Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...