Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಪ್ರಕರಣ ಮುಚ್ಚಿಹಾಕಲು ಪೊಲೀಸರು ಲಂಚ ನೀಡಲು ಪ್ರಯತ್ನಿಸಿದ್ದರು: ಪೋಷಕರ ಆರೋಪ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಪ್ರಕರಣ ಮುಚ್ಚಿಹಾಕಲು ಪೊಲೀಸರು ಲಂಚ ನೀಡಲು ಪ್ರಯತ್ನಿಸಿದ್ದರು: ಪೋಷಕರ ಆರೋಪ

- Advertisement -
- Advertisement -

ಕಳೆದ ತಿಂಗಳು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯೆಯ ಕುಟುಂಬ ಸದಸ್ಯರು ಪ್ರತಿಭಟನಾ ನಿರತ ವೈದ್ಯರೊಂದಿಗೆ ಸೇರಿಕೊಂಡರು. “ಕೋಲ್ಕತ್ತಾ ಪೊಲೀಸರು ವೈದ್ಯರ ಶವವನ್ನು ಯದ್ವಾತದ್ವಾ ದಹನ ಮಾಡುವ ಮೂಲಕ ಪ್ರಕರಣವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಆಗಸ್ಟ್ 9 ರಂದು ತಮ್ಮ ಮಗಳ ಶವವನ್ನು ವಶಪಡಿಸಿಕೊಂಡ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಪೋಷಕರು, ಘಟನೆ ಬೆಳಕಿಗೆ ಬಂದ ನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಂಚ ನೀಡಲು ಪ್ರಯತ್ನಿಸಿದರು ಎಂದು ಆರೋಪಿಸಿದರು.

“ಪೊಲೀಸರು ಮೊದಲಿನಿಂದಲೂ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ ನೀಡಿದರು, ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ” ಎಂದು ಮೃತ ವೈದ್ಯರ ತಂದೆ ಹೇಳಿದರು.

ತಮ್ಮ ಮಗಳಿಗೆ ನ್ಯಾಯಕ್ಕಾಗಿ ಹೋರಾಡುತ್ತಿರುವ ಕಿರಿಯ ವೈದ್ಯರಿಗೆ ಬೆಂಬಲ ನೀಡಲು ಬುಧವಾರ ರಾತ್ರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇವೆ ಎಂದು ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿಯ ಪೋಷಕರು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದು, ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ವಲಯಗಳ ಜನರು ಒತ್ತಾಯಿಸಿದ್ದಾರೆ. ಕೋಲ್ಕತ್ತಾ ಪೊಲೀಸರು ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾದ ಆರೋಪದ ಮೇಲೆ ನಾಗರಿಕ ಸ್ವಯಂಸೇವಕನನ್ನು ಬಂಧಿಸಿದ್ದಾರೆ.

ಆಗಸ್ಟ್ ಎರಡನೇ ವಾರದಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ನಂತರ, ಆಸ್ಪತ್ರೆಯಲ್ಲಿ ನಡೆದ ಆರೋಪದ ಹಣಕಾಸು ಅವ್ಯವಹಾರಗಳ ತನಿಖೆಯನ್ನು ರಾಜ್ಯ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಕೇಂದ್ರ ಏಜೆನ್ಸಿಗೆ ವರ್ಗಾಯಿಸಲು ನ್ಯಾಯಾಲಯ ಆದೇಶಿಸಿತು.

ಸೋಮವಾರ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಸಿಬಿಐ ಸಂಸ್ಥೆಯಲ್ಲಿನ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಧಿಸಿದೆ.

ಇದನ್ನೂ ಓದಿ; ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದಲ್ಲಿ 13 ನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...