Homeಕರೋನಾ ತಲ್ಲಣಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

- Advertisement -
- Advertisement -

ತನಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮದೇವ್, ಯೂಟರ್ನ್ ಹೊಡೆದಿದ್ದು, ಶೀಘ್ರದಲ್ಲೇ ಕೊರೊನಾ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಜೊತೆಗೆ ಅಲೋಪತಿ ವೈದ್ಯರನ್ನು “ಭೂಮಿಯ ಮೇಲಿನ ದೇವದೂತರು” ಎಂದು ಹೊಗಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ವಿರುದ್ಧ ಅಲೋಪಥಿಕ್ ಔಷಧಿಗಳ ಪರಿಣಾಮಕಾರಿತ್ವದ ಕುರಿತು ರಾಮ್‌ದೇವ್ ಈ ಹಿಂದೆ ಅಭಿಪ್ರಾಯ ಹೊರಹಾಕಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವೈದ್ಯಕೀಯ ವಲಯ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತ್ತು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿರುವ ಬಾಬಾ ರಾಮದೇವ್ ಇದನ್ನು “ಐತಿಹಾಸಿಕ” ಹೆಜ್ಜೆ ಎಂದು ಬಣ್ಣಿಸಿದರು ಮತ್ತು ತಮ್ಮನ್ನು ತಾವು ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವಿ ಮಾಡಿದರು.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆಯಿರಿ. ಇದರ ಜೊತೆಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಪಡೆಯಿರಿ ಇದರಿಂದ ರಕ್ಷಣೆ ದೊರೆಯುತ್ತದೆ ಆಗ ಕೋವಿಡ್‌ನಿಂದ ಯಾವ ವ್ಯಕ್ತಿಯು ಸಾಯುವುದಿಲ್ಲ” ಎಂದಿದ್ದಾರೆ. ಶೀಘ್ರದಲ್ಲೇ ತಾವು ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.

ಅಲೋಪತಿ ವೈದ್ಯರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ರಾಮ್‌ದೇವ್, ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವೈದ್ಯರನ್ನು ಭೂಮಿಯ ಮೇಲಿನ ದೇವರ ದೂತರು ಎಂದು ಬಣ್ಣಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಯೊಂದಿಗೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿರುವ ಅವರು, ’ಯಾವುದೇ ಸಂಘಟನೆಯೊಂದಿಗೆ ದ್ವೇಷವಿಲ್ಲ. ಔಷಧಿಗಳ ಹೆಸರಿನಲ್ಲಿ ಜನರ ಮೇಲೆ ನಡೆಯುವ ಶೋಷಣೆಗೆ ನನ್ನ ವಿರೋಧ’ ಎಂದಿದ್ದಾರೆ.

ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಬಂದಾಗ, ಅಲೋಪತಿ ಉತ್ತಮವಾಗಿದೆ. ಇದರ ಬಗ್ಗೆ ಎರಡು ಅಭಿಪ್ರಾಯಗಳಿಲ್ಲ. ಆದರೆ, ಅನೇಕ ವೈದ್ಯರು ಅಗ್ಗದ ಜನರಿಕ್ ಔಷಧಿಗಳ ಬದಲಿಗೆ ದುಬಾರಿ ಔಷಧಿಗಳನ್ನು ಶಿಫಾರಸು ಮಾಡುತ್ತಿದ್ದ ಪ್ರವೃತ್ತಿಯಿಂದಾಗಿ ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಬೇಕಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....