗ್ಗೆ ಯಾವ ಪಕ್ಷಿ ತಜ್ಞನೂ ಬಾಯಿಬಿಟ್ಟಿಲ್ಲ. ಹೊಲದಲ್ಲಿ ಮನೆ ಮೇಲೆ ಎದುರಿನ ಮರದ ಮೇಲೆ ಕುಳಿತು ಕಾಕಾ ಎನ್ನುತ್ತಿದ್ದ ಕಾಗೆ ನಿರ್ನಾಮವಾದರೆ ಗತಿಯೇನು. ಪಕ್ಷಿ ತಜ್ಞರು ನಿಜವಾದ ಕಾರಣ ಹೇಳಿ ಎಚ್ಚರಿಸಬಲ್ಲರೆ? ಅದಕ್ಕಿಂತ ಕಾಗೆ ಕಣ್ಮರೆಯಾದರೆ ಕೋಗಿಲೆಯೂ ನಿರ್ನಾಮವಾಗುತ್ತವಲ್ಲಾ ಎನ್ನಲು ನೋವಾಗುತ್ತದೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...