Homeಮುಖಪುಟಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

ಆರೋಪಿ ಡಾ.ಶೈಲಜಾ (39) ಕ್ಲಿನಿಕ್ ನಡೆಸುತ್ತಿದ್ದರು. ಕೆಲವು ಕಾರಣಗಳಿಂದಾಗಿ ಆಕೆಯ ಕ್ಲಿನಿಕ್‌ ತಿಂಗಳ ಹಿಂದೆ ಮುಚ್ಚಲ್ಪಟ್ಟಿತು. ನಿರುದ್ಯೋಗದಿಂದಾಗಿ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಬೆಂಗಳೂರು ಮೂಲದ ವೈದ್ಯೆಯೊಬ್ಬರು ತನ್ನ 8 ವರ್ಷದ ಮಗಳಿಗೆ ಆಹಾರ ನೀಡಲು ಸಾಧ್ಯವಾಗ ಕಾರಣಕ್ಕೆ ವಿಷವುಣಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ಅವಿನಾಶಿಯಲ್ಲಿ ಶುಕ್ರವಾರ ನಡೆದಿದೆ.

“ಆರೋಪಿ ಡಾ.ಶೈಲಜಾ (39) ಕ್ಲಿನಿಕ್ ನಡೆಸುತ್ತಿದ್ದರು. ಕೆಲವು ಕಾರಣಗಳಿಂದಾಗಿ ಆಕೆಯ ಕ್ಲಿನಿಕ್‌ ತಿಂಗಳ ಹಿಂದೆ ಮುಚ್ಚಲ್ಪಟ್ಟಿತು. ನಂತರ, ಆಕೆ ತನ್ನ ತಂದೆಯ ಮೇಲೆ ಅವಲಂಬಿತವಾಗಿ, ತಂದೆಯ ಪಿಂಚಣಿ ಹಣದಿಂದ ಬದುಕುತ್ತಿದ್ದರು. ನಿರುದ್ಯೋಗದಿಂದಾಗಿ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಹಾಗಾಗಿ ತನ್ನ ಮಗಳನ್ನು ಕೊಲ್ಲಲು ನಿರ್ಧರಿಸಿದರು” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಶೈಲಾಜಾ ಶುಕ್ರವಾರ, ತಿರುಪ್ಪೂರ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಸೆವೂರ್ ಬಳಿ ಇಳಿದು ಮಗಳಿಗೆ ಇಲಿ ಪಾಷಾಣವನ್ನು ಕೊಟ್ಟಿದ್ದರು. ಹಾಗಾಗಿ ಬಾಲಕಿ ಶೀಘ್ರದಲ್ಲೇ ಪ್ರಜ್ಞೆ ತಪ್ಪಿದಳು. ನಂತರ ಆಕೆ ಪ್ರಜ್ಞೆತಪ್ಪಿದ ಮಗಳನ್ನು ಹೊತ್ತೊಯ್ಯುವಾಗ ಸ್ಥಳೀಯರು ನೋಡುತ್ತಿದ್ದಂತೆ ಮಗುವನ್ನು ನೆಲಕ್ಕೆ ಎಸೆದು ಓಡಿಹೋದರು. ಆಘಾತಕ್ಕೊಳಗಾದ ನಿವಾಸಿಗಳು ಮಗುವನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

ಮಗುವಿನ ಸ್ಥಿತಿ ಗಂಭೀರವಾಗಿದ್ದರಿಂದ ಶುಕ್ರವಾರ ಸಂಜೆ ಕೊಯಮತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದರ ನಡುವೆ, ಶೈಲಜಾ ಸೆವೂರ್ ಬಸ್ ನಿಲ್ದಾಣದ ಬಳಿ ಅಲೆದಾಡುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

ವಿಚಾರಣೆ ವೇಳೆ ಮಾತನಾಡಿದ ಶೈಲಾಜಾ, “ತಂಜಾವೂರು ಮೂಲದ ಮುತ್ತುಸಾಮಿ (40) ಎಂಬಾತನನ್ನು ಮದುವೆಯಾಗಿದ್ದು, ತನ್ನ ಗಂಡ ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. 5 ವರ್ಷಗಳ ಹಿಂದೆ ನಮಗೆ ವಿಚ್ಚೇದನವಾಗಿತ್ತು” ಎಂದು ಹೇಳಿದ್ದಾರೆ.

“ಬಾಲಕಿಗೆ ಆಹಾರ ನೀಡಲು ಸಾಧ್ಯವಾಗದ ಕಾರಣ ಮಗುವನ್ನು ಕೊಲ್ಲಲು ಶೈಲಾಜಾ ನಿರ್ಧರಿಸಿದ್ದಳು. ಆಕೆಯ ಮಾನಸಿಕ ಸ್ಥಿತಿ ಅಸ್ಥಿರವಾಗಿದೆ. ಹಾಗಾಗಿ ಆಕೆಯನ್ನು ಅವಿನಾಶಿಯ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...