Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....