Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...