Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...