Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

- Advertisement -
- Advertisement -

ವೈದ್ಯೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ವೈದ್ಯರಿಗೆ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ  ಪಶ್ಚಿಮ ಬಂಗಾಳದ ಇತರ ನಾಲ್ಕು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ 100 ಕ್ಕೂ ಹೆಚ್ಚು ಹಿರಿಯ ವೈದ್ಯರು ಕಳೆದ ಇಂದು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಕಿರಿಯ ಸಹೋದ್ಯೋಗಿಗಳು ತಮ್ಮ ಸಹೋದ್ಯೋಗಿ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ಸಾಮೂಹಿಕ ರಾಜೀನಾಮೆ ನೀಡಿದ ಒಟ್ಟು ಹಿರಿಯ ವೈದ್ಯರ ಸಂಖ್ಯೆ 200 ದಾಟಿದೆ.

ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಕಲ್ಕತ್ತಾ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 50 ಹಿರಿಯ ವೈದ್ಯರು, ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 34 ವೈದ್ಯರು, ಸ್ಕೂಲ್ ಆಫ್ ಮೆಡಿಸಿನ್, ಸಾಗೋರ್ ದತ್ತಾ ಆಸ್ಪತ್ರೆಯಿಂದ 30 ಮತ್ತು ಜಲ್ಪೈಗುರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ 19 ಮಂದಿ ಇಂದು ರಾಜೀನಾಮೆ ನೀಡಿದ್ದಾರೆ.

ಹಿಂದಿನ ದಿನ, ಕಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 70 ಹಿರಿಯ ವೈದ್ಯರು ಮತ್ತು ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 40 ಮಂದಿ ತಮ್ಮ ಸಾಮೂಹಿಕ ರಾಜೀನಾಮೆಯನ್ನು ಸಲ್ಲಿಸಿದರು.

ರಾಜ್ಯದ ಇತರ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಂದ ಅಲ್ಲಿನ ಹಿರಿಯ ವೈದ್ಯರು ಮುಂದಿನ ಒಂದೆರಡು ದಿನಗಳಲ್ಲಿ ಇದೇ ರೀತಿಯ ಸಾಮೂಹಿಕ ರಾಜೀನಾಮೆಗೆ ನೀಡಲು ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಮಂಗಳವಾರ ಮಧ್ಯಾಹ್ನ ಸುಮಾರು 50 ಹಿರಿಯ ವೈದ್ಯರು ಆರ್.ಜಿ. ಕರ್ ಆಸ್ಪತ್ರೆ, ಅಲ್ಲಿನ ಅಧ್ಯಾಪಕರ ಪ್ರತಿನಿಧಿಗಳು ಸೇರಿದಂತೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

“ನಾವು ಇದೀಗ ಸಾಮೂಹಿಕ ರಾಜೀನಾಮೆ ನೀಡಿದ್ದೇವೆ, ರಾಜ್ಯ ಸರ್ಕಾರ ಬಯಸಿದರೆ, ನಾವು ನಂತರದ ಹಂತದಲ್ಲಿ ನಮ್ಮ ವೈಯಕ್ತಿಕ ರಾಜೀನಾಮೆಗಳನ್ನು ರವಾನಿಸುತ್ತೇವೆ. ಕೋಲ್ಕತ್ತಾದ ಕಿರಿಯ ವೈದ್ಯರಿಗೆ ಏನಾದರೂ ಸಂಭವಿಸಿದರೆ, ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ? ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುವ ಮುನ್ನ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ರಾಜೀನಾಮೆ ನೀಡಿದ ಹಿರಿಯ ವೈದ್ಯರು ತಿಳಿಸಿದ್ದಾರೆ.

ಶನಿವಾರ ಸಂಜೆಯಿಂದ ಸೆಂಟ್ರಲ್ ಕೋಲ್ಕತ್ತಾದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಏಳು ಕಿರಿಯ ವೈದ್ಯರ ಆರೋಗ್ಯದಲ್ಲಿ ಕ್ಷೀಣತೆಯ ಲಕ್ಷಣಗಳು ಕಂಡುಬರುತ್ತಿವೆ. ಬುಧವಾರ ಬೆಳಗ್ಗೆ ಹಿರಿಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು, ನಂತರ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆಯ ಹರಿವು ಪ್ರಾರಂಭವಾಯಿತು.

ಇದನ್ನೂ ಓದಿ; ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...