Homeಕರೋನಾ ತಲ್ಲಣಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

- Advertisement -
- Advertisement -

ತನಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮದೇವ್, ಯೂಟರ್ನ್ ಹೊಡೆದಿದ್ದು, ಶೀಘ್ರದಲ್ಲೇ ಕೊರೊನಾ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಜೊತೆಗೆ ಅಲೋಪತಿ ವೈದ್ಯರನ್ನು “ಭೂಮಿಯ ಮೇಲಿನ ದೇವದೂತರು” ಎಂದು ಹೊಗಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ವಿರುದ್ಧ ಅಲೋಪಥಿಕ್ ಔಷಧಿಗಳ ಪರಿಣಾಮಕಾರಿತ್ವದ ಕುರಿತು ರಾಮ್‌ದೇವ್ ಈ ಹಿಂದೆ ಅಭಿಪ್ರಾಯ ಹೊರಹಾಕಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವೈದ್ಯಕೀಯ ವಲಯ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತ್ತು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿರುವ ಬಾಬಾ ರಾಮದೇವ್ ಇದನ್ನು “ಐತಿಹಾಸಿಕ” ಹೆಜ್ಜೆ ಎಂದು ಬಣ್ಣಿಸಿದರು ಮತ್ತು ತಮ್ಮನ್ನು ತಾವು ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವಿ ಮಾಡಿದರು.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆಯಿರಿ. ಇದರ ಜೊತೆಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಪಡೆಯಿರಿ ಇದರಿಂದ ರಕ್ಷಣೆ ದೊರೆಯುತ್ತದೆ ಆಗ ಕೋವಿಡ್‌ನಿಂದ ಯಾವ ವ್ಯಕ್ತಿಯು ಸಾಯುವುದಿಲ್ಲ” ಎಂದಿದ್ದಾರೆ. ಶೀಘ್ರದಲ್ಲೇ ತಾವು ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.

ಅಲೋಪತಿ ವೈದ್ಯರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ರಾಮ್‌ದೇವ್, ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವೈದ್ಯರನ್ನು ಭೂಮಿಯ ಮೇಲಿನ ದೇವರ ದೂತರು ಎಂದು ಬಣ್ಣಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಯೊಂದಿಗೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿರುವ ಅವರು, ’ಯಾವುದೇ ಸಂಘಟನೆಯೊಂದಿಗೆ ದ್ವೇಷವಿಲ್ಲ. ಔಷಧಿಗಳ ಹೆಸರಿನಲ್ಲಿ ಜನರ ಮೇಲೆ ನಡೆಯುವ ಶೋಷಣೆಗೆ ನನ್ನ ವಿರೋಧ’ ಎಂದಿದ್ದಾರೆ.

ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಬಂದಾಗ, ಅಲೋಪತಿ ಉತ್ತಮವಾಗಿದೆ. ಇದರ ಬಗ್ಗೆ ಎರಡು ಅಭಿಪ್ರಾಯಗಳಿಲ್ಲ. ಆದರೆ, ಅನೇಕ ವೈದ್ಯರು ಅಗ್ಗದ ಜನರಿಕ್ ಔಷಧಿಗಳ ಬದಲಿಗೆ ದುಬಾರಿ ಔಷಧಿಗಳನ್ನು ಶಿಫಾರಸು ಮಾಡುತ್ತಿದ್ದ ಪ್ರವೃತ್ತಿಯಿಂದಾಗಿ ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಬೇಕಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...