Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....