Homeಕರ್ನಾಟಕಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್...

ಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ವೈದ್ಯರು

- Advertisement -
- Advertisement -

ಬಾಲಕನೊಬ್ಬನ ಕುತ್ತಿಗೆ ಪಕ್ಕದಿಂದ ಎದೆಗೂಡಿನೊಳಗೆ ಹೊಕ್ಕಿದ್ದ ತೆಂಗಿನ ಗರಿಯ ದಿಂಡನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಚೇತರಿಸಿಕೊಂಡಿದ್ದಾನೆ.

ಬಹಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಬಾಲಕನ ಜೀವ ಉಳಿಸಿದ ಸರ್ಕಾರಿ ವೈದ್ಯರ ಕಾರ್ಯಕ್ಕೆ ಸರ್ಕಾರ ಮತ್ತು ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಡಿಕೇರಿಯಲ್ಲಿ ವಾಸವಿರುವ ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬದ ಕಮಲ್ ಹಸನ್ (12) ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ.

ಕಮಲ್ ಹಸನ್ ಶನಿವಾರ (ಫೆ. 8) ಸಂಜೆ 7 ಗಂಟೆಯ ಸುಮಾರಿಗೆ ಮನೆಯ ಮೆಟ್ಟಿಲ ಬಳಿ ನಿಂತಿದ್ದಾಗ ಮರದಿಂದ ಜಾರಿ ಬಿದ್ದ ತೆಂಗಿನ ಗರಿಯ ದಿಂಡು ಕುತ್ತಿಗೆ ಪಕ್ಕದಿಂದ ಎದೆಗೂಡಿನ ಒಳ ಹೊಕ್ಕಿದೆ. ಅದನ್ನು ತೆಗೆಯಲು ಮಡಿಕೇರಿ ಆಸ್ಪತ್ರೆಯ ವೈದ್ಯರು ನಿರಾಕರಿಸಿದ್ದರು. ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ತಕ್ಷಣ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಮಡಿಕೇರಿಯಿಂದ ಕಮಲ್ ಹಸನ್ ಅವರನ್ನು ಕರೆದುಕೊಂಡು ಬಂದ ಕುಟುಂಬಸ್ಥರು, ರಾತ್ರಿ 12.15ರ ಸುಮಾರಿಗೆ ಮಂಗಳೂರು ತಲುಪಿದ್ದರು. ಇಲ್ಲಿ ವೈದ್ಯರು ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಪ್ರಸ್ತುತ ಬಾಲಕನ ಆರೋಗ್ಯ ಸುಧಾರಿಸಿದೆ ಎಂದು ವರದಿಯಾಗಿದೆ.

ತೆಂಗಿನ ಗರಿಯ ದಿಂಡು ಬಿದ್ದ ರಭಸಕ್ಕೆ ಬಾಲಕನ ಕುತ್ತಿಗೆಯಲ್ಲಿದ್ದ ಸ್ಟೀಲ್ ಚೈನ್ ಕೂಡ ದೇಹದ ಒಳ ಹೊಕ್ಕಿತ್ತು. ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಹೋಗಿತ್ತು. ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕ ಇದೀಗ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಮತ್ತು ಡಿಎಂಒ ಡಾ. ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಬಹಳ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಈ ಶಸ್ತ್ರ ಚಿಕಿತ್ಸೆ ನಡೆಸಿದ್ದಿದ್ದರೆ 10 ಲಕ್ಷ ರೂಪಾಯಿ ತನಕ ಖರ್ಚಾಗುತ್ತಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ ಎಂದು ವೈದ್ಯರ ಸಾಧನೆಯನ್ನು ಡಿಎಂಒ ಡಾ.ಶಿವಪ್ರಕಾಶ್ ಶ್ಲಾಘಿಸಿದ್ದಾರೆ.

ಶೃಂಗೇರಿ | ಬಜರಂಗದಳ ಕಾರ್ಯಕರ್ತರಿಂದ ದರ್ಗಾಕ್ಕೆ ಬಂದಿದ್ದವರ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...