Homeಕರೋನಾ ತಲ್ಲಣವೈದ್ಯ ಆತ್ಮಹತ್ಯೆ:‌ ಮೈಸೂರು ಜಿಲ್ಲಾ ಪಂಚಾಯಿತಿ‌ ಅಧಿಕಾರಿ ವಿರುದ್ಧ ಎಫ್‌ಐಆರ್

ವೈದ್ಯ ಆತ್ಮಹತ್ಯೆ:‌ ಮೈಸೂರು ಜಿಲ್ಲಾ ಪಂಚಾಯಿತಿ‌ ಅಧಿಕಾರಿ ವಿರುದ್ಧ ಎಫ್‌ಐಆರ್

ಸಹ ವೈದ್ಯರ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಾ ಎಸ್.ಆರ್.ನಾಗೇಂದ್ರ ತಮ್ಮ ಟಿಪ್ಪಣಿಯೊಂದರಲ್ಲಿ ಆರೋಪಿಸಿದ್ದಾರೆ. 

- Advertisement -
- Advertisement -

ಕೊರೊನಾ ವೈರಸ್ ಕರ್ತವ್ಯದಲ್ಲಿದ್ದ‌ ಮೈಸೂರು ಜಿಲ್ಲೆಯ ಸರ್ಕಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 20 ರಂದು ಮೈಸೂರು ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸಹ ವೈದ್ಯರ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಾ ಎಸ್.ಆರ್.ನಾಗೇಂದ್ರ ತಮ್ಮ ಟಿಪ್ಪಣಿಯೊಂದರಲ್ಲಿ ಆರೋಪಿಸಿದ್ದಾರೆ.

ನಂಜನಗೂಡು ತಾಲ್ಲೂಕಿನಲ್ಲಿ ಕೊರೊನಾ ವೈರಸ್ ಕ್ಷಿಪ್ರ ಆಂಟಿಜೆನ್ ಪರೀಕ್ಷೆಗಳನ್ನು ನಡೆಸುವ ಗುರಿಗಳನ್ನು ಪೂರೈಸಲು ಮಿಶ್ರಾ ವೈದ್ಯರ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲು ಕೋರಿ ಮೈಸೂರಿನ ವೈದ್ಯರು ಮುಷ್ಕರ ಆರಂಭಿಸಿದ್ದಾರೆ.

ಅಧಿಕಾರಿ ವೈದ್ಯರನ್ನು ನಿಂದಿಸಿದ್ದಾರೆ. ಈ ಅವಮಾನವನ್ನು ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಅವರು ಆರೋಪಿಸಿದರು.

ಆರೋಪಿಯನ್ನು ಪ್ರಶಾಂತ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದೆ. ಆಗಸ್ಟ್ 20 ರಂದು ನಂಜನ‌ಗೂಡು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆ ಸಾವಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿಯ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದಿಸುವ ಇಂತಹ ಯಾವುದೇ ಅಪರಾದಕ್ಕೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ನಾಗೇಂದ್ರ ಅವರ ತಂದೆ ರಾಮಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮಿಶ್ರಾ ಹಾಕಿದ ಒತ್ತಡದಿಂದಾಗಿ ತಮ್ಮ ಮಗ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತನಿಖೆಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಶುಕ್ರವಾರ ಆದೇಶಿಸಿದ್ದರು. ನಾಗೇಂದ್ರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ 50 ಲಕ್ಷ ರೂ.ಗಳ ಪರಿಹಾರ ಘೋಷಿಸಿ, ಏಳು ದಿನಗಳಲ್ಲಿ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಆದರೆ ಕೊರೊನಾ ವೈರಸ್ ಸಮಯದಲ್ಲಿ ಪ್ರತಿಭಟಿಸುವ ಮೂಲಕ ರೋಗಿಗಳನ್ನು ತೊಂದರೆಗೆ ಸಿಲುಕಿಸಬೇಡಿ” ಮುಷ್ಕರದಲ್ಲಿರುವ ವೈದ್ಯರಿಗೆ ಮತ್ತೆ ಕೆಲಸಕ್ಕೆ ಹೋಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವಿನಂತಿಸಿದರು.

ʼವೈದ್ಯ ನಾರಾಯಣೋ ಹರಿಹಿʼ [ವೈದ್ಯರು ದೇವರು] ಎಂಬ ಜನರ ನಂಬಿಕೆಗೆ ಅನುಗುಣವಾಗಿ ಮುಂದುವರಿಯಿರಿʼ ಎಂದೂ ಹೇಳಿದ್ದಾರೆ.

ಆದರೆ ಈ ಘಟನೆಯಿಂದ ಕರ್ನಾಟಕದ ವೈದ್ಯರು ತೀವ್ರ ತೊಂದರೆಗೀಡಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಎರಡು ದಿನಗಳ ಕಾಲ ಕಪ್ಪಪಟ್ಟಿ ಮತ್ತು ಮೇಣದಬತ್ತಿ ಹಚ್ಚಿ ಪ್ರತಿಭಟನೆ ಮಾಡುತ್ತೇವೆ ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ.ರಾಜನ್ ಶರ್ಮಾ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಆರ್.ವಿ.ಅಶೋಕನ್ ಪತ್ರದಲ್ಲಿ ತಿಳಿಸಿದ್ದಾರೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...