Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...