Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

- Advertisement -
- Advertisement -

ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ‘ಏಕೈಕ ಆರೋಪಿ’ ಎಂದು ಸಾಬೀತುಪಡಿಸಲು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಡಿಎನ್‌ಎ ಮತ್ತು ರಕ್ತದ ಮಾದರಿಗಳು ಸೇರಿದಂತೆ 11 ಸಾಕ್ಷ್ಯಗಳನ್ನು ಪಟ್ಟಿ ಮಾಡಿದೆ.

ಸಂತ್ರಸ್ತೆಯ ದೇಹದಲ್ಲಿ ಆತನ ಡಿಎನ್‌ಎ ಇರುವಿಕೆ, ಚಿಕ್ಕ ಕೂದಲು, ಸಂತ್ರಸ್ತೆಯ ರಕ್ತದ ಕಲೆಗಳು, ಅವರ ದೇಹದ ಮೇಲಿನ ಗಾಯಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಅವರ ಮೊಬೈಲ್ ಫೋನ್ ಸ್ಥಳವನ್ನು ಕರೆ ವಿವರಗಳ ದಾಖಲೆಗಳ ಪ್ರಕಾರ ಸಂಗ್ರಹಿಸಿರುವ ಸಾಕ್ಷ್ಯಗಳನ್ನು ರಾಯ್ ವಿರುದ್ಧ ತನಿಖಾ ಸಂಸ್ಥೆ ಉಲ್ಲೇಖಿಸಿದೆ.

“ಬಲಿಪಶುವಿನ ಪ್ರತಿರೋಧ ಹಾಗೂ ಹೋರಾಟದಿಂದ ರಾಯ್ ಮೊಂಡಾದ ಬಲದ ಗಾಯಗಳನ್ನು ಅನುಭವಿಸಿದ್ದಾನೆ” ಎಂದು ಚಾರ್ಜ್ ಶೀಟ್ ಉಲ್ಲೇಖಿಸಿದೆ. ಆರೋಪಿ ರಾಯ್‌ನನ್ನು ಕೋಲ್ಕತ್ತಾ ಪೊಲೀಸರು ಆಗಸ್ಟ್ 10 ರಂದು ಬಂಧಿಸಿದ್ದರು.

“ಆಗಸ್ಟ್ 8 ಮತ್ತು 9 ರ ಮಧ್ಯರಾತ್ರಿಯ ಸಮಯದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಯ್ ಉಪಸ್ಥಿತಿ ಮತ್ತು ತುರ್ತು ಕಟ್ಟಡದ ಮೂರನೇ ಮಹಡಿಯಲ್ಲಿ ಅಪರಾಧದ ದೃಶ್ಯ ಇರುವುದು ಸಿಸಿಟಿವಿ ದೃಶ್ಯಗಳ ಮೂಲಕ ಸಾಬೀತಾಗಿದೆ. ಸಿಡಿಆರ್ ಪ್ರಕಾರ ಆತನ ಮೊಬೈಲ್ ಫೋನ್ ಇರುವ ಸ್ಥಳದ ಮೂಲಕ ಅವನ ಉಪಸ್ಥಿತಿಯು ಸಾಬೀತಾಗಿದೆ ಎಂದು ಸಿಬಿಐ ಚಾರ್ಜ್ ಶೀಟ್ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯು ಸೋಮವಾರ ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಮೃತ ಮಹಿಳೆ ‘ವಿ’ ಎಂದು ಉಲ್ಲೇಖಿಸಿದೆ.

ಶವಪರೀಕ್ಷೆಯ ಸಮಯದಲ್ಲಿ ‘ವಿ’ಯ ಮೃತ ದೇಹದಿಂದ ಪತ್ತೆಯಾದ ಡಿಎನ್‌ಎಯಲ್ಲಿ ಅವನ ಡಿಎನ್‌ಎ ಇದೆ. ಸ್ಥಳೀಯ ಪೋಲೀಸರು ವಶಪಡಿಸಿಕೊಂಡ ಜೀನ್ಸ್ ಮತ್ತು ಪಾದರಕ್ಷೆಗಳ ಮೇಲೆ ‘ವಿ’ ರಕ್ತದ ಕಲೆಗಳ ಇತ್ತು ಎಂಬ ಆಗಸ್ಟ್ 12 ರಂದು ಸ್ಥಳಿಯ ಪೊಲೀಸರು ಸಾಕ್ಷ್ಯವನ್ನು ಸಿಬಿಐ ಉಲ್ಲೇಖಿಸಿದೆ.

ಎಸ್‌ಒಸಿಯಿಂದ ಪತ್ತೆಯಾದ ಸಣ್ಣ ಕೂದಲು ಆರೋಪಿ ಸಂಜಯ್ ರಾಯ್‌ಗೆ ಹೊಂದಿಕೆಯಾಗಿದೆ ಎಂದು ಚಾರ್ಜ್‌ಶೀಟ್ ಹೇಳಿದೆ.

ಆಗಸ್ಟ್ 9 ರಂದು, 31 ವರ್ಷದ ಮಹಿಳಾ ವೈದ್ಯರ ಶವವನ್ನು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಪತ್ತೆಹಚ್ಚಲಾಯಿತು. ಕಲ್ಕತ್ತಾ ಹೈಕೋರ್ಟ್ ಆಗಸ್ಟ್ 13 ರಂದು ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು.

ವೈದ್ಯರಿಗೆ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಅಮರಣಾಂತ ಉಪವಾಹ ಸತ್ಯಾಗ್ರಹ ಮುಂದುವರಿಸಿದ್ದಾರೆ.

ಇದನ್ನೂ ಓದಿ; ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...