Homeಮುಖಪುಟಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

“ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ ಹೇಳಿದ್ದಾರೆ. ನನ್ನನ್ನು ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯದಂತೆ ವೈದ್ಯೆ ನರ್ಸ್‌ಗೆ ಸೂಚಿಸಿದರು” ಎಂದು ಜಾನ್ಪುರದ ಚಾಂದ್‌ವಾಕ್ ಮೂಲದ ಶಮಾ ಪರ್ವೀನ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.

“ಅವಳನ್ನು (ಗರ್ಭಿಣಿಯನ್ನು) ಶಸ್ತ್ರಚಿಕಿತ್ಸೆ ಕೋಣೆಗೆ ಕರೆತರಬೇಡಿ. ಆಕೆ ಮುಸ್ಲಿಂ, ನಾನು ಆಕೆಗೆ ಚಿಕಿತ್ಸೆ ನೀಡುವುದಿಲ್ಲ” ಎಂದು ವೈದ್ಯೆ ಹೇಳಿದರು ಎಂದು ಪರ್ವೀನ್ ಅವರ ಪತಿ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫರ್ವೀನ್ ಅವರ ಆರೋಪದ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಆರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ. ವೈದ್ಯರು ಮತ್ತು ಸಿಬ್ಬಂದಿಯಿಂದ ವಿವರಣೆ ಕೇಳಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮಹೇಂದ್ರ ಗುಪ್ತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಆರೋಪಗಳು ನಿಜವೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾದ ದಿನದಂದು ಆಸ್ಪತ್ರೆಯಲ್ಲಿ ನಾಲ್ಕರಿಂದ ಐದು ಮುಸ್ಲಿಂ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಮತ್ತು ಚಿಕಿತ್ಸೆ ಪಡೆದಿದ್ದಾರೆ ಎಂದು ಎಂದು ಗುಪ್ತಾ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಅನುಸರಿಸುತ್ತಿರುವ ವಿಭಜಕ ರಾಜಕೀಯ ಮತ್ತು ಕೋಮುವಾದದ ಪರಿಣಾಮವೇ ಇಂತಹ ಘಟನೆಗಳು ಎಂದು ವಿರೋಧ ಪಕ್ಷಗಳು ಭಾನುವಾರ (ಅ.5) ಆರೋಪಿಸಿವೆ.

“ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಇದು ವೃತ್ತಿಯ ನೀತಿಗೆ ವಿರುದ್ಧವಾಗಿದೆ. ಆಡಳಿತಾರೂಢ ಬಿಜೆಪಿಯ ನಿರಂತರ ದ್ವೇಷ ರಾಜಕಾರಣದಿಂದಾಗಿ ಸಮಾಜದಲ್ಲಿ ಆಳವಾಗಿ ಬೇರೂರಿರುವ ವಿಭಜನೆಯ ಪರಿಣಾಮ ಇದು. ಸರ್ಕಾರಿ ಯಂತ್ರವು ಅಲ್ಪಸಂಖ್ಯಾತರೊಂದಿಗೆ ತಾರತಮ್ಯ ಮತ್ತು ಕ್ರೌರ್ಯವನ್ನು ಮಾಡುತ್ತಿರುವಾಗ, ಅದು ಸಮಾಜವನ್ನು ಮತ್ತಷ್ಟು ವಿಭಜಿಸುತ್ತದೆ. ಒಂದೆಡೆ, ಫತೇಪುರದಲ್ಲಿ ಹಳೆಯ ಸಮಾಧಿಯನ್ನು ಧ್ವಂಸಗೊಳಿಸಲು, ಕನ್ವರ್ ಯಾತ್ರೆಯ ಸಮಯದಲ್ಲಿ ಅಂಗಡಿಗಳಿಗೆ ಹಾನಿ ಮಾಡಲು ಸಮಾಜ ವಿರೋಧಿ ಶಕ್ತಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಮತ್ತೊಂದೆಡೆ, ಉತ್ತರ ಪ್ರದೇಶದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ” ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಮತ್ತು ಗಾಝಿಪುರದ ಹಿರಿಯ ಲೋಕಸಭಾ ಸದಸ್ಯ ಅಫ್ಝಲ್ ಅನ್ಸಾರಿ, ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ವಿಡಿಯೋ ಬಗ್ಗೆ ತನಿಖೆ ನಡೆಸಬೇಕು. ಇದು ನಿಜವಾಗಿಯೂ ಸಂಭವಿಸಿದ್ದರೆ ಕಲ್ಪನೆಗೂ ಮೀರಿದ್ದು. ಏಕೆಂದರೆ ವೈದ್ಯರನ್ನು ಸಮಾಜದಲ್ಲಿ ಹೆಚ್ಚಿನ ಗೌರವದಿಂದ ಕಾಣಲಾಗುತ್ತದೆ ಮತ್ತು ರೋಗಿಗಳ ನಡುವೆ ತಾರತಮ್ಯ ಮಾಡಬಾರದು. ಆದರೆ, ಇದು ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ವಿಶಾಲ ಮಾದರಿಯ ಕಡೆಗೆ ಬೆರಳು ತೋರಿಸುತ್ತದೆ. ಗ್ರಾಮ ಸಭಾ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲು ಪತ್ರವನ್ನು, ವಿಶೇಷವಾಗಿ ಯಾದವ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನೀಡಲಾಗುತ್ತಿರುವುದನ್ನು ನಾವು ನೋಡಿದ್ದೇವೆ. ಮೇಲ್ಭಾಗದಲ್ಲಿರುವ ಜನರು ಸಮಾಜದ ಒಂದು ವರ್ಗದ ವಿರುದ್ಧ ವಿಷಪೂರಿತ ಭಾಷೆಯನ್ನು ಮಾತನಾಡುತ್ತಿದ್ದಾರೆ. ನ್ಯಾಯಾಂಗವು ಅಂತಹ ಭಾಷೆ ಮತ್ತು ನಿರ್ದಿಷ್ಟ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಸಹ ಅರಿತುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅನ್ಸಾರಿ ತಿಳಿಸಿದ್ದಾರೆ.

“ದೇವರ ಎರಡನೇ ರೂಪವೆಂದು ಪರಿಗಣಿಸಲ್ಪಟ್ಟ ವೈದ್ಯರು ಧರ್ಮ ಕೇಳಿ ಚಿಕಿತ್ಸೆ ನೀಡಲು ನಿರಾಕರಿಸಿದರು” ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಮೋದಿ ಮತ್ತು ಯೋಗಿಯವರ ಕನಸಿನ ನವ ಭಾರತ” ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಸಿಎಂ ಆದಿತ್ಯನಾಥ್ ಹರಡಿದ ದ್ವೇಷದ ಪರಿಣಾಮ ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...