Homeಕರ್ನಾಟಕಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್...

ಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ವೈದ್ಯರು

- Advertisement -
- Advertisement -

ಬಾಲಕನೊಬ್ಬನ ಕುತ್ತಿಗೆ ಪಕ್ಕದಿಂದ ಎದೆಗೂಡಿನೊಳಗೆ ಹೊಕ್ಕಿದ್ದ ತೆಂಗಿನ ಗರಿಯ ದಿಂಡನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಚೇತರಿಸಿಕೊಂಡಿದ್ದಾನೆ.

ಬಹಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಬಾಲಕನ ಜೀವ ಉಳಿಸಿದ ಸರ್ಕಾರಿ ವೈದ್ಯರ ಕಾರ್ಯಕ್ಕೆ ಸರ್ಕಾರ ಮತ್ತು ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಡಿಕೇರಿಯಲ್ಲಿ ವಾಸವಿರುವ ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬದ ಕಮಲ್ ಹಸನ್ (12) ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ.

ಕಮಲ್ ಹಸನ್ ಶನಿವಾರ (ಫೆ. 8) ಸಂಜೆ 7 ಗಂಟೆಯ ಸುಮಾರಿಗೆ ಮನೆಯ ಮೆಟ್ಟಿಲ ಬಳಿ ನಿಂತಿದ್ದಾಗ ಮರದಿಂದ ಜಾರಿ ಬಿದ್ದ ತೆಂಗಿನ ಗರಿಯ ದಿಂಡು ಕುತ್ತಿಗೆ ಪಕ್ಕದಿಂದ ಎದೆಗೂಡಿನ ಒಳ ಹೊಕ್ಕಿದೆ. ಅದನ್ನು ತೆಗೆಯಲು ಮಡಿಕೇರಿ ಆಸ್ಪತ್ರೆಯ ವೈದ್ಯರು ನಿರಾಕರಿಸಿದ್ದರು. ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ತಕ್ಷಣ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಮಡಿಕೇರಿಯಿಂದ ಕಮಲ್ ಹಸನ್ ಅವರನ್ನು ಕರೆದುಕೊಂಡು ಬಂದ ಕುಟುಂಬಸ್ಥರು, ರಾತ್ರಿ 12.15ರ ಸುಮಾರಿಗೆ ಮಂಗಳೂರು ತಲುಪಿದ್ದರು. ಇಲ್ಲಿ ವೈದ್ಯರು ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಪ್ರಸ್ತುತ ಬಾಲಕನ ಆರೋಗ್ಯ ಸುಧಾರಿಸಿದೆ ಎಂದು ವರದಿಯಾಗಿದೆ.

ತೆಂಗಿನ ಗರಿಯ ದಿಂಡು ಬಿದ್ದ ರಭಸಕ್ಕೆ ಬಾಲಕನ ಕುತ್ತಿಗೆಯಲ್ಲಿದ್ದ ಸ್ಟೀಲ್ ಚೈನ್ ಕೂಡ ದೇಹದ ಒಳ ಹೊಕ್ಕಿತ್ತು. ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಹೋಗಿತ್ತು. ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕ ಇದೀಗ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಮತ್ತು ಡಿಎಂಒ ಡಾ. ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಬಹಳ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಈ ಶಸ್ತ್ರ ಚಿಕಿತ್ಸೆ ನಡೆಸಿದ್ದಿದ್ದರೆ 10 ಲಕ್ಷ ರೂಪಾಯಿ ತನಕ ಖರ್ಚಾಗುತ್ತಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ ಎಂದು ವೈದ್ಯರ ಸಾಧನೆಯನ್ನು ಡಿಎಂಒ ಡಾ.ಶಿವಪ್ರಕಾಶ್ ಶ್ಲಾಘಿಸಿದ್ದಾರೆ.

ಶೃಂಗೇರಿ | ಬಜರಂಗದಳ ಕಾರ್ಯಕರ್ತರಿಂದ ದರ್ಗಾಕ್ಕೆ ಬಂದಿದ್ದವರ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...