Homeಮುಖಪುಟಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

- Advertisement -
- Advertisement -

ತಮಿಳುನಾಡಿನ ಕೊಯಮುತ್ತೂರಿನ ಜಿಲ್ಲೆಯ ಅಲಂದುರೈ ಸರ್ಕಾರಿ ಶಾಲೆಯಲ್ಲಿ ನಡೆದ ವೈದ್ಯಕೀಯ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಯಮತ್ತೂರಿನ ಪೆರೂರ್ ಮಹಿಳಾ ಠಾಣೆ (ಎಡಬ್ಲ್ಯುಪಿಎಸ್) ಪೊಲೀಸರು ಶುಕ್ರವಾರ (ಸೆ.6) ವೈದ್ಯರೊಬ್ಬರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಎನ್ ಮುರುಗಾನಂದಂ ಅವರ ಆದೇಶದ ಮೇರೆಗೆ ಆಯೋಜಿಸಿದ್ದ ಶಿಕ್ಷಣಾಧಿಕಾರಿಗಳು ಮತ್ತು ವಿದ್ಯಾರ್ಥಿಗಳ ನಡುವಿನ ಸಭೆಯಲ್ಲಿ ಲೈಂಗಿಕ ದೌರ್ಜನ್ಯದ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಾಲ್ಪಾರೈನ ಸರ್ಕಾರಿ ಕಾಲೇಜಿನ ನಾಲ್ವರು ಸಿಬ್ಬಂದಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈ ಹಿನ್ನೆಲೆ ರಾಜ್ಯಾದ್ಯಂತ ಶಿಕ್ಷಣಾಧಿಕಾರಿಗಳು ಮತ್ತು ವಿದ್ಯಾರ್ಥಿಗಳ ನಡುವಿನ ಸಭೆಗಳನ್ನು ಆಯೋಜಿಸುವಂತೆ ಆದೇಶಿಸಲಾಗಿತ್ತು.

ಬಂಧಿತ ವೈದ್ಯನನ್ನು ತಿರುಪತ್ತೂರು ಜಿಲ್ಲೆಯ 33 ವರ್ಷದ ಎಸ್ ಸರವಣಮೂರ್ತಿ ಎಂದು ಗುರುತಿಸಲಾಗಿದೆ. ಇವರು ಇಶಾ ಫೌಂಡೇಶನ್ ನಿರ್ವಹಿಸುವ ಸಂಚಾರಿ ವೈದ್ಯಕೀಯ ಘಟಕಗಳ ತಂಡದ ಭಾಗವಾಗಿದ್ದರು. ಈ ಘಟಕಗಳು ತಮ್ಮ ‘ಆಕ್ಷನ್ ಫಾರ್ ರೂರಲ್ ರಿಜುವೆನೇಶನ್’ ಕಾರ್ಯಕ್ರಮದ ಅಡಿಯಲ್ಲಿ ಕೊಯಮತ್ತೂರಿನಾದ್ಯಂತ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸುತ್ತಿವೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 4, ಬುಧವಾರದಂದು ಶಿಕ್ಷಣಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ 6 ರಿಂದ 10ನೇ ತರಗತಿಯ ಸುಮಾರು 12 ವಿದ್ಯಾರ್ಥಿನಿಯರು ವೈದ್ಯಕೀಯ ಶಿಬಿರಗಳಲ್ಲಿ ಸರವಣಮೂರ್ತಿ ಅವರು ಹೇಗೆ ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದರು ಎಂಬುವುದರ ಕುರಿತು ದೂರು ನೀಡಿದ್ದಾರೆ.

ಕೂಡಲೇ, ಶಾಲೆಯ ಆಡಳಿತ ಮಂಡಳಿ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಈ ಕುರಿತು ಮಾಹಿತಿ ನೀಡಿದೆ. ಸಿಡಬ್ಲ್ಯುಸಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ, ಪ್ರಕರಣವನ್ನು ಪೇರೂರ್ ಮಹಿಳಾ ಪೊಲೀಸರಿಗೆ ವರ್ಗಾಯಿಸಿದೆ.

ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಂತ್ರಸ್ತ್ರ ವಿದ್ಯಾರ್ಥಿನಿಯರಲ್ಲಿ ಪ್ರತಿಯೊಬ್ಬರನ್ನೂ ವೈಯಕ್ತಿಕವಾಗಿ ಮಾತನಾಡಿಸಿದ್ದಾರೆ. ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿದ ನಂತರ, ಆರೋಪಿ ವೈದ್ಯನ ವಿರುದ್ಧ ಸೆಕ್ಷನ್ 9 (ಇ) (ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯ ಆಡಳಿತ ಅಥವಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು) 10 (ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಪೋಕ್ಸೋ ಕಾಯ್ದೆಯ (ಲೈಂಗಿಕ ದೌರ್ಜನ್ಯ) ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಸದ್ಯ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಬೆನ್ನಲ್ಲೇ ಪ್ರಕಟಣೆ ಹೊರಡಿಸಿರುವ ಇಶಾ ಫೌಂಡೇಶನ್, “ಕೊಯಮತ್ತೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ನಮ್ಮ ಔಟ್ರೀಚ್ ಮೊಬೈಲ್ ವೈದ್ಯಕೀಯ ಸೇವೆಯ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬುವುದು ನಮ್ಮ ಗಮನಕ್ಕೆ ಬಂದಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಯಾವುದೇ ಅಪರಾಧ ಪ್ರಕರಣಗಳಲ್ಲಿ ಆರೋಪಿಯ ಮೇಲೆ ಇಶಾ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಪ್ರಸ್ತುತ ನಡೆಯುತ್ತಿರುವ ಪೊಲೀಸ್ ತನಿಖೆಗೆ ನಾವು ಸಹಕರಿಸುತ್ತಿದ್ದೇವೆ ಮತ್ತು ಕಾನೂನು ಮೂಲಕ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ : ಕುಸ್ತಿಪಟುಗಳ ಪ್ರತಿಭಟನೆ ನನ್ನ ವಿರುದ್ಧ ನಡೆಸಿದ ಪಿತೂರಿ ಎಂಬುದು ಸಾಬೀತಾಗಿದೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...