Homeಮುಖಪುಟಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

- Advertisement -
- Advertisement -

ಮಧ್ಯಪ್ರದೇಶದ ಇಂದೋರ್ ನಗರದ ವೈದ್ಯರೊಬ್ಬರು ಮಹಾರಾಷ್ಟ್ರದ ಮುಸ್ಲಿಂ ರೋಗಿಯೊಂದಿಗಿನ ಚಿಕಿತ್ಸೆಯನ್ನು ನಿರಾಕರಿಸುವ ಸಂಭಾಷಣೆಯನ್ನು ಹಂಚಿಕೊಂಡಿದ್ದಾರೆ. ವಿವಾದದ ಬಳಿಕ ಅವರು ತಮ್ಮ ಪೋಸ್ಟ್‌ ಅಳಿಸಿದ್ದಾರೆ.

“ಬೆನ್ನುಮೂಳೆಯ ತಜ್ಞ, ಯುಕೆ, ಪಿಸಿಒಡಿ ರಿವರ್ಸಲ್ ತಜ್ಞ, ಇಂಟಿಮೇಟ್ ಮಹಿಳಾ ಆರೋಗ್ಯ ತಜ್ಞೆ, ಕಾಸ್ಮೆಟಿಕ್ ಅಕ್ಯುಪಂಕ್ಚರಿಸ್ಟ್” ಎಂದು ವಿವರಿಸಲಾದ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಅನ್ನು ಹೊಂದಿರುವ ಡಾ. ನೇಹಾ ಅರೋರಾ ವರ್ಮಾ, ರೋಗಿಯು ತನ್ನ ಮೊಣಕಾಲು ನೋವಿನ ಬಗ್ಗೆ ಮಾತನಾಡುವ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ವರ್ಮಾ ರೋಗಿಯ ಹೆಸರನ್ನು ಕೇಳಿದ್ದು, ಅದಕ್ಕೆ ಅವರು ‘ಶ್ರೀಮತಿ ಫರಾ ಹುಸೇನ್’ ಎಂದು ಉತ್ತರಿಸುತ್ತಾರೆ.

“ಕ್ಷಮಿಸಿ, ನಾವು ಇನ್ನು ಮುಂದೆ ನಮ್ಮ ಕ್ಲಿನಿಕ್‌ನಲ್ಲಿ ಯಾವುದೇ ಮುಸ್ಲಿಂ ರೋಗಿಗಳನ್ನು ಸ್ವಾಗತಿಸುವುದಿಲ್ಲ. ನಿಮ್ಮ ಪ್ರದೇಶದಲ್ಲೇ ಉತ್ತಮ ವ್ಯಕ್ತಿಯನ್ನು ಕಂಡುಕೊಳ್ಳುತ್ತೀರಿ ಎಂದು ಭಾವಿಸುತ್ತೇವೆ” ಎಂದು ಉತ್ತರಿಸುತ್ತಾರೆ.

ನಾವು ಈ ಬದಲಾವಣೆಯನ್ನು ಪ್ರಾರಂಭಿಸಿದ್ದೇವೆ; ಅವರು ನಮ್ಮ ಧರ್ಮದ ಪ್ರಕಾರ ನಮ್ಮ ಜನರನ್ನು ಕೊಲ್ಲಬಹುದಾದಾಗ, ನಾವು ಈಗ ಧರ್ಮದ ಪ್ರಕಾರ ಚಿಕಿತ್ಸೆಯನ್ನು ನಿರಾಕರಿಸುತ್ತಿದ್ದೇವೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಡಾ. ನೇಹಾ ವರ್ಮಾ ಅರೋರಾ 52.6 ಸಾವಿರ ಇನ್‌ಸ್ಟಾಗ್ರಾಮ್ ಮತ್ತು 12 ಸಾವಿರ ಫೇಸ್‌ಬುಕ್ ಅನುಯಾಯಿಗಳನ್ನು ಹೊಂದಿದ್ದಾರೆ. ಮುಖ್ಯವಾಗಿ, ಆರೋಗ್ಯ ಮತ್ತು ಯೋಗಕ್ಷೇಮವನ್ನು ಒಳಗೊಂಡಿದೆ. ಅವರು ತಮ್ಮನ್ನು ಡಿಜಿಟಲ್ ಸೃಷ್ಟಿಕರ್ತೆ ಎಂದು ಕರೆದುಕೊಂಡಿದ್ದು, ಶ್ರೀ ನಮೋಹ್ ವೆಲ್ನೆಸ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ.

ಎರಡು ದಿನಗಳ ಹಿಂದೆ, ಏಳು ತಿಂಗಳ ಗರ್ಭಿಣಿ ಮುಸ್ಲಿಂ ಮಹಿಳೆಯನ್ನು ಅವರ ದೀರ್ಘಕಾಲದ ವೈದ್ಯರು ಅವರ ಧರ್ಮದ ಕಾರಣ ಅವಮಾನಿಸಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆಕೆಯ ಸಂಬಂಧಿ ಮೆಹ್ಫುಜಾ ಖಾತುನ್ ವರದಿ ಮಾಡಿದಂತೆ, ಆ ಮಹಿಳೆಯ ಪೂರ್ಣ ಹೆಸರನ್ನು ಖಚಿತಪಡಿಸಿಕೊಂಡಾಗ ವೈದ್ಯರ ವರ್ತನೆ ಇದ್ದಕ್ಕಿದ್ದಂತೆ ಬದಲಾಯಿತು. “ಮೊದಲ ಬಾರಿಗೆ, ಮುಸ್ಲಿಮರಾಗಿರುವುದರಿಂದ ನಾವು ಗುರಿಯಾಗಿದ್ದೇವೆ ಎಂದು ಭಾವಿಸಿದೆವು” ಎಂದು ಖಾತುನ್ ಅವರನ್ನು ಉಲ್ಲೇಖಿಸಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

ಚಿಕಿತ್ಸೆಗಾಗಿ ಮಸೀದಿ ಅಥವಾ ಮದರಸಾಕ್ಕೆ ಹೋಗುವಂತೆ ವೈದ್ಯರು ರೋಗಿದೆ ಹೇಳಿದರು. ರೋಗಿಯು ಭಯೋತ್ಪಾದನೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಹೇಳಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಿಸಬೇಕು: ಕೇಂದ್ರ ಸಚಿವ ಅಠಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...