Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...